ಬ್ರೇಕಿಂಗ್ ನ್ಯೂಸ್
22-11-21 06:50 pm Mangaluru Correspondent ಕರಾವಳಿ
ಮಂಗಳೂರು, ನ.22: ಭಾರೀ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಸಹ್ಯಾದ್ರಿ ಇಂಜಿನಿಯನಿರಿಂಗ್ ಕಾಲೇಜಿನ ಮುಖ್ಯಸ್ಥ ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕಾಂಗ್ರೆಸ್ ಹೈಕಮಾಂಡ್ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ಸೋಮವಾರ ಸಂಜೆ ಪಟ್ಟಿ ಬಿಡುಗಡೆಗೊಳಿಸಿದೆ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದಾಗಿ ಟಿವಿ ಮಾಧ್ಯಮಗಳು ಮತ್ತು ಪ್ರತಿಷ್ಠಿತ ಪತ್ರಿಕೆಯೊಂದರ ವೆಬ್ ಸೈಟ್ ನಲ್ಲಿ ಬರೆಯಲಾಗಿತ್ತು. ಇಂದು ಮಧ್ಯಾಹ್ನ ಸಂಭಾವ್ಯರ ಲಿಸ್ಟ್ ಎನ್ನುವ ನೆಲೆಯಲ್ಲಿ ಟಿವಿ ಮಾಧ್ಯಮಗಳ ಬ್ರೇಕಿಂಗ್ ನೋಡಿ ಕರಾವಳಿಯಲ್ಲಿ ಸಂಚಲನ ಮೂಡಿತ್ತು. ಈ ಬಾರಿ ವಿಧಾನ ಪರಿಷತ್ತಿಗೆ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದ ರಾಜೇಂದ್ರ ಕುಮಾರ್, ಎರಡು ದಿನಗಳ ಹಿಂದೆ ಚುನಾವಣೆಗೇ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಮತ್ತೊಂದು ಅಚ್ಚರಿ ಮೂಡಿಸಿದ್ದರು.

ಆದರೆ, ಇಂದು ಮಧ್ಯಾಹ್ನ ಹೊತ್ತಿಗೆ ಟಿವಿ ಬ್ರೇಕಿಂಗ್ ನಲ್ಲಿ ರಾಜೇಂದ್ರ ಕುಮಾರ್ ಅವರಿಗೇ ಕಾಂಗ್ರೆಸ್ ಟಿಕೆಟ್ ಘೋಷಿಸಿದ್ದಾಗಿ ಸುದ್ದಿಗಳು ಬರುತ್ತಿದ್ದಂತೆ ಕಾಂಗ್ರೆಸಿಗರಿಗೇ ಶಾಕ್ ಆಗಿತ್ತು. ಹಲವಾರು ಮಂದಿ ಮಂಗಳೂರಿನ ಮಾಧ್ಯಮ ಪ್ರತಿನಿಧಿಗಳಿಗೆ ಈ ಬಗ್ಗೆ ಮಾಹಿತಿ ಕೇಳಲು ತೊಡಗಿದ್ದರು. ಹೀಗಿದ್ದರೂ, ಕೆಲವು ಕಾಂಗ್ರೆಸ್ ನಾಯಕರು ಮಂಜುನಾಥ ಭಂಡಾರಿಗೇ ಟಿಕೆಟ್ ಎನ್ನುವುದನ್ನು ಹೇಳುತ್ತಿದ್ದರು. ಮತ್ತೆ ಹೇಳೋಕಾಗಲ್ಲ, ಕೆಲವರ ಕರಾಮತ್ತಿನಲ್ಲಿ ರಾಜೇಂದ್ರ ಕುಮಾರ್ ಗೆ ಟಿಕೆಟ್ ಸಿಕ್ಕಿದರೂ ಅಚ್ಚರಿಯಿಲ್ಲ ಎನ್ನುವ ಮಾತುಗಳು ಬಂದಿದ್ದವು. ಸಂಜೆ ವೇಳೆಗೆ 17 ಮಂದಿಯ ಅಭ್ಯರ್ಥಿಗಳ ಲಿಸ್ಟ್ ಬಿಡುಗಡೆ ಆಗಿದ್ದು ಮಂಜುನಾಥ ಭಂಡಾರಿಗೆ ಟಿಕೆಟ್ ಫೈನಲ್ ಆಗಿತ್ತು.

ಗುಲ್ಬರ್ಗ – ಶಿವಾನಂದ ಪಾಟೀಲ್ ಮರ್ತೂರು, ಬೆಳಗಾವಿ – ಚೆನ್ನರಾಜ ಬಸವರಾಜ್ ಹಟ್ಟಿಹೊಳ್ಳಿ, ಉತ್ತರ ಕನ್ನಡ – ಭೀಮಣ್ಣ ನಾಯ್ಕ್, ಹುಬ್ಬಳ್ಳಿ- ಧಾರವಾಡ – ಗದಗ- ಹಾವೇರಿ ಮತಕ್ಷೇತ್ರ – ಸಲೀಂ ಅಹ್ಮದ್, ರಾಯಚೂರು- ಶರಣು ಗೌಡ ಪಾಟೀಲ್, ಚಿತ್ರದುರ್ಗ – ಬಿ.ಸೋಮಶೇಖರ್, ಶಿವಮೊಗ್ಗ – ಆರ್. ಪ್ರಸನ್ನ ಕುಮಾರ್, ದಕ್ಷಿಣ ಕನ್ನಡ – ಮಂಜುನಾಥ ಭಂಡಾರಿ, ಚಿಕ್ಕಮಗಳೂರು- ಎ.ವಿ.ಗಾಯತ್ರಿ ಶಾಂತೇಗೌಡ, ಹಾಸನ- ಎಂ.ಶಂಕರ್, ತುಮಕೂರು- ಆರ್. ರಾಜೇಂದ್ರ, ಮಂಡ್ಯ- ಎಂ.ಜಿ. ಗೂಳಿಗೌಡ, ಬೆಂಗಳೂರು ಗ್ರಾಮಾಂತರ – ಎಸ್. ರವಿ, ಕೊಡಗು – ಆರ್. ಮಂತರ್ ಗೌಡ, ಬಿಜಾಪುರ- ಬಾಗಲಕೋಟ- ಸುನಿಲ್ ಗೌಡ ಪಾಟೀಲ್, ಮೈಸೂರು- ಚಾಮರಾಜನಗರ- ಡಾ.ಡಿ.ತಮ್ಮಯ್ಯ, ಬೆಳ್ಳಾರಿ- ಕೆ.ಸಿ.ಕೊಂಡಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ.
ನ.23 ಅಂದ್ರೆ, ನಾಳೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು, ಒಂದು ದಿನ ಇರುವಾಗ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಐದಾರು ಕ್ಷೇತ್ರಗಳಲ್ಲಿ ಆಕಾಂಕ್ಷಿ ಅಭ್ಯರ್ಥಿಗಳು ಹೆಚ್ಚಿದ್ದರಿಂದ ಪೈಪೋಟಿ ಉಂಟಾಗಿತ್ತು. ರಾಜ್ಯ ನಾಯಕರು ತಮ್ಮ ಬೆಂಬಲಿಗರಿಗೇ ಟಿಕೆಟ್ ಸಿಗುವಂತೆ ಮಾಡಲು ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿದ್ದರು. ಹೀಗಾಗಿ ಇದರ ಲಾಭ ಪಡೆದು, ಕಾಂಗ್ರೆಸಿನ ಅತೃಪ್ತರಿಗೆ ಟಿಕೆಟ್ ನೀಡಲು ಜೆಡಿಎಸ್ ಮುಂದಾಗಿತ್ತು. ಈ ರೀತಿಯ ಗೇಮ್ ಪ್ಲಾನ್ ಅರಿತಿದ್ದ ಕಾಂಗ್ರೆಸ್ ನಾಯಕರು ಕೊನೆಯ ವರೆಗೂ ಕಾಯಿಸಿ, ಟಿಕೆಟ್ ಘೋಷಣೆ ಮಾಡಿದ್ದಾರೆ.
Mangalore Manjunath Bhandary to contest MLC elections from Dakshina Kannada. Just a day ahead of filing nomination papers for Legislative council elections, being held for two seats from local authorities constituencies, as an independent candidate, SCDCC (South Canara District Central Co-Operative) Bank President M N Rajendra Kumar sprang a surprise by dropping out of the race on Saturday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm