ಬ್ರೇಕಿಂಗ್ ನ್ಯೂಸ್
03-12-21 08:35 pm HK Desk news ಕರಾವಳಿ
ಮಂಗಳೂರು, ಡಿ.3: ಗುರುವಾರ ರಾತ್ರಿ ಗುಜ್ಜರಕೆರೆಯಲ್ಲಿ ಯೇನಪೋಯ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಪರಸ್ಪರ ಗುಂಪು ಕಟ್ಟಿಕೊಂಡು ಹೊಡೆದಾಡಿದ ಘಟನೆ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಎದುರಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರದೇಶದಿಂದ ಕಾಲೇಜಿನ ಹಾಸ್ಟೆಲನ್ನೇ ಸ್ಥಳಾಂತರ ಮಾಡಬೇಕೆಂದು ಆಗ್ರಹ ಮಾಡಿದ್ದಾರೆ.
ಪ್ರತಿ ದಿನವೂ ಈ ಭಾಗದಲ್ಲಿ ವಿದ್ಯಾರ್ಥಿಗಳು ಕೀಟಲೆ ಮಾಡುತ್ತಾರೆ. ತಡರಾತ್ರಿ ವರೆಗೂ ಬೈಕ್ ರೈಸ್ ಮಾಡಿ ಕಿರುಕುಳ ಕೊಡುತ್ತಾರೆ. ಹಾರ್ನ್ ಮಾಡುವುದು, ಅರೆಬರೆ ಬಟ್ಟೆ ಧರಿಸಿಕೊಂಡು ಅಡ್ಡಾಡುವುದು, ಕಿರುಚಾಡುವುದು ಹೀಗೆ ಸ್ಥಳೀಯರಿಗೆ ನೆಮ್ಮದಿ ಇಲ್ಲದಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಇತ್ತೀಚೆಗೆ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉರಿಸಿ, ಬೇರೆ ಮನೆಗಳಿಗೆ ಎಸೆದು ಕೀಟಲೆ ಕೊಟ್ಟಿದ್ದಾರೆ. ಹಾಸ್ಟೆಲ್ ಮೇಲ್ಗಡೆ ನಿಂತು ಪಟಾಕಿಯನ್ನು ಹತ್ತಿರದ ಮನೆಗಳತ್ತ ತೂರಿದ್ದರು ಎಂದು ಅಲ್ಲಿನ ನಿವಾಸಿಯೊಬ್ಬರು ಕಮಿಷನರ್ ಬಳಿ ಅಳಲು ತೋಡಿಕೊಂಡರು. ಯೇನಪೋಯ ಕಾಲೇಜಿನ ಆಡಳಿತ, ಹಾಸ್ಟೆಲನ್ನು ಬೇರೆ ಕಡೆಗೆ ಶಿಫ್ಟ್ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದರು.
ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿ, ಈಗಾಗ್ಲೇ ಪಾಂಡೇಶ್ವರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಿದ್ದು, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದೇವೆ. ಸ್ಥಳೀಯರು ಈ ಬಗ್ಗೆ ದೂರು ಕೊಡುವುದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ, ಕಾಲೇಜಿನ ಪ್ರಿನ್ಸಿಪಾಲ್ ಮಾತನಾಡಿ, ನಾವು ರ್ಯಾಗಿಂಗ್ ಕಮಿಟಿ ಮಾಡಿದ್ದೇವೆ. ಆಗಿಂದಾಗ್ಗೆ ಕಾಲೇಜಿನ ಆಡಳಿತಕ್ಕೆ ರಿಪೋರ್ಟ್ ಕೊಡುತ್ತೇವೆ. ಆದರ್ಶ್ ಎಂಬ ವಿದ್ಯಾರ್ಥಿಯನ್ನು ಮೂರು ಬಾರಿ ಅಮಾನತು ಮಾಡಿದ್ದೇವೆ. ಹಾಗಿದ್ದರೂ ಕಲಿಯುವುದಕ್ಕೆ ಅವಕಾಶ ಕೊಟ್ಟಿದ್ದೇವೆ. ಈ ಬಗ್ಗೆ ಸ್ವಲ್ಪ ಸಮಯ ಕೊಡಿ, ಸಮಸ್ಯೆ ಇತ್ಯರ್ಥ ಮಾಡುತ್ತೇವೆ ಎಂದು ಸ್ಥಳೀಯರಲ್ಲಿ ಕೇಳಿಕೊಂಡರು. ಶಾಸಕ ವೇದವ್ಯಾಸ ಕಾಮತ್, ವಿಎಚ್ ಪಿ ಮುಖಂಡ ಶರಣ್ ಪಂಪ್ವೆಲ್ ಸ್ಥಳಕ್ಕೆ ಬಂದಿದ್ದರು.
ಗುರುವಾರ ರಾತ್ರಿ ಗುಜ್ಜರಕೆರೆಯಲ್ಲಿ ಎರಡು ತಂಡಗಳ ನಡುವೆ ಬೀದಿಕಾಳಗ ನಡೆದಿದ್ದು, ಬಳಿಕ ವಿದ್ಯಾರ್ಥಿಗಳು ಪೊಲೀಸರ ಮೇಲೂ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Locals in Gujjarakere protested on Friday December 3 and demanded the students to vacate the college hostel after the two groups of students engaged in a clash on the night of December 2. Police commissioner N Shashi Kumar visited the spot and interacted with the locals
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm