ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.


ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm