ಬ್ರೇಕಿಂಗ್ ನ್ಯೂಸ್
05-12-21 11:15 pm HK Desk news ಕರಾವಳಿ
ಮಂಗಳೂರು, ಡಿ.5: ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ದುಬೈನ ಶಾರ್ಜಾಕ್ಕೆ ಹೊರಟಿದ್ದ ಕುಟುಂಬದ ಮಹಿಳೆಗೆ ಹೃದಯಾಘಾತ ಆಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ತೊಂದರೆ ಉಂಟಾಗಿದ್ದು ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಎದುರಿಸಿದ್ದರು. ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು ಪತಿಯೊಂದಿಗೆ ಶಾರ್ಜಾಕ್ಕೆ ತೆರಳುತ್ತಿದ್ದಾಗ ಡಿ.3 ರಂದು ಘಟನೆ ನಡೆದಿದೆ. ಈ ಬಗ್ಗೆ ಏರ್ಪೋರ್ಟ್ ಆಪರೇಶನ್ ಕಂಟ್ರೋಲ್ ಸೆಂಟ್ರಲ್ ಗೆ ಬೆಳಗ್ಗೆ 9.20 ಕ್ಕೆ ಸಂದೇಶ ಬಂದಿದ್ದು ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ವಿಮಾನವನ್ನು ತುರ್ತಾಗಿ ನಿಲ್ದಾಣದಲ್ಲಿ ಇಳಿಸಿ, ಮೂರು ಮಕ್ಕಳು ಮತ್ತು ಮಹಿಳೆ ಹಾಗೂ ಪತಿಯನ್ನು ಅಧಿಕಾರಿಗಳು ನೇರವಾಗಿ ಎಜೆ ಆಸ್ಪತ್ರೆಗೆ ಕರೆತಂದಿದ್ದಾರೆ. ಬೆಳಗ್ಗೆ ಹತ್ತು ಗಂಟೆಗೆ ವಿಮಾನ ಲ್ಯಾಂಡ್ ಆಗಿದ್ದು 17 ನಿಮಿಷದಲ್ಲಿ ಎಜೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಏರ್ಪೋರ್ಟ್ ಅಧಿಕಾರಿಗಳು, ಆರೋಗ್ಯ ಸಿಬಂದಿ ಕೂಡ ಮಹಿಳೆ ಜೊತೆಗೆ ಬಂದಿದ್ದರು.
ವೈದ್ಯರು ಬಳಿಕ ಚಿಕಿತ್ಸೆ ನೀಡಿದ್ದು ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಅದರಂತೆ, ಮಹಿಳೆ ಮತ್ತು ಕುಟುಂಬವನ್ನು ಅದೇ ದಿನ ರಾತ್ರಿ 11 ಗಂಟೆಗೆ ಶಾರ್ಜಾಕ್ಕೆ ಕರೆದೊಯ್ಯಲು ಏರ್ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
Woman gets heart attack in Dubai Sharjah flight emergency landing made in Mangalore. The flight was from Kannur and made emergency landing in Mangalore International Airport.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm