ಬ್ರೇಕಿಂಗ್ ನ್ಯೂಸ್
14-09-20 01:16 pm Mangalore Correspondent ಕರಾವಳಿ
ಮಂಗಳೂರು, ಸೆ.14: ಡಾ.ಎಮ್.ವಿ.ಶೆಟ್ಟಿ ಟ್ರಸ್ಟ್ ಕಾಲೇಜುಗಳ ಸ್ಥಾಪಕ ಕಾರ್ಯದರ್ಶಿ ಡಾ.ಎಮ್.ಆರ್.ಶೆಟ್ಟಿ ಇಂದು ನಿಧರಾಗಿದ್ದಾರೆ.
ದಿವಂಗತ ಡಾ. ಎಮ್.ವಿ.ಶೆಟ್ಟಿಯವರ ಪುತ್ರರಾಗಿರುವ ಡಾ. ಎಮ್. ರಾಮಗೋಪಾಲ ಶೆಟ್ಟಿ ಅವರು ಪತ್ನಿ ಪ್ರೊ.ಹಿಮಾ ಊರ್ಮಿಳಾ ಶೆಟ್ಟಿ, ಮಕ್ಕಳಾದ ಡಾ. ದಿವ್ಯಾಂಜಲಿ ಶೆಟ್ಟಿ, ಡಾ. ರೋಹಿಲಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಡಾ.ಎಮ್.ವಿ. ಶೆಟ್ಟಿ ಟ್ರಸ್ಟ್ ಮೂಲಕ ರಾಮಗೋಪಾಲ ಶೆಟ್ಟಿಯವರು ಮಂಗಳೂರು ಯುನಿವರ್ಸಿಟಿ ಅಡಿಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ, ವಾಕ್ ಹಾಗೂ ಶ್ರವಣ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಹಾಗೂ ಸಾಮಾಜಿಕ ಕಾರ್ಯ ಹಾಗೂ ಶಿಕ್ಷಣದಂತಹ ಹಲವು ವೃತ್ತಿಪರ ಕೋರ್ಸ್ಗಳನ್ನು ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಮಾರ್ಗದರ್ಶನ ಹಾಗೂ ಆಡಳಿತದ ಅಡಿಯಲ್ಲಿ ಟ್ರಸ್ಟ್ ಬೆಂಗಳೂರಿನ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಮಂಗಳೂರು ಯುನಿವರ್ಸಿಟಿಯ ಸಂಯೋಜಿತ 15 ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು 8 ವಿಭಿನ್ನ ವಿಭಾಗಗಳಲ್ಲಿ ಆರಂಭಿಸಿತ್ತು.
ಡಾ.ಶೆಟ್ಟಿಯವರು ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದು, ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ತನ್ನ ಪದವಿ ಹಾಗೂ ಸ್ನಾತಕೋತ್ತರ ವೃತ್ತಿಪರ ಶಿಕ್ಷಣವನ್ನು ಪೂರೈಸಿದ್ದರು. ಬಳಿಕ ಅವರು ಉನ್ನತ ಶಿಕ್ಷಣಕ್ಕೆ ಇಂಗ್ಲೆಂಡ್ಗೆ ತೆರಳಿದರು. ಇಂಗ್ಲೆಂಡ್ನಿಂದ ವಾಪಾಸಾದ ಬಳಿಕ ಕೆ.ಎಂ.ಸಿ.ಯಲ್ಲಿ ಸರ್ಜರಿಯ ಸಹಾಯಕ ಪ್ರೊಫೆಸರ್ ಆದರು. 1989ರ ತನಕ ಇಲ್ಲಿಯೇ ಸೇವೆ ಸಲ್ಲಿಸಿದ್ದರು.
ಭಾರತೀಯ ಪುನರ್ವಸತಿ ಮಂಡಳಿಯ ಕಾರ್ಯಕಾರಿ ಸದಸ್ಯರಾಗಿಯೂ, ಮಂಗಳೂರು ಯುನಿವರ್ಸಿಟಿ ಹಾಗೂ ಬೆಂಗಳೂರಿನ ಆರ್ಜಿಯುಜಿಎಚ್ಎಸ್ನಲ್ಲಿ ಮೂರು ವರ್ಷಗಳ ಕಾಲ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Join our WhatsApp group for latest news updates
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am