ಬ್ರೇಕಿಂಗ್ ನ್ಯೂಸ್
22-11-21 03:05 pm Mangaluru correspondent ಕರಾವಳಿ
ಮಂಗಳೂರು, ನ.22: ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಉಜಿರೆ ಎಸ್ ಡಿಎಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಎಂ.ಪಿ. ಶ್ರೀನಾಥ್ ಆಯ್ಕೆಯಾಗಿದ್ದಾರೆ.
ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ ಘಟಕಕ್ಕೆ ಭಾನುವಾರ ಚುನಾವಣೆ ನಡೆದಿದ್ದು, ಆಯಾ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರ ಆಯ್ಕೆ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 44.8 ಶೇಕಡಾ ಮತದಾನ ಆಗಿತ್ತು. ಶ್ರೀನಾಥ್ ಪರವಾಗಿ 1488 ಮತಗಳು ಬಿದ್ದರೆ, ಪ್ರತಿಸ್ಪರ್ಧಿ ಮಂಗಳೂರು ಏರ್ಪೋರ್ಟ್ ಮಾಜಿ ನಿರ್ದೇಶಕ ಎಂ.ಆರ್. ವಾಸುದೇವ ಪರವಾಗಿ 534 ಮತಗಳು ಬಿದ್ದವು. ಶ್ರೀನಾಥ್ ನಿರಾಯಾಸವಾಗಿ ಗೆಲುವು ಸಾಧಿಸಿದ್ದಾರೆ.
ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ 26 ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿರುವ ಎಂ.ಪಿ.ಶ್ರೀನಾಥ್ ಈಗ ಸಹಾಯಕ ಪ್ರಾಧ್ಯಾಪಕ ಹುದ್ದೆಯಲ್ಲಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಪರ ಚಟುವಟಿಕೆ, ಕನ್ನಡ ಸಾಹಿತ್ಯ ಪರಿಷತ್ ಕೆಲಸದಲ್ಲಿ ನಿರತರಾಗಿದ್ದಾರೆ.
ಉಡುಪಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ತೀವ್ರ ಸ್ಪರ್ಧೆ ಇದ್ದ ಚುನಾವಣೆಯಲ್ಲಿ ಸುರೇಂದ್ರ ಅಡಿಗ 432 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಸುಬ್ರಹ್ಮಣ್ಯ ಬಸ್ರಿ 400 ಮತಗಳನ್ನು ಪಡೆದಿದ್ದರು.
ಮೂರು ವರ್ಷಗಳಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹುದ್ದೆಯ ಅವಧಿಯನ್ನು 5 ವರ್ಷಗಳಿಗೆ ಮಾಡಲಾಗಿದೆ. 5 ವರ್ಷ ಅವಧಿ ಆದಬಳಿಕ ಮೊದಲ ಬಾರಿಗೆ ಸಾಹಿತ್ಯ ಪರಿಷತ್ ಹುದ್ದೆಗಳಿಗೆ ಚುನಾವಣೆ ನಡೆಸಲಾಗಿದ್ದು, ರಾಜ್ಯಾದ್ಯಂತ ತೀವ್ರ ತುರುಸಿನ ಸ್ಪರ್ಧೆ ನಡೆದಿತ್ತು.
Assistant professor and noted writer, Dr M P Srinath, was elected as the president of Dakshina Kannada (DK) district Kannada Sahitya Parishad. Voting was held in ten centres across Dakshina Kannada district between 8 am and 4 pm on Sunday in which 44.8 percent members voted.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm