ಬ್ರೇಕಿಂಗ್ ನ್ಯೂಸ್
12-11-21 08:47 pm Mangaluru Corespondent ಕರಾವಳಿ
ಬೆಳ್ತಂಗಡಿ, ನ.12: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ನುಗ್ಗಿ 12 ಲಕ್ಷ ರೂ. ಮೌಲ್ಯದ ಸುಮಾರು 320 ಗ್ರಾಮ್ ಚಿನ್ನಾಭರಣವನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅ.31 ರಂದು ಇಂದಬೆಟ್ಟು ಗ್ರಾಮದ ಮಹಮ್ಮದ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಕಳವು ಕೃತ್ಯ ನಡೆಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕೃತ್ಯ ಎಸಗಿದ್ದರು. ಕಪಾಟಿನಲ್ಲಿ ಇರಿಸಿದ್ದ 13 ಪವನ್ ತೂಕದ ಚಿನ್ನದ ನೆಕ್ಲೆಸ್, ಒಂದು ಪವನ್ ತೂಕದ ಎರಡು ಚಿನ್ನದ ಚೈನ್, ತಲಾ ಒಂದು ಪವನ್ ತೂಕದ ನಾಲ್ಕು ಚಿನ್ನದ ಕಾಯಿನ್, ತಲಾ ನಾಲ್ಕು ಪವನ್ ತೂಕದ ನಾಲ್ಕು ಚಿನ್ನದ ಬಿಸ್ಕೆಟ್, ಎರಡು ಪವನ್ ತೂಕದ ಚಿನ್ನದ ಗಟ್ಟಿ ಸೇರಿದಂತೆ ವಿವಿಧ ಮಾದರಿಯ ಒಟ್ಟು 12.5 ಲಕ್ಷ ಮೌಲ್ಯದ ಚಿನ್ನಾಭರಣಗಳು ಕಳವಾಗಿದ್ದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, 5200 ರೂ. ನಗದು ಕಳವಾದ ಬಗ್ಗೆಯೂ ಮಾಹಿತಿ ನೀಡಲಾಗಿತ್ತು.



ಪ್ರಕರಣದ ಪತ್ತೆಗಾಗಿ ಬೆಳ್ತಂಗಡಿ ಇನ್ ಸ್ಪೆಕ್ಟರ್ ಶಿವಕುಮಾರ್ ಬಿ., ಪಿಎಸ್ಐ ನಂದ ಕುಮಾರ್, ಪಿಎಸ್ಐ ಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು ಮೂವರನ್ನು ಬಂಧಿಸಲಾಗಿದೆ. ನಾವೂರು ಗ್ರಾಮದ ಮಹಮ್ಮದ್ ಸ್ವಾಲಿ (26), ಲಾಯ್ಲ ಗ್ರಾಮದ ಯಾಹ್ಯಾ(32), ನಾವೂರು ಗ್ರಾಮದ ಬಿ.ಎಚ್. ನೌಫಲ್ (27) ಬಂಧಿತರು. ಕೃತ್ಯಕ್ಕೆ ಉಪಯೋಗಿಸಿದ ಆಲ್ಟೋ ಕಾರು, ಪಲ್ಸರ್ ಬೈಕ್, ನಾಲ್ಕು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಕಳವುಗೈದಿದ್ದ 12.5 ಲಕ್ಷ ಮೌಲ್ಯದ 320 ಗ್ರಾಮ್ ಚಿನ್ನಾಭರಣ, ನಗದು 1230 ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ನಡೆದು ಒಂದೇ ವಾರದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. ಮನೆಯಲ್ಲಿ ಚಿನ್ನ ಇಟ್ಟಿರುವ ವಿಚಾರ ತಿಳಿದಿದ್ದವರೇ ಸಂಚು ನಡೆಸಿ ಕಳವು ಕೃತ್ಯ ಎಸಗಿದ್ದರು.
320 gram of God Biscuit stolen from home three arrested by a week by Belthangady police
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm