ಬ್ರೇಕಿಂಗ್ ನ್ಯೂಸ್
            
                        12-09-20 06:31 pm Mangaluru Correspondant ಕರಾವಳಿ
            ಮಂಗಳೂರು, ಸೆಪ್ಟಂಬರ್ 12: ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ನಟಿಯರು ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಹಬ್ ಆಗಿರುವ ಮಂಗಳೂರಿನಲ್ಲಿಯೂ ಪೊಲೀಸರು ನಿಗಾ ವಹಿಸಬೇಕು. ಇಲ್ಲಿನ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದೊಡ್ಡ ಮಟ್ಟದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ. ಇದನ್ನು ಮಟ್ಟ ಹಾಕಲು ಯಾವುದೇ ರಾಜಕೀಯ ಒತ್ತಡಗಳಿಗೆ ಒಳಗಾಗದೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಎಬಿವಿಪಿ ವತಿಯಿಂದ ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ್ದ ಡಿಜಿಪಿ ಪ್ರವೀಣ್ ಸೂದ್ ಗೆ ಮನವಿ ನೀಡಲಾಗಿದೆ.

ಡ್ರಗ್ಸ್ ದಂಧೆ ಮಟ್ಟ ಹಾಕಲು ಮನವಿ ಪತ್ರದಲ್ಲಿ ಕೆಲವೊಂದು ಸಲಹೆಗಳನ್ನೂ ನೀಡಲಾಗಿದೆ. ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕಾಲೇಜು ಕ್ಯಾಂಪಸ್ ಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಅಲ್ಲದೆ ಅಪರಾಧ ಮಾಹಿತಿಯುಳ್ಳ ಕರಪತ್ರಗಳನ್ನು ಕಾಲೇಜುಗಳಲ್ಲಿ ಅಂಟಿಸಬೇಕು. ಕಾಲೇಜು ಕ್ಯಾಂಪಸ್ ಬಳಿ ಇರುವ ಪಾನ್ ಶಾಪ್, ಜೆರಾಕ್ಸ್ ಶಾಪ್, ಹೊಟೇಲ್, ಜ್ಯೂಸ್ ಸೆಂಟರ್ ಗಳ ಮೇಲೆ ನಿಗಾ ಇಡಬೇಕು. ನಗರದಲ್ಲಿರುವ ಸರಕಾರಿ, ಖಾಸಗಿ ಹಾಸ್ಟೆಲ್ ಗಳು, ಪಿ.ಜಿ.ಗಳ ಬಗ್ಗೆ ಮಾಹಿತಿ ಪಡೆದು ಅಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಕಾಲೇಜು ಕ್ಯಾಂಪಸ್ ಸುತ್ತಮುತ್ತ ದಿನದಲ್ಲಿ ಒಂದು ಬಾರಿಯಾದ್ರೂ ಪೊಲೀಸರು ಗಸ್ತು ತಿರುಗಬೇಕು. ಈಗಾಗಲೇ ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಬೇಕು. ಒಂದು ವೇಳೆ ವಿದ್ಯಾರ್ಥಿಗಳು ಸಿಕ್ಕಿಬಿದ್ದರೆ ಅಂಥ ವಿದ್ಯಾರ್ಥಿಗಳಿಗೆ ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ಕೌನ್ಸೆಲಿಂಗ್ ಮಾಡಬೇಕು. ಎಂಬಿತ್ಯಾದಿ ಸಲಹೆ, ಒತ್ತಾಯಗಳನ್ನು ಮನವಿಯಲ್ಲಿ ಮಾಡಲಾಗಿದೆ.
ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಆಶಿಶ್ ಅಜ್ಜಿಬೆಟ್ಟು ಹಾಗೂ ಮಂಗಳೂರು ನಗರ ಸಹ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಮನವಿಯನ್ನು ಡಿಜಿಪಿ ಪ್ರವೀಣ್ ಸೂದ್ ಮತ್ತು ಮಂಗಳೂರು ಕಮಿಷನರ್ ವಿಕಾಸ್ ಕುಮಾರ್ ಅವರಿಗೆ ನೀಡಿದ್ದಾರೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm