ಬ್ರೇಕಿಂಗ್ ನ್ಯೂಸ್
22-11-21 12:10 pm Udupi Correspondent ಕರಾವಳಿ
ಉಡುಪಿ, ನ.22: ಕೃಷಿ ಕಾಯ್ದೆ ಒಳ್ಳೆಯದೇ ಇತ್ತು. ವಿಪಕ್ಷಗಳು ವಿರೋಧಕ್ಕಾಗಿ ವಿರೋಧ ಮಾಡಿದ್ದರಿಂದ ಸಮಸ್ಯೆ ಆಯ್ತು. ಹಾಗಂತ, ಮೋದಿ ಇದನ್ನು ಹಾಗೇ ಬಿಡೋದಿಲ್ಲ. ಮುಂದಕ್ಕೆ ಅದನ್ನು ಕಾರ್ಯರೂಪಕ್ಕೆ ತಂದೇ ತರಲಿದ್ದಾರೆ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿ ಕಾಯ್ದೆಯ ಒಳ್ಳೆಯ ಅಂಶಗಳನ್ನು ಜನರಿಗೆ ತಲುಪಿಸಲು ಆಗಲಿಲ್ಲ. ಹಾಗಾಗಿ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಉತ್ತಮ ನಿರ್ಧಾರ. ಎರಡು ಮಾತಿಲ್ಲ ಎಂದು ಹೇಳಿದರು.
ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸುತ್ತಿದ್ದವರು ಈ ಬಗ್ಗೆ ಚರ್ಚೆ ನಡೆಸುವುದಕ್ಕೂ ಸಿದ್ಧರಿರಲಿಲ್ಲ. ಕುಳಿತುಕೊಳ್ಳದೆ ಚರ್ಚೆ ಆಗುತ್ತದೆಯೇ.. ಚರ್ಚೆ ಆದಾಗ ಆ ಕಡೆಯಿಂದ ಮತ್ತು ಈ ಕಡೆಯಿಂದ ಉತ್ತಮ ವಿಚಾರಗಳನ್ನು ಪಡೆದುಕೊಳ್ಳಲು ಅವಕಾಶ ಇರುತ್ತದೆ. ಮೋದಿಯವರು ತಿದ್ದುಪಡಿ ಮಾಡುವುದಕ್ಕೆ ಒಪ್ಪಿಕೊಂಡಿದ್ದರು. ಆದರೆ ಇವರು ಯಾವುದಕ್ಕೂ ಒಪ್ಪಲಿಲ್ಲ.
ಹಿಂದೆ ಸಿಎಎ ವಿಚಾರದಲ್ಲಿಯೂ ಇದೇ ಆಗಿತ್ತು. ಚರ್ಚೆಗೆ ಕರೆದರೆ, ಅದನ್ನು ಮಾಡಲು ವಿಪಕ್ಷಗಳು ತಯಾರಿಲ್ಲ. ಭಾರತದಲ್ಲಿ ವ್ಯವಸ್ಥೆ ಹೀಗೆ ಆಗಿರೋದಕ್ಕೆ ಇದೂ ಕಾರಣ. ಮೋದಿ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ ಅಂದರೆ ಎರಡು ಹೆಜ್ಜೆ ಮುಂದಿಟ್ಟಿದ್ದಾರೆ ಎಂದೇ ಅರ್ಥ. ಮುಂದಕ್ಕೆ ಬೇರೆ ರೂಪದಲ್ಲಿ ಈ ಕಾಯ್ದೆ ಜಾರಿಗೆ ಬರಲಿದೆ. ಈ ರೀತಿಯ ನಡೆಯಿಂದಾಗಿ ನೈಜ ರೈತರಿಗೆ, ಸಣ್ಣ ಹಿಡುವಳಿದಾರರಿಗೆ ನಷ್ಟವಾಗಿದೆ. ಈ ವಿಚಾರ ಜನರಿಗೆ ತಲುಪುತ್ತದೆ. ತಲುಪಬೇಕು. ಅದಕ್ಕಾಗಿಯೇ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಭಾಕರ ಭಟ್ ಹೇಳಿದರು.
RSS leader Kalladka Prabhakar Bhat on Sunday November 21 reacted to the central government's decision to repeal the controversial farm laws and said that the laws will be reintroduced with minor changes.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm