ಬ್ರೇಕಿಂಗ್ ನ್ಯೂಸ್
22-11-21 03:05 pm Mangaluru correspondent ಕರಾವಳಿ
ಮಂಗಳೂರು, ನ.22: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಉಜಿರೆ ಎಸ್ ಡಿಎಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಎಂ.ಪಿ. ಶ್ರೀನಾಥ್ ಆಯ್ಕೆಯಾಗಿದ್ದಾರೆ.
ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ ಘಟಕಕ್ಕೆ ಭಾನುವಾರ ಚುನಾವಣೆ ನಡೆದಿದ್ದು, ಆಯಾ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರ ಆಯ್ಕೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 44.8 ಶೇಕಡಾ ಮತದಾನ ಆಗಿತ್ತು. ಶ್ರೀನಾಥ್ ಪರವಾಗಿ 1488 ಮತಗಳು ಬಿದ್ದರೆ, ಪ್ರತಿಸ್ಪರ್ಧಿ ಮಂಗಳೂರು ಏರ್ಪೋರ್ಟ್ ಮಾಜಿ ನಿರ್ದೇಶಕ ಎಂ.ಆರ್. ವಾಸುದೇವ ಪರವಾಗಿ 534 ಮತಗಳು ಬಿದ್ದವು. ಶ್ರೀನಾಥ್ ನಿರಾಯಾಸವಾಗಿ ಗೆಲುವು ಸಾಧಿಸಿದ್ದಾರೆ.
ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ 26 ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿರುವ ಎಂ.ಪಿ.ಶ್ರೀನಾಥ್ ಈಗ ಸಹಾಯಕ ಪ್ರಾಧ್ಯಾಪಕ ಹುದ್ದೆಯಲ್ಲಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಪರ ಚಟುವಟಿಕೆ, ಕನ್ನಡ ಸಾಹಿತ್ಯ ಪರಿಷತ್ ಕೆಲಸದಲ್ಲಿ ನಿರತರಾಗಿದ್ದಾರೆ.
ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ತೀವ್ರ ಸ್ಪರ್ಧೆ ಇದ್ದ ಚುನಾವಣೆಯಲ್ಲಿ ಸುರೇಂದ್ರ ಅಡಿಗ 432 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಸುಬ್ರಹ್ಮಣ್ಯ ಬಸ್ರಿ 400 ಮತಗಳನ್ನು ಪಡೆದಿದ್ದರು.
ಮೂರು ವರ್ಷಗಳಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹುದ್ದೆಯ ಅವಧಿಯನ್ನು 5 ವರ್ಷಗಳಿಗೆ ಮಾಡಲಾಗಿದೆ. 5 ವರ್ಷ ಅವಧಿ ಆದಬಳಿಕ ಮೊದಲ ಬಾರಿಗೆ ಸಾಹಿತ್ಯ ಪರಿಷತ್ ಹುದ್ದೆಗಳಿಗೆ ಚುನಾವಣೆ ನಡೆಸಲಾಗಿದ್ದು, ರಾಜ್ಯಾದ್ಯಂತ ತೀವ್ರ ತುರುಸಿನ ಸ್ಪರ್ಧೆ ನಡೆದಿತ್ತು.
Assistant professor and noted writer, Dr M P Srinath, was elected as the president of Dakshina Kannada (DK) district Kannada Sahitya Parishad. Voting was held in ten centres across Dakshina Kannada district between 8 am and 4 pm on Sunday in which 44.8 percent members voted.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm