ಬ್ರೇಕಿಂಗ್ ನ್ಯೂಸ್
24-11-21 09:33 am HK news Desk ಕರಾವಳಿ
ಉಡುಪಿ, ನ. 24: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದಕ್ಕೆ ಬಂಪರ್ ಲಾಟರಿ ಸಿಕ್ಕಂತಾಗಿದೆ. ಅದರಲ್ಲಿದ್ದ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದ್ದು ಆ ಒಂದು ಮೀನು ಬರೋಬ್ಬರಿ ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿಗೆ ಮಾರಾಟವಾಗಿ ಮೀನುಗಾರರನ್ನೇ ಹುಬ್ಬೇರಿಸಿದೆ.
ಮಲ್ಪೆ ಕಡಲ ಕಿನಾರೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್ ರಾಜ್ ತೊಟ್ಟಂ ಎಂಬವರ ಬಲರಾಮ್ ಎಂಬ ಹೆಸರಿನ ಬೋಟ್ಗೆ ಅದೃಷ್ಟ ಖುಲಾಯಿಸಿತ್ತು. ಮೀನುಗಾರರು ಬೀಸಿದ ಬಲೆಗೆ 18 ಕೆಜಿ ತೂಕದ ಅಪರೂಪದ ಗೋಳಿ ಅನ್ನುವ ಹೆಸರಿನ ಮೀನು ಲಭ್ಯವಾಗಿದ್ದು, ಈ ಮೀನು ಬರೋಬ್ಬರಿ 1,80,200 ರೂಪಾಯಿಗೆ ಮಾರಟವಾಗಿದೆ. ಮಲ್ಪೆ ಬಂದರಿನಲ್ಲಿ ಮೀನಿನ ಹರಾಜು ಪ್ರಕ್ರಿಯೆ ನಡೆದಿದ್ದು, ನೂರಾರು ಮಂದಿಯ ಕುತೂಹಲಕ್ಕೆ ಸಾಕ್ಷಿಯಾಗಿದೆ.
ಪ್ರತಿ ಕೆಜಿಗೆ 9060 ರೂ.ನಂತೆ ಗೋಳಿ ಮೀನು ಮಾರಾಟವಾಗಿದೆ. ಇದು ಅಪರೂಪದ ಮೀನಾಗಿದ್ದು, ಅತೀ ಹೆಚ್ಚಾಗಿ ಔಷಧಿ ತಯಾರಿಕೆಗೆ ಬಳಸಲಾಗುತ್ತದೆ. ಮಧುಮೇಹ, ಅಸ್ತಮಾದಂತಹ ಖಾಯಿಲೆಗಳ ಔಷಧಿಗೆ ಈ ಮೀನನ್ನು ಬಳಸಲಾಗುತ್ತದೆ. ಈ ಮೀನು ಕಲ್ಲು ಬಂಡೆಗಳ ಅಡಿಯಲ್ಲಿ ವಾಸವಾಗಿದ್ದು ಮೀನುಗಾರರ ಬಲೆಗೆ ಬೀಳೋದು ಅಪರೂಪ ಎನ್ನಲಾಗಿದೆ.
ಮಲ್ಪೆ ಬಂದರಿನಿಂದ ಹರಾಜಿನಲ್ಲಿ ತೆಗೆದುಕೊಂಡ ಈ ಮೀನನ್ನು ಮುಂಬೈ ಮೀನುಗಾರಿಕಾ ಬಂದರಿನಲ್ಲಿ ಮಾರಾಟ ಮಾಡಲಾಗುತ್ತದೆ. ಮುಂಬೈಯಲ್ಲಿ ಈ ಮೀನಿನ ದರ ಪ್ರತೀ ಕೆಜಿಗೆ ಹದಿನೈದು ಸಾವಿರದಿಂದ ಹದಿನೆಂಟು ಸಾವಿರದ ವರೆಗೂ ಹೋಗಲಿದೆ ಎಂದು ಮೀನುಗಾರರು ಹೇಳುತ್ತಾರೆ. ಮುಂಬೈನಿಂದ ನೇರ ಔಷಧ ಕಂಪೆನಿಗಳೇ ಈ ಮೀನನ್ನು ಖರೀದಿ ಮಾಡಲಿದ್ದು ಭಾರೀ ಬೆಲೆ ಸಿಗಲಿದೆಯಂತೆ.
ಉಡುಪಿಯ ಮಲ್ಪೆಯಲ್ಲಿ ಈ ರೀತಿಯ ಮೀನು ದೊರಕಿರೋದು ಇದೇ ಮೊದಲು. ಈ ಹಿಂದೆ ಗೋಳಿ ಜಾತಿಯ ಸಣ್ಣ ಮೀನುಗಳು ಬಲೆಗೆ ಬಿದ್ದಿದ್ದು ಪ್ರಥಮ ಬಾರಿಗೆ ಭಾರೀ ತೂಕದ ಮೀನು ಲಭ್ಯವಾಗಿದೆ. ಮಲ್ಪೆ ಬಂದರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ದರಕ್ಕೆ ಮೀನು ಮಾರಾಟವಾಗಿದೆ.
Udupi Maple Fishermen sells fish 18 kilo fish for 1.18 lakhs. The fish was auctioned by Mumbai fishermen for 15 thousand per kilo ane later it was sold for 1.18 lakhs.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm