ಬ್ರೇಕಿಂಗ್ ನ್ಯೂಸ್
28-11-21 04:34 pm Mangaluru Correspondent ಕರಾವಳಿ
ಮಂಗಳೂರು: 2014ರಲ್ಲಿ ನಡೆದ ಅಪ್ರಾಪ್ತ ದಲಿತ ಬಾಲಕಿಯ ಕಿಡ್ನಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಏಳು ವರ್ಷಗಳ ಕಠಿಣ ಸಜೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಅಪ್ರಾಪ್ತ ಬಾಲಕಿಯ ಅಪಹರಣ ಆರೋಪಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು 5000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ 15 ದಿನಗಳ ಕಠಿಣ ಶಿಕ್ಷೆ, ಅತ್ಯಾಚಾರ ಆರೋಪಕ್ಕೆ 7 ವರ್ಷ ಕಠಿಣ ಸಜೆ ಮತ್ತು 10 ಸಾವಿರ ರೂ. ದಂಡ ಹಾಗೂ ದಂಡ ಪಾವತಿಸಲು ತಪ್ಪಿದರೆ ಎರಡು ತಿಂಗಳ ಕಠಿಣ ಸಜೆಯನ್ನು ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೇಪು ಗ್ರಾಮದ ನೀರ್ಕಜೆಯ ನಿತಿನ್ (27) ಎಂಬಾತ 2014 ರಲ್ಲಿ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ 17 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದನು. ಆರೋಪಿ ನಿತಿನ್, ಖಾಸಗಿ ಬಸ್ಸಿನ ಕಂಡಕ್ಟರ್ ಆಗಿದ್ದ. ಈತನ ಬಸ್ನಲ್ಲಿ ಬಾಲಕಿ ಕಾಲೇಜಿಗೆ ಹೋಗಿ ಬರುತ್ತಿದ್ದಳು. ಆರೋಪಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದನು.
2014 ಜುಲೈ 24ರಂದು ಪುತ್ತೂರಿಗೆ ಬರುವಂತೆ ಹೇಳಿ ನಿನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ರಾತ್ರಿ ವೇಳೆ ಸ್ಲೀಪರ್ ಬಸ್ನಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದ. ಬಸ್ನಲ್ಲಿ ಪ್ರಯಾಣಿಸುವ ವೇಳೆ ನಿತಿನ್ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಬೆಂಗಳೂರಿಗೆ ತೆರಳಿದ ಬಳಿಕ ಅಲ್ಲಿ ಎರಡು ದಿನ ಸುತ್ತಾಡಿಸಿದ್ದ.
ಈ ನಡುವೆ ಕಾಲೇಜಿಗೆಂದು ಹೋಗಿದ್ದ ಮಗಳು ವಾಪಸ್ ಬರದಿರುವ ಬಗ್ಗೆ ಬಾಲಕಿಯ ಪೋಷಕರು ವಿಟ್ಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ಬಾಲಕಿಯನ್ನು ನಿತಿನ್ ಬೆಂಗಳೂರಿಗೆ ಕರೆದುಕೊಂಡು ಹೋದ ಸುಳಿವು ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರಿಗೆ ತೆರಳಿ ಇವರನ್ನು ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದರು. ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿದ ನಿತಿನ್ ವಿರುದ್ಧ ಪ್ರಕರಣ ದಾಖಲಿಸಿದ್ದ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಬಂಟ್ವಾಳ ಡಿವೈಎಸ್ಪಿ ರಾಹುಲ್ ಕುಮಾರ್, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಪ್ರಕರಣದಲ್ಲಿ ಬಾಲಕಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.
Sullia Bus conductor rapes minor girl court sentences seven year jail term
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm