ಬ್ರೇಕಿಂಗ್ ನ್ಯೂಸ್
12-11-21 04:29 pm Mangaluru correspondent ಕರಾವಳಿ
ಮಂಗಳೂರು, ನ.12: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ನಗರದ ಕಂಕನಾಡಿಯಲ್ಲಿ ಕಂಡುಬಂದಿದ್ದು ಕದ್ರಿ ಪೊಲೀಸರು ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ.
ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ ಕೊಟ್ಟಾರಿ (44) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿಯ ಬೈಪಾಸ್ ರಸ್ತೆಯ ಬದಿ ಕಾರು ನಿಲ್ಲಿಸಿ, ಅದರೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಾರ್ವಜನಿಕರು ಕಾರನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪ್ರಶಾಂತ್ ಕುಡಿತದ ಚಟ ಹೊಂದಿದ್ದು ದೈಹಿಕ ಅನಾರೋಗ್ಯ ಹೊಂದಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಪ್ರಶಾಂತ್ ವೈದ್ಯರ ಬಳಿ ತಪಾಸಣೆಗೆ ಹೋಗಿದ್ದರು. ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮನೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿ 50 ಸಾವಿರ ಹಣದ ಜೊತೆಗೆ ನಿನ್ನೆ ಸಂಜೆ ಕಾರಿನಲ್ಲಿ ತೆರಳಿದ್ದರು. ರಾತ್ರಿ ಮನೆಗೆ ಬಂದಿರಲಿಲ್ಲ.
ಆದರೆ ಇಂದು ತನ್ನ ಇಕೋ ಸ್ಪೋರ್ಟ್ ಕಾರಿನ ಒಳಗೇ ಪ್ರಶಾಂತ್ ಶವವಾಗಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಹೃದಯಾಘಾತದಿಂದ ಸಾವು ಕಂಡಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಬಗ್ಗೆ ಮಾಹಿತಿ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಎಸಿ ಹಾಕಿ, ಗ್ಲಾಸ್ ಬಂದ್ ಮಾಡಿ ಮಲಗಿದ್ದ ಬಳಿಕ ಕಾರು ರಾತ್ರಿ ವೇಳೆ ಆಫ್ ಆಗಿದ್ದರೂ ಉಸಿರುಗಟ್ಟಿ ಸಾವು ಸಂಭವಿಸಬಹುದು ಎನ್ನುತ್ತಾರೆ, ಪೊಲೀಸರು.
A 44-year-old man was found dead in car here on Friday November 12 near Kankanady circle in Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm