ಬ್ರೇಕಿಂಗ್ ನ್ಯೂಸ್
24-11-21 09:33 am HK news Desk ಕರಾವಳಿ
ಉಡುಪಿ, ನ. 24: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದಕ್ಕೆ ಬಂಪರ್ ಲಾಟರಿ ಸಿಕ್ಕಂತಾಗಿದೆ. ಅದರಲ್ಲಿದ್ದ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದ್ದು ಆ ಒಂದು ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿಗೆ ಮಾರಾಟವಾಗಿ ಮೀನುಗಾರರನ್ನೇ ಹುಬ್ಬೇರಿಸಿದೆ.
ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬವರ ಬಲರಾಮ್ ಎಂಬ ಹೆಸರಿನ ಬೋಟ್ಗೆ ಅದೃಷ್ಟ ಖುಲಾಯಿಸಿತ್ತು. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ ಗೋಳಿ ಅನ್ನುವ ಹೆಸರಿನ ಮೀನು ಲಭ್ಯವಾಗಿದ್ದು, ಈ ಮೀನು ಬರೋಬ್ಬರಿ 1,80,200 ರೂಪಾಯಿಗೆ ಮಾರಟವಾಗಿದೆ. ಮಲ್ಪೆ ಬಂದರಿನಲ್ಲಿ ಮೀನಿನ ಹರಾಜು ಪ್ರಕ್ರಿಯೆ ನಡೆದಿದ್ದು, ನೂರಾರು ಮಂದಿಯ ಕುತೂಹಲಕ್ಕೆ ಸಾಕ್ಷಿಯಾಗಿದೆ.
ಪ್ರತಿ ಕೆಜಿಗೆ 9060 ರೂ.ನಂತೆ ಗೋಳಿ ಮೀನು ಮಾರಾಟವಾಗಿದೆ. ಇದು ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿದ್ದು ಮೀನುಗಾರರ ಬಲೆಗೆ ಬೀಳೋದು ಅಪರೂಪ ಎನ್ನಲಾಗಿದೆ.
ಮಲ್ಪೆ ಬಂದರಿನಿಂದ ಹರಾಜಿನಲ್ಲಿ ತೆಗೆದುಕೊಂಡ ಈ ಮೀನನ್ನು ಮುಂಬೈ ಮೀನುಗಾರಿಕಾ ಬಂದರಿನಲ್ಲಿ ಮಾರಾಟ ಮಾಡಲಾಗುತ್ತದೆ. ಮುಂಬೈಯಲ್ಲಿ ಈ ಮೀನಿನ ದರ ಪ್ರತೀ ಕೆಜಿಗೆ ಹದಿನೈದು ಸಾವಿರದಿಂದ ಹದಿನೆಂಟು ಸಾವಿರದ ವರೆಗೂ ಹೋಗಲಿದೆ ಎಂದು ಮೀನುಗಾರರು ಹೇಳುತ್ತಾರೆ. ಮುಂಬೈನಿಂದ ನೇರ ಔಷಧ ಕಂಪೆನಿಗಳೇ ಈ ಮೀನನ್ನು ಖರೀದಿ ಮಾಡಲಿದ್ದು ಭಾರೀ ಬೆಲೆ ಸಿಗಲಿದೆಯಂತೆ.
ಉಡುಪಿಯ ಮಲ್ಪೆಯಲ್ಲಿ ಈ ರೀತಿಯ ಮೀನು ದೊರಕಿರೋದು ಇದೇ ಮೊದಲು. ಈ ಹಿಂದೆ ಗೋಳಿ ಜಾತಿಯ ಸಣ್ಣ ಮೀನುಗಳು ಬಲೆಗೆ ಬಿದ್ದಿದ್ದು ಪ್ರಥಮ ಬಾರಿಗೆ ಭಾರೀ ತೂಕದ ಮೀನು ಲಭ್ಯವಾಗಿದೆ. ಮಲ್ಪೆ ಬಂದರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ದರಕ್ಕೆ ಮೀನು ಮಾರಾಟವಾಗಿದೆ.
Udupi Maple Fishermen sells fish 18 kilo fish for 1.18 lakhs. The fish was auctioned by Mumbai fishermen for 15 thousand per kilo ane later it was sold for 1.18 lakhs.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm