ಬ್ರೇಕಿಂಗ್ ನ್ಯೂಸ್
28-11-21 05:18 pm Mangaluru correspondent ಕರಾವಳಿ
ಮಂಗಳೂರು, ನ.28: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಹರಡುವ ಭಯದಲ್ಲಿ ರಾಜ್ಯ ಸರಕಾರ ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಿದೆ. ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ ರಾಜ್ಯಕ್ಕೆ ಪ್ರವೇಶ ನೀಡುವಂತೆ ಸೂಚನೆ ನೀಡಲಾಗಿದೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲೆಯನ್ನು ಕೇರಳದಿಂದ ಸಂಪರ್ಕಿಸುವ ರಸ್ತೆಗಳಲ್ಲಿ ಕಟ್ಟುನಿಟ್ಟು ಮಾಡಲಾಗಿದೆ.
ತಲಪಾಡಿ ಗಡಿಭಾಗದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಕೇರಳದಿಂದ ಆಗಮಿಸುವವರನ್ನು ನಿರಂತರ ತಪಾಸಣೆ ನಡೆಸಲಾಗುತ್ತಿದೆ. ಭಾನುವಾರ ಬೆಳಗ್ಗಿನಿಂದಲೇ ಗಡಿಯಲ್ಲಿ ಪೊಲೀಸರು ನಿಂತು ತಪಾಸಣೆ ಕೈಗೊಂಡಿದ್ದಾರೆ. ಆದರೆ, ಆ ಕಡೆಯಿಂದ ಬರುವವರನ್ನು ನೆಗೆಟಿವ್ ರಿಪೋರ್ಟ್ ಬೇಕೆಂದು ಹೇಳಿ ಒಳಗೆ ಬಿಡುತ್ತಿದ್ದಾರೆ. ಸೋಮವಾರದಿಂದ ಯಾವುದೇ ಕಾರಣಕ್ಕೂ ಪ್ರವೇಶ ನೀಡಲಾಗುವುದಿಲ್ಲ ಎಂದು ಹೇಳುತ್ತಿದ್ದಾರೆ.


ಈ ಬಗ್ಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಬಳಿ ಕೇಳಿದರೆ, ರಾಜ್ಯ ಸರಕಾರದ ಸ್ಪಷ್ಟ ಸೂಚನೆಯಿದ್ದು, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದಲ್ಲಿ ಮಾತ್ರ ಒಳಬಿಡಲಾಗುವುದು. ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲ ಒಳರಸ್ತೆಗಳನ್ನೂ ಬಂದ್ ಮಾಡಲಾಗುವುದು. ಅಲ್ಲದೆ, ಗಡಿಭಾಗದಲ್ಲಿ ಮೂರು ಪಾಳಿಯಲ್ಲಿ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು. ಕೇರಳ ಭಾಗದಲ್ಲಿ ಪಾಸಿಟಿವ್ ರೇಟ್ ಹೆಚ್ಚಿರುವುದರಿಂದ ಕೊರೊನಾ ಹರಡುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ರೇಟ್ 0.3ಯಲ್ಲಿದ್ದು ಶನಿವಾರ ನಾಲ್ಕೂವರೆ ಸಾವಿರ ಟೆಸ್ಟಿಂಗ್ ನಲ್ಲಿ 13 ಮಂದಿ ಪಾಸಿಟಿವ್ ಆಗಿದ್ದರು. ಆದರೆ, ಒಟ್ಟು ಪಾಸಿಟಿವ್ ಆಗಿರುವ ಸಕ್ರಿಯ ಸೋಂಕಿತರ ಸಂಖ್ಯೆ 120 ಆಗಿದ್ದು, ಆ ಪೈಕಿ 32 ಮಂದಿ ವಿದ್ಯಾರ್ಥಿಗಳು. ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಲ್ಲಿಯೇ ಪಾಸಿಟಿವ್ ಹೆಚ್ಚಿರುವುದು ಕಂಡುಬಂದಿದೆ. ಈಗ ಕೇರಳದಿಂದ ಬಂದು ಹಾಸ್ಟೆಲ್ ನಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳನ್ನು ಮತ್ತೆ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಅದಲ್ಲದೆ, ವಿದೇಶದಿಂದ ಕಳೆದ 15 ದಿನಗಳಲ್ಲಿ ಆಗಮಿಸಿರುವ ಮಂದಿಯನ್ನು ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
Mangalore Omicron variant Kerala and Maha border strictly monitored by Police. As a precautionary measure, the authorities in Karnataka have made Covid test compulsory for all passengers arriving from Kerala and Maharashtra, officials said on Saturday. An official said awareness, along with vaccination, is necessary amid fears of the new Omicron variant, as well as Covid outbreak at a medical college in Dharwad, Mysuru and Bengaluru institutions.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm