ಬ್ರೇಕಿಂಗ್ ನ್ಯೂಸ್
03-12-21 08:35 pm HK Desk news ಕರಾವಳಿ
ಮಂಗಳೂರು, ಡಿ.3: ಗುರುವಾರ ರಾತ್ರಿ ಗುಜ್ಜರಕೆರೆಯಲ್ಲಿ ಯೇನಪೋಯ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಪರಸ್ಪರ ಗುಂಪು ಕಟ್ಟಿಕೊಂಡು ಹೊಡೆದಾಡಿದ ಘಟನೆ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಎದುರಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರದೇಶದಿಂದ ಕಾಲೇಜಿನ ಹಾಸ್ಟೆಲನ್ನೇ ಸ್ಥಳಾಂತರ ಮಾಡಬೇಕೆಂದು ಆಗ್ರಹ ಮಾಡಿದ್ದಾರೆ.
ಪ್ರತಿ ದಿನವೂ ಈ ಭಾಗದಲ್ಲಿ ವಿದ್ಯಾರ್ಥಿಗಳು ಕೀಟಲೆ ಮಾಡುತ್ತಾರೆ. ತಡರಾತ್ರಿ ವರೆಗೂ ಬೈಕ್ ರೈಸ್ ಮಾಡಿ ಕಿರುಕುಳ ಕೊಡುತ್ತಾರೆ. ಹಾರ್ನ್ ಮಾಡುವುದು, ಅರೆಬರೆ ಬಟ್ಟೆ ಧರಿಸಿಕೊಂಡು ಅಡ್ಡಾಡುವುದು, ಕಿರುಚಾಡುವುದು ಹೀಗೆ ಸ್ಥಳೀಯರಿಗೆ ನೆಮ್ಮದಿ ಇಲ್ಲದಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಇತ್ತೀಚೆಗೆ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉರಿಸಿ, ಬೇರೆ ಮನೆಗಳಿಗೆ ಎಸೆದು ಕೀಟಲೆ ಕೊಟ್ಟಿದ್ದಾರೆ. ಹಾಸ್ಟೆಲ್ ಮೇಲ್ಗಡೆ ನಿಂತು ಪಟಾಕಿಯನ್ನು ಹತ್ತಿರದ ಮನೆಗಳತ್ತ ತೂರಿದ್ದರು ಎಂದು ಅಲ್ಲಿನ ನಿವಾಸಿಯೊಬ್ಬರು ಕಮಿಷನರ್ ಬಳಿ ಅಳಲು ತೋಡಿಕೊಂಡರು. ಯೇನಪೋಯ ಕಾಲೇಜಿನ ಆಡಳಿತ, ಹಾಸ್ಟೆಲನ್ನು ಬೇರೆ ಕಡೆಗೆ ಶಿಫ್ಟ್ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದರು.


ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿ, ಈಗಾಗ್ಲೇ ಪಾಂಡೇಶ್ವರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಿದ್ದು, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದೇವೆ. ಸ್ಥಳೀಯರು ಈ ಬಗ್ಗೆ ದೂರು ಕೊಡುವುದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ, ಕಾಲೇಜಿನ ಪ್ರಿನ್ಸಿಪಾಲ್ ಮಾತನಾಡಿ, ನಾವು ರ್ಯಾಗಿಂಗ್ ಕಮಿಟಿ ಮಾಡಿದ್ದೇವೆ. ಆಗಿಂದಾಗ್ಗೆ ಕಾಲೇಜಿನ ಆಡಳಿತಕ್ಕೆ ರಿಪೋರ್ಟ್ ಕೊಡುತ್ತೇವೆ. ಆದರ್ಶ್ ಎಂಬ ವಿದ್ಯಾರ್ಥಿಯನ್ನು ಮೂರು ಬಾರಿ ಅಮಾನತು ಮಾಡಿದ್ದೇವೆ. ಹಾಗಿದ್ದರೂ ಕಲಿಯುವುದಕ್ಕೆ ಅವಕಾಶ ಕೊಟ್ಟಿದ್ದೇವೆ. ಈ ಬಗ್ಗೆ ಸ್ವಲ್ಪ ಸಮಯ ಕೊಡಿ, ಸಮಸ್ಯೆ ಇತ್ಯರ್ಥ ಮಾಡುತ್ತೇವೆ ಎಂದು ಸ್ಥಳೀಯರಲ್ಲಿ ಕೇಳಿಕೊಂಡರು. ಶಾಸಕ ವೇದವ್ಯಾಸ ಕಾಮತ್, ವಿಎಚ್ ಪಿ ಮುಖಂಡ ಶರಣ್ ಪಂಪ್ವೆಲ್ ಸ್ಥಳಕ್ಕೆ ಬಂದಿದ್ದರು.
ಗುರುವಾರ ರಾತ್ರಿ ಗುಜ್ಜರಕೆರೆಯಲ್ಲಿ ಎರಡು ತಂಡಗಳ ನಡುವೆ ಬೀದಿಕಾಳಗ ನಡೆದಿದ್ದು, ಬಳಿಕ ವಿದ್ಯಾರ್ಥಿಗಳು ಪೊಲೀಸರ ಮೇಲೂ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Locals in Gujjarakere protested on Friday December 3 and demanded the students to vacate the college hostel after the two groups of students engaged in a clash on the night of December 2. Police commissioner N Shashi Kumar visited the spot and interacted with the locals
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm