ಬ್ರೇಕಿಂಗ್ ನ್ಯೂಸ್
19-11-21 07:19 pm Mangaluru correspondent ಕರಾವಳಿ
ಮಂಗಳೂರು, ನ.19: ವಿಧಾನ ಪರಿಷತ್ ಚುನಾವಣೆಗೆ ಸಹಕಾರಿ ಧುರೀಣ ರಾಜೇಂದ್ರ ಕುಮಾರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ರಾಜೇಂದ್ರ ಕುಮಾರ್ ವಿರುದ್ಧ ಮೊದಲ ಬಾರಿಗೆ ದನಿ ಎತ್ತಿದ್ದಾರೆ.
ಮಂಗಳೂರು ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ವಿರುದ್ಧ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ನೇರ ವಾಗ್ದಾಳಿ ನಡೆಸಿದ್ದಾರೆ.
ಎಸ್ ಸಿ ಡಿ ಸಿ ಸಿ ಬ್ಯಾಂಕ್ ಆಸ್ತಿಯನ್ನು ದುರುಪಯೋಗ ಮಾಡಲಾಗುತ್ತಿದೆ. ಸಹಕಾರಿ ಬ್ಯಾಂಕುಗಳ ಹಣವನ್ನು ದುರುಪಯೋಗ ಪಡಿಸಲಾಗುತ್ತಿದೆ. ಅಕ್ರಮ ಎಸಗಲಾಗುತ್ತಿದೆ ಎಂದು ಆರೋಪಿಸಿದ ಸಚಿವ ಸೋಮಶೇಖರ್, ರಾಜೇಂದ್ರ ಕುಮಾರ್ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.

ನವೋದಯ ಟ್ರಸ್ಟ್ ಸ್ಥಾಪನೆ ಮಾಡಿರುವುದಕ್ಕೆ ಆಕ್ಷೇಪ ಇಲ್ಲ. ಆದರೆ ನವೋದಯ ಟ್ರಸ್ಟ್ ಹೆಸರಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕಿನಿಂದ ಹಣ ರವಾನೆ ಮಾಡುತ್ತಿರುವುದು ಕಾನೂನು ಬಾಹಿರ. ಈ ರೀತಿಯ ಕಾನೂನು ಬಾಹಿರ ಚಟುವಟಿಕೆಗೆ ಡಿಸಿಸಿ ಬ್ಯಾಂಕನ್ನು ಬಳಸುತ್ತಿರುವುದು ಅಕ್ಷಮ್ಯ. ಎಸ್ ಸಿ ಡಿ ಸಿ ಸಿ ಬ್ಯಾಂಕಿನಿಂದ 19 ಲಕ್ಷ ರೂಪಾಯಿ ಹಣವನ್ನು ಪ್ರತಿ ತಿಂಗಳು ನವೋದಯ ಟ್ರಸ್ಟ್ ಗೆ ಕಾನೂನು ಬಾಹಿರವಾಗಿ ನೀಡಲಾಗುತ್ತಿದೆ. ಬ್ಯಾಂಕ್ ಅಧ್ಯಕ್ಷರ ಅಕ್ರಮಕ್ಕೆ ಸಹಕಾರಿ ಇಲಾಖೆಯ ಅಧಿಕಾರಿಗಳು ಸಹಕರಿಸುತ್ತಿದ್ದಾರೆ. ಅಕ್ರಮ ಆಗುತ್ತಿದ್ದರೂ ಅಧಿಕಾರಿಗಳು ಸಹಕರಿಸುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ.
ಈ ರೀತಿ ಅಕ್ರಮಕ್ಕೆ ಸಹಕಾರ ನೀಡುತ್ತಿರುವ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುತ್ತೇನೆ. ಅಕ್ರಮವನ್ನು ಮಟ್ಟ ಹಾಕುತ್ತೇವೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ನಡೆದ ಜನಸ್ವರಾಜ್ ಕಾರ್ಯಕ್ರಮದಲ್ಲಿಯೂ ಇದೇ ಮಾತು ಆಡಿರುವ ಸಚಿವರು, ದಕ್ಷಿಣ ಕನ್ನಡ - ಉಡುಪಿ ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರನ್ನು ತೆಗೆದುಹಾಕುವ ಅಧಿಕಾರ ಸರಕಾರಕ್ಕೆ ಇದೆ ಎಂದು ಗುಡುಗಿದ್ದಾರೆ.

ರಾಜೇಂದ್ರಗೆ ಎಚ್ಚರಿಕೆ ರವಾನಿಸಿದ ಬಿಜೆಪಿ ನಾಯಕರು !
ರಾಜೇಂದ್ರ ಕುಮಾರ್ ಪರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು ಇದ್ದರೂ, ಇದೀಗ ರಾಜೇಂದ್ರ ಕುಮಾರ್ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಬೆನ್ನಲ್ಲೇ ಬಿಜೆಪಿ ಸರಕಾರದ ಸಚಿವರು ತಿರುಗಿ ಬಿದ್ದಿದ್ದಾರೆ. ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದರೆ ಪರಿಣಾಮ ನೆಟ್ಟಗಿರಲ್ಲ ಎನ್ನುವ ಸುಳಿವನ್ನು ಬಿಜೆಪಿ ನಾಯಕರು ನೀಡಿದ್ದಾರೆ. ಬಿಜೆಪಿ ಪ್ರಭಾವಿ ನಾಯಕರ ಸಹಕಾರದಲ್ಲಿ ಪಕ್ಷೇತರ ಸ್ಪರ್ಧೆಗೆ ಮುಂದಾಗಿದ್ದ ರಾಜೇಂದ್ರ ಕುಮಾರ್, ಪಕ್ಷೇತರನಾಗಿ ಸ್ಪರ್ಧಿಸಿದರೆ ಗೆಲುವು ಸುಲಭ ಇಲ್ಲ ಎನ್ನುವುದು ಮನದಟ್ಟಾಗುತ್ತಲೇ ಕಾಂಗ್ರೆಸ್ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದಾರೆ.
Mangalore Minister T Somashekhar Slams SCDCC Bank Chairman Rajendra Kumar over election. In the election meant to elect two representatives of local bodies in Dakshina Kannada constituency being held for the council next month, the Congress and the BJP were expecting to bag one seat each till a couple of days back. But the entry of veteran leader of the cooperative sector, Dr M N Rajendra Kumar, is likely to change the game altogether.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm