ಬ್ರೇಕಿಂಗ್ ನ್ಯೂಸ್
27-11-21 06:47 pm HK Desk news ಕರಾವಳಿ
ಮಂಗಳೂರು, ನ.27: ಹಿಂದುಗಳು ಭಾವನಾತ್ಮಕವಾಗಿ ಪವಿತ್ರವೆಂದು ನಂಬುವ ನಾಗನ ಕಲ್ಲು ಧ್ವಂಸ ಆಗಿದ್ದರೂ, ಸಂಯಮ ವಹಿಸಿದ್ದಾರೆ. ಬೇರೆ ಧರ್ಮದವರು ತಮ್ಮ ದೇವರುಗಳ ನಿಂದನೆಯಾದ ಸಂದರ್ಭದಲ್ಲಿ ವಿಪರೀತವಾಗಿ ನಡೆದುಕೊಂಡಿದ್ದನ್ನು ನಾವು ನೋಡಿದ್ದೇವೆ. ಹಾಗೆ ನೋಡಿದರೆ, ಹಿಂದು ಸಂಘಟನೆಗಳ ಕಾರ್ಯಕರ್ತರ ಸಂಯಮ ಮೆಚ್ಚಬೇಕು. ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ನಾಗನ ಕಲ್ಲು ಅಪವಿತ್ರಗೊಳಿಸಿದ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಿದ ಪೊಲೀಸರನ್ನು ಅಭಿನಂದಿಸುವುದಾಗಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ.


ಸುದ್ದಿಗೋಷ್ಠಿ ಕರೆದು ಮಾತನಾಡಿದ ಭರತ್ ಶೆಟ್ಟಿ, ಹಾಗೆಂದು ಈ ಘಟನೆಯನ್ನು ಅಷ್ಟಕ್ಕೇ ಬಿಡಬಾರದು. ಪೊಲೀಸರು ಇದರ ಬಗ್ಗೆ ಸಮಗ್ರವಾದ ತನಿಖೆ ಕೈಗೆತ್ತಿಕೊಳ್ಳಬೇಕು. ಇದರ ಹಿಂದೆ ಯಾರಿದ್ದಾರೆ, ಭಾರೀ ಷಡ್ಯಂತ್ರ ಅಡಗಿದ್ದನ್ನು ಪೊಲೀಸರೇ ಹೇಳಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ, ಇದರ ಹಿಂದೆ ರಾಜಕೀಯ ಪಿತೂರಿ ಇತ್ತು. ಕೋಮು ಗಲಭೆ ಎಬ್ಬಿಸುವ ಮೂಲಕ ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ಇತ್ತು. ಆರೋಪಿಗಳಲ್ಲಿ ಕೆಲವರು ರಾಜಕೀಯ ನಾಯಕರ ಸಂಬಂಧಿಕರಿದ್ದಾರೆ. ಹೀಗಾಗಿ ಇದರ ಹಿಂದೆ ರಾಜಕೀಯ ಪಕ್ಷಗಳ ಪಿತೂರಿ, ಷಡ್ಯಂತ್ರ ಇರಲಿಕ್ಕಿಲ್ಲ ಎನ್ನಲಾಗುವುದಿಲ್ಲ. ವ್ಯವಸ್ಥಿತ ಸಂಚಿನ ಬಗ್ಗೆ ಪೊಲೀಸರು ಇನ್ನಷ್ಟು ತನಿಖೆ ನಡೆಸಬೇಕೆಂದು ಆಗ್ರಹಿಸುವುದಾಗಿ ಹೇಳಿದರು.
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಹಲವು ತಿಂಗಳುಗಳಿಂದಲೂ ಇದೇ ರೀತಿಯ ಪ್ರಕರಣಗಳು ನಡೆಯುತ್ತಾ ಬಂದಿದೆ. ಕಾವೂರಿನಲ್ಲಿ ಹಲ್ಲೆ ಪ್ರಕರಣವೂ ವಿನಾಕಾರಣ ನಡೆದಿತ್ತು. ಸಮಾಜದಲ್ಲಿ ಅಶಾಂತಿ ಮೂಡಿಸುವುದು, ಗಲಭೆ ಎಬ್ಬಿಸುವ ಕುತಂತ್ರ ಇದರ ಹಿಂದಿರುವುದು ಇಂಥ ಕೃತ್ಯಗಳಿಂದ ಸ್ಪಷ್ಟವಾಗುತ್ತಿದೆ. ರಾಜಕೀಯ ದುರುದ್ದೇಶವೂ ಇದರ ಹಿಂದಿರುವ ಸಾಧ್ಯತೆ ಕಂಡುಬರುತ್ತಿದೆ. ಪದೇ ಪದೇ ಹಿಂದು ಧಾರ್ಮಿಕ ಕ್ಷೇತ್ರಗಳ ಮೇಲೆ ದಾಳಿಯಾಗುತ್ತಿದ್ದು, ಹಿಂದುಗಳ ತಾಳ್ಮೆಯನ್ನು ದೌರ್ಬಲ್ಯ ಅಂತ ಅನಿಸ್ಕೊಳ್ಳುವುದು ಬೇಕಿಲ್ಲ ಎಂದು ಭರತ್ ಶೆಟ್ಟಿ ಹೇಳಿದರು.
Mangalore City North MLA Dr Bharath Y Shetty congratulated the police department for successfully cracking the Naga Bana desecration case. As elections are approaching in less than 2 years, I suspect political conspiracy behind this by the opposition. We also urge to arrest those who helped in the unholy act through financial support. As per information, one of the arrested accused belongs to a political leader’s family. When we see the entire issue, we suspect it to be a political conspiracy,” he said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm