ಬ್ರೇಕಿಂಗ್ ನ್ಯೂಸ್
24-11-21 09:33 am HK news Desk ಕರಾವಳಿ
ಉಡುಪಿ, ನ. 24: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದಕ್ಕೆ ಬಂಪರ್ ಲಾಟರಿ ಸಿಕ್ಕಂತಾಗಿದೆ. ಅದರಲ್ಲಿದ್ದ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದ್ದು ಆ ಒಂದು ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿಗೆ ಮಾರಾಟವಾಗಿ ಮೀನುಗಾರರನ್ನೇ ಹುಬ್ಬೇರಿಸಿದೆ.
ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬವರ ಬಲರಾಮ್ ಎಂಬ ಹೆಸರಿನ ಬೋಟ್ಗೆ ಅದೃಷ್ಟ ಖುಲಾಯಿಸಿತ್ತು. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ ಗೋಳಿ ಅನ್ನುವ ಹೆಸರಿನ ಮೀನು ಲಭ್ಯವಾಗಿದ್ದು, ಈ ಮೀನು ಬರೋಬ್ಬರಿ 1,80,200 ರೂಪಾಯಿಗೆ ಮಾರಟವಾಗಿದೆ. ಮಲ್ಪೆ ಬಂದರಿನಲ್ಲಿ ಮೀನಿನ ಹರಾಜು ಪ್ರಕ್ರಿಯೆ ನಡೆದಿದ್ದು, ನೂರಾರು ಮಂದಿಯ ಕುತೂಹಲಕ್ಕೆ ಸಾಕ್ಷಿಯಾಗಿದೆ.
ಪ್ರತಿ ಕೆಜಿಗೆ 9060 ರೂ.ನಂತೆ ಗೋಳಿ ಮೀನು ಮಾರಾಟವಾಗಿದೆ. ಇದು ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿದ್ದು ಮೀನುಗಾರರ ಬಲೆಗೆ ಬೀಳೋದು ಅಪರೂಪ ಎನ್ನಲಾಗಿದೆ.
ಮಲ್ಪೆ ಬಂದರಿನಿಂದ ಹರಾಜಿನಲ್ಲಿ ತೆಗೆದುಕೊಂಡ ಈ ಮೀನನ್ನು ಮುಂಬೈ ಮೀನುಗಾರಿಕಾ ಬಂದರಿನಲ್ಲಿ ಮಾರಾಟ ಮಾಡಲಾಗುತ್ತದೆ. ಮುಂಬೈಯಲ್ಲಿ ಈ ಮೀನಿನ ದರ ಪ್ರತೀ ಕೆಜಿಗೆ ಹದಿನೈದು ಸಾವಿರದಿಂದ ಹದಿನೆಂಟು ಸಾವಿರದ ವರೆಗೂ ಹೋಗಲಿದೆ ಎಂದು ಮೀನುಗಾರರು ಹೇಳುತ್ತಾರೆ. ಮುಂಬೈನಿಂದ ನೇರ ಔಷಧ ಕಂಪೆನಿಗಳೇ ಈ ಮೀನನ್ನು ಖರೀದಿ ಮಾಡಲಿದ್ದು ಭಾರೀ ಬೆಲೆ ಸಿಗಲಿದೆಯಂತೆ.
ಉಡುಪಿಯ ಮಲ್ಪೆಯಲ್ಲಿ ಈ ರೀತಿಯ ಮೀನು ದೊರಕಿರೋದು ಇದೇ ಮೊದಲು. ಈ ಹಿಂದೆ ಗೋಳಿ ಜಾತಿಯ ಸಣ್ಣ ಮೀನುಗಳು ಬಲೆಗೆ ಬಿದ್ದಿದ್ದು ಪ್ರಥಮ ಬಾರಿಗೆ ಭಾರೀ ತೂಕದ ಮೀನು ಲಭ್ಯವಾಗಿದೆ. ಮಲ್ಪೆ ಬಂದರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ದರಕ್ಕೆ ಮೀನು ಮಾರಾಟವಾಗಿದೆ.
Udupi Maple Fishermen sells fish 18 kilo fish for 1.18 lakhs. The fish was auctioned by Mumbai fishermen for 15 thousand per kilo ane later it was sold for 1.18 lakhs.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm