ಬ್ರೇಕಿಂಗ್ ನ್ಯೂಸ್
24-11-21 09:33 am HK news Desk ಕರಾವಳಿ
ಉಡುಪಿ, ನ. 24: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದಕ್ಕೆ ಬಂಪರ್ ಲಾಟರಿ ಸಿಕ್ಕಂತಾಗಿದೆ. ಅದರಲ್ಲಿದ್ದ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದ್ದು ಆ ಒಂದು ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿಗೆ ಮಾರಾಟವಾಗಿ ಮೀನುಗಾರರನ್ನೇ ಹುಬ್ಬೇರಿಸಿದೆ.
ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬವರ ಬಲರಾಮ್ ಎಂಬ ಹೆಸರಿನ ಬೋಟ್ಗೆ ಅದೃಷ್ಟ ಖುಲಾಯಿಸಿತ್ತು. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ ಗೋಳಿ ಅನ್ನುವ ಹೆಸರಿನ ಮೀನು ಲಭ್ಯವಾಗಿದ್ದು, ಈ ಮೀನು ಬರೋಬ್ಬರಿ 1,80,200 ರೂಪಾಯಿಗೆ ಮಾರಟವಾಗಿದೆ. ಮಲ್ಪೆ ಬಂದರಿನಲ್ಲಿ ಮೀನಿನ ಹರಾಜು ಪ್ರಕ್ರಿಯೆ ನಡೆದಿದ್ದು, ನೂರಾರು ಮಂದಿಯ ಕುತೂಹಲಕ್ಕೆ ಸಾಕ್ಷಿಯಾಗಿದೆ.
ಪ್ರತಿ ಕೆಜಿಗೆ 9060 ರೂ.ನಂತೆ ಗೋಳಿ ಮೀನು ಮಾರಾಟವಾಗಿದೆ. ಇದು ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿದ್ದು ಮೀನುಗಾರರ ಬಲೆಗೆ ಬೀಳೋದು ಅಪರೂಪ ಎನ್ನಲಾಗಿದೆ.
ಮಲ್ಪೆ ಬಂದರಿನಿಂದ ಹರಾಜಿನಲ್ಲಿ ತೆಗೆದುಕೊಂಡ ಈ ಮೀನನ್ನು ಮುಂಬೈ ಮೀನುಗಾರಿಕಾ ಬಂದರಿನಲ್ಲಿ ಮಾರಾಟ ಮಾಡಲಾಗುತ್ತದೆ. ಮುಂಬೈಯಲ್ಲಿ ಈ ಮೀನಿನ ದರ ಪ್ರತೀ ಕೆಜಿಗೆ ಹದಿನೈದು ಸಾವಿರದಿಂದ ಹದಿನೆಂಟು ಸಾವಿರದ ವರೆಗೂ ಹೋಗಲಿದೆ ಎಂದು ಮೀನುಗಾರರು ಹೇಳುತ್ತಾರೆ. ಮುಂಬೈನಿಂದ ನೇರ ಔಷಧ ಕಂಪೆನಿಗಳೇ ಈ ಮೀನನ್ನು ಖರೀದಿ ಮಾಡಲಿದ್ದು ಭಾರೀ ಬೆಲೆ ಸಿಗಲಿದೆಯಂತೆ.
ಉಡುಪಿಯ ಮಲ್ಪೆಯಲ್ಲಿ ಈ ರೀತಿಯ ಮೀನು ದೊರಕಿರೋದು ಇದೇ ಮೊದಲು. ಈ ಹಿಂದೆ ಗೋಳಿ ಜಾತಿಯ ಸಣ್ಣ ಮೀನುಗಳು ಬಲೆಗೆ ಬಿದ್ದಿದ್ದು ಪ್ರಥಮ ಬಾರಿಗೆ ಭಾರೀ ತೂಕದ ಮೀನು ಲಭ್ಯವಾಗಿದೆ. ಮಲ್ಪೆ ಬಂದರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ದರಕ್ಕೆ ಮೀನು ಮಾರಾಟವಾಗಿದೆ.
Udupi Maple Fishermen sells fish 18 kilo fish for 1.18 lakhs. The fish was auctioned by Mumbai fishermen for 15 thousand per kilo ane later it was sold for 1.18 lakhs.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm