ಬ್ರೇಕಿಂಗ್ ನ್ಯೂಸ್
17-11-21 12:54 pm Mangaluru Correspondent ಕರಾವಳಿ
ಉಡುಪಿ, ನ.17: ಪಡುಬಿದ್ರಿ ಪೇಟೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಾಲಕೃಷ್ಣ ಭಟ್ (74) ಎಂಬವರು ಮೃತಪಟ್ಟಿದ್ದಾರೆ. ಏಕಮುಖ ಸಂಚಾರದ ರಸ್ತೆಯಲ್ಲಿ ಸ್ಕೂಟರಿನಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ಧಾವಂತದಿಂದ ಬಂದ ಕಾರು ಡಿಕ್ಕಿಯಾಗಿದ್ದು, ಸ್ಕೂಟರ್ ಮತ್ತು ಅದರಲ್ಲಿದ್ದ ಸವಾರ 25 ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.
ಪಡುಬಿದ್ರಿಯ ಕೆಳಗಿನ ಪೇಟೆಯಲ್ಲಿ ಘಟನೆ ನಡೆದಿದೆ. ಹೊರ ರಸ್ತೆಯಿಂದ ಸ್ಕೂಟರಿನಲ್ಲಿ ಬಂದಿದ್ದ ಬಾಲಕೃಷ್ಣ ಭಟ್, ಹೈವೇ ರಸ್ತೆಗೆ ಬಂದು ಡಿವೈಡರ್ ದಾಟಿ ಮತ್ತೊಂದು ರಸ್ತೆ ಸೇರುವಲ್ಲಿ ಹಿಂದಿನಿಂದ ಅತಿ ವೇಗದಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ವೇಗದಿಂದ ಬರುತ್ತಿದ್ದ ಕಾರನ್ನು ನೋಡದೆ ರಸ್ತೆ ದಾಟಲು ಹೋಗಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಹೆಜಮಾಡಿಯತ್ತ ಹೋಗುತ್ತಿದ್ದ ಕಾರು ನೇರವಾಗಿ ಸ್ಕೂಟರಿಗೆ ಡಿಕ್ಕಿಯಾಗಿದ್ದರಿಂದ ಅದರ ರಭಸಕ್ಕೆ ಸವಾರ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ರಸ್ತೆಗೆ ಬಿದ್ದ ಕಾರಣ ತಲೆಗೆ ತೀವ್ರ ಪೆಟ್ಟಾಗಿದ್ದು, ಕೂಡಲೇ ಬಾಲಕೃಷ್ಣ ಭಟ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ಒಯ್ಯಲಾಗಿದೆ.
ಆದರೆ ಅಷ್ಟರಲ್ಲೇ ಬಾಲಕೃಷ್ಣ ಭಟ್ ಸಾವು ಕಂಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡು, ಪಡುಬಿದ್ರಿಯಲ್ಲಿ ಹೊಟಲೇ ಮ್ಯಾನೇಜರ್ ಆಗಿದ್ದ ಬಾಲಕೃಷ್ಣ ಭಟ್, ಆನಂತರ ಪಡುಬಿದ್ರಿಯಲ್ಲೇ ನೆಲೆಸಿದ್ದರು. ಪಾದೆಬೆಟ್ಟು ಬ್ರಾಹ್ಮಣರ ಸಂಘದಲ್ಲಿ ಸಕ್ರಿಯವಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.
Balakrishna Bhat (74), a resident of Padebettu, who was riding scooter towards Mangaluru on the one-way lane was killed after a speeding car following him rammed into his vehicle in the rear. The accident happened at the highway bend at Kelagina Pete, Padubidri on Tuesday November16.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm