ಬ್ರೇಕಿಂಗ್ ನ್ಯೂಸ್
11-11-21 09:55 pm Mangaluru Correspondent ಕರಾವಳಿ
ಉಳ್ಳಾಲ, ನ.11: ನ.13 ರಂದು ಕುತ್ತಾರು ಶ್ರೀ ರಾಜರಾಜೇಶ್ವರಿ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ 5.30ರಿಂದ ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸಂಗಮ-ದೀಪಾವಳಿ ಸಂಭ್ರಮ 2021 ಗೂಡುದೀಪ ಸ್ಫರ್ಧೆ ನಡೆಯಲಿದೆ.
ತೊಕ್ಕೊಟ್ಟಿನ ಸುವರ್ಣ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟ್ಟು ಈ ಬಗ್ಗೆ ಮಾಹಿತಿ ನೀಡಿದರು. ಭಗತ್ ಸಿಂಗ್ ಸೇವಾ ಪ್ರತಿಷ್ಠಾನವು ಕಳೆದ ಹದಿನಾಲ್ಕು ವರ್ಷಗಳಿಂದ ನಿರಂತರ ಸಾಮಾಜಿಕ ಚಟುವಟಿಕೆಯಲ್ಲಿರುವ ಸಂಘಟನೆಯಾಗಿದೆ. ಗೂಡುದೀಪ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ, ಆಧುನಿಕ ಮತ್ತು ಪ್ರತಿಕೃತಿ ಎಂಬ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು ಪ್ರಥಮ, ದ್ವಿತೀಯ, ತೃತೀಯ ನಗದು ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುತ್ತಿದೆ ಎಂದರು.
ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಅಧ್ಯಕ್ಷತೆ ವಹಿಸಲಿದ್ದು ಸಮಾಜ ಸೇವಕ, ಮಹಾನಗರಪಾಲಿಕೆ ಸದಸ್ಯ ಗಣೇಶ್ ಕುಲಾಲ್ ಅವರಿಗೆ ಭಗತ್ ಸಿಂಗ್ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಈಗಾಗಲೇ ಪ್ರತಿಷ್ಠಾನದ ವತಿಯಿಂದ ಭಗತ್ ಸಿಂಗ್ ಜನ್ಮದಿನಾಚರಣೆ, ಭಗತ್ ಸಿಂಗ್ ಹುತಾತ್ಮ ದಿನಾಚರಣೆ, ಬಣ್ಣದ ಅಂಗಳ ಡ್ರಾಯಿಂಗ್ ಕಾಂಪಿಟೇಷನ್, ಗಾನಂ ವೇಷಂ, ಗುರುವಂದನೆ, ವೃಕ್ಷಾಂಕುರ, ಮನೆಗೊಂದು ಗಿಡ ಕೊಡುವ ಕಾರ್ಯಕ್ರಮ ನಡೆಸಲಾಗುತ್ತಿದ್ದು ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದರು.
ಪ್ರತಿಷ್ಠಾನದ ಗೌರವ ಸಲಹೆಗಾರರಾದ ಆನಂದ ಕೆ. ಅಸೈಗೋಳಿ, ಪ್ರಮುಖರಾದ ಹರೀಶ್ ಅಂಬ್ಲಮೊಗರು, ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ಸಂಚಾಲಕ ಮೋಹನ್ ಸಾಲಿಯಾನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Thokottu Bhagat Singh program to be held on Nov 13th with Deepavali celebrations.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm