ಬ್ರೇಕಿಂಗ್ ನ್ಯೂಸ್
12-11-21 04:29 pm Mangaluru correspondent ಕರಾವಳಿ
ಮಂಗಳೂರು, ನ.12: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ನಗರದ ಕಂಕನಾಡಿಯಲ್ಲಿ ಕಂಡುಬಂದಿದ್ದು ಕದ್ರಿ ಪೊಲೀಸರು ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ.
ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ ಕೊಟ್ಟಾರಿ (44) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿಯ ಬೈಪಾಸ್ ರಸ್ತೆಯ ಬದಿ ಕಾರು ನಿಲ್ಲಿಸಿ, ಅದರೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಾರ್ವಜನಿಕರು ಕಾರನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪ್ರಶಾಂತ್ ಕುಡಿತದ ಚಟ ಹೊಂದಿದ್ದು ದೈಹಿಕ ಅನಾರೋಗ್ಯ ಹೊಂದಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಪ್ರಶಾಂತ್ ವೈದ್ಯರ ಬಳಿ ತಪಾಸಣೆಗೆ ಹೋಗಿದ್ದರು. ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮನೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿ 50 ಸಾವಿರ ಹಣದ ಜೊತೆಗೆ ನಿನ್ನೆ ಸಂಜೆ ಕಾರಿನಲ್ಲಿ ತೆರಳಿದ್ದರು. ರಾತ್ರಿ ಮನೆಗೆ ಬಂದಿರಲಿಲ್ಲ.
ಆದರೆ ಇಂದು ತನ್ನ ಇಕೋ ಸ್ಪೋರ್ಟ್ ಕಾರಿನ ಒಳಗೇ ಪ್ರಶಾಂತ್ ಶವವಾಗಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಹೃದಯಾಘಾತದಿಂದ ಸಾವು ಕಂಡಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಬಗ್ಗೆ ಮಾಹಿತಿ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಎಸಿ ಹಾಕಿ, ಗ್ಲಾಸ್ ಬಂದ್ ಮಾಡಿ ಮಲಗಿದ್ದ ಬಳಿಕ ಕಾರು ರಾತ್ರಿ ವೇಳೆ ಆಫ್ ಆಗಿದ್ದರೂ ಉಸಿರುಗಟ್ಟಿ ಸಾವು ಸಂಭವಿಸಬಹುದು ಎನ್ನುತ್ತಾರೆ, ಪೊಲೀಸರು.
A 44-year-old man was found dead in car here on Friday November 12 near Kankanady circle in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm