ಬ್ರೇಕಿಂಗ್ ನ್ಯೂಸ್
26-11-21 10:18 am HK news Desk ಕರಾವಳಿ
ಮಂಗಳೂರು, ನ.26: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಕುಷ್ಠ ರೋಗ ವಿಭಾಗದ ವೈದ್ಯನೊಬ್ಬ ಸಹೋದ್ಯೋಗಿ ಯುವತಿಯರ ಜೊತೆ ಚಕ್ಕಂದ ಆಡುತ್ತಾ ಲೈಂಗಿಕ ಕಿರುಕುಳ ನೀಡುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ವೈದ್ಯನನ್ನು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಸಸ್ಪೆಂಡ್ ಮಾಡಿದ್ದಾರೆ.
ವೆನ್ಲಾಕ್ ಕುಷ್ಠ ರೋಗ ವಿಭಾಗದ ವೈದ್ಯ ಡಾ. ರತ್ನಾಕರ್ ಕರ್ತವ್ಯದಿಂದ ಅಮಾನತಾಗಿರುವ ವೈದ್ಯಾಧಿಕಾರಿ. ಕಳೆದ ಹಲವು ಸಮಯದಿಂದ ಈತ ತನ್ನ ವಿಭಾಗದ ಕೆಲವು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ವಿಚಾರ ಅಲ್ಲಿನ ಇತರ ಸಿಬಂದಿಗೂ ತಿಳಿದಿತ್ತು.


ಆತನ ಜೊತೆ ಸಹಕರಿಸದೇ ಇದ್ದವರಿಗೆ ರತ್ನಾಕರ್, ಮಾನಸಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಕಿರುಕುಳಕ್ಕೆ ಒಳಗಾದವರು ಮತ್ತು ಆಸ್ಪತ್ರೆಯ ಬೇರೆ ವಿಭಾಗದ ಸಿಬಂದಿ ಸೇರಿ ಜಿಲ್ಲಾ ಆರೋಗ್ಯಧಿಕಾರಿ ಮತ್ತು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ರಾಜ್ಯ ಆರೋಗ್ಯ ಇಲಾಖೆಗೂ ದೂರು ಹೋಗಿತ್ತು.
ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಜಿಲ್ಲಾಧಿಕಾರಿಯಿಂದ ವರದಿ ಕೇಳಿದ್ದು ರಿಪೋರ್ಟ್ ನೀಡಿದ್ದರು ಎನ್ನಲಾಗಿದೆ. ವರದಿ ಆಧರಿಸಿ ಕಾಮುಕ ವೈದ್ಯನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ತಿಂಗಳ ಹಿಂದೆ ವರ್ಗಾವಣೆ ಆಗಿತ್ತು !
ಇನ್ನೊಂದು ಮೂಲದ ಪ್ರಕಾರ, ಕುಷ್ಠ ರೋಗ ವಿಭಾಗವನ್ನು ಆರು ತಿಂಗಳ ಹಿಂದೆ ಲೇಡಿಹಿಲ್ ಉಪ ವಿಭಾಗಕ್ಕೆ ಸ್ಥಳಾಂತರ ಮಾಡಲಾಗಿತ್ತು. ಅಲ್ಲಿಯೂ ಈತನ ಕಾಮ ಪುರಾಣ ಮುಂದುವರಿದಿತ್ತು. ಅಲ್ಲಿನ ಇತರ ಸಿಬಂದಿ ಇದನ್ನು ತಿಳಿದು ತೀವ್ರ ಮುಜುಗರಕ್ಕೆ ಒಳಗಾಗಿದ್ದರು. ಈ ಬಗ್ಗೆ ಜಿಲ್ಲಾ ಆರೋಗ್ಯಧಿಕಾರಿಗೆ ದೂರು ನೀಡಲಾಗಿತ್ತು ಎನ್ನುವ ಮಾಹಿತಿಗಳಿವೆ. ಇದೇ ವಿಚಾರದಲ್ಲಿ ವೈದ್ಯ ರತ್ನಾಕರನನ್ನು ತಿಂಗಳ ಹಿಂದೆ ಉತ್ತರ ಕರ್ನಾಟಕದ ಆಸ್ಪತ್ರೆ ಒಂದಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ ರತ್ನಾಕರ್ ಪ್ರಭಾವಿಯಾಗಿದ್ದು ರಾಜಕೀಯ ಒತ್ತಡದ ಮೂಲಕ ಮತ್ತೆ ಮಂಗಳೂರಿಗೆ ನಿಯೋಜನೆ ಮಾಡಿಕೊಂಡಿದ್ದ. ಮುಂದಿನ ವಾರ ಆತ ಮತ್ತೆ ಅದೇ ಜಾಗಕ್ಕೆ ಬರಲಿದ್ದಾನೆ ಎನ್ನುವ ಮಾಹಿತಿ ತಿಳಿಯುತ್ತಲೇ ಹಳೆ ಫೋಟೊ, ವಿಡಿಯೋಗಳನ್ನು ಮಾಧ್ಯಮಕ್ಕೆ ಸಿಗುವಂತೆ ಹೊರಗೆ ಬಿಟ್ಟಿದ್ದಾರೆ.
Mangalore Doctor found romancing and sexual harassing staffs at Wenlock hospital, Suspended. Dr Ratnakar is the suspended doctor. He was mentally torturing staffs to romance with me.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm