ಬ್ರೇಕಿಂಗ್ ನ್ಯೂಸ್
14-09-20 01:16 pm Mangalore Correspondent ಕರಾವಳಿ
ಮಂಗಳೂರು, ಸೆ.14: ಡಾ.ಎಮ್.ವಿ.ಶೆಟ್ಟಿ ಟ್ರಸ್ಟ್ ಕಾಲೇಜುಗಳ ಸ್ಥಾಪಕ ಕಾರ್ಯದರ್ಶಿ ಡಾ.ಎಮ್.ಆರ್.ಶೆಟ್ಟಿ ಇಂದು ನಿಧರಾಗಿದ್ದಾರೆ.
ದಿವಂಗತ ಡಾ. ಎಮ್.ವಿ.ಶೆಟ್ಟಿಯವರ ಪುತ್ರರಾಗಿರುವ ಡಾ. ಎಮ್. ರಾಮಗೋಪಾಲ ಶೆಟ್ಟಿ ಅವರು ಪತ್ನಿ ಪ್ರೊ.ಹಿಮಾ ಊರ್ಮಿಳಾ ಶೆಟ್ಟಿ, ಮಕ್ಕಳಾದ ಡಾ. ದಿವ್ಯಾಂಜಲಿ ಶೆಟ್ಟಿ, ಡಾ. ರೋಹಿಲಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಡಾ.ಎಮ್.ವಿ. ಶೆಟ್ಟಿ ಟ್ರಸ್ಟ್ ಮೂಲಕ ರಾಮಗೋಪಾಲ ಶೆಟ್ಟಿಯವರು ಮಂಗಳೂರು ಯುನಿವರ್ಸಿಟಿ ಅಡಿಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ, ವಾಕ್ ಹಾಗೂ ಶ್ರವಣ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಹಾಗೂ ಸಾಮಾಜಿಕ ಕಾರ್ಯ ಹಾಗೂ ಶಿಕ್ಷಣದಂತಹ ಹಲವು ವೃತ್ತಿಪರ ಕೋರ್ಸ್ಗಳನ್ನು ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಮಾರ್ಗದರ್ಶನ ಹಾಗೂ ಆಡಳಿತದ ಅಡಿಯಲ್ಲಿ ಟ್ರಸ್ಟ್ ಬೆಂಗಳೂರಿನ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಮಂಗಳೂರು ಯುನಿವರ್ಸಿಟಿಯ ಸಂಯೋಜಿತ 15 ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು 8 ವಿಭಿನ್ನ ವಿಭಾಗಗಳಲ್ಲಿ ಆರಂಭಿಸಿತ್ತು.
ಡಾ.ಶೆಟ್ಟಿಯವರು ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದು, ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ತನ್ನ ಪದವಿ ಹಾಗೂ ಸ್ನಾತಕೋತ್ತರ ವೃತ್ತಿಪರ ಶಿಕ್ಷಣವನ್ನು ಪೂರೈಸಿದ್ದರು. ಬಳಿಕ ಅವರು ಉನ್ನತ ಶಿಕ್ಷಣಕ್ಕೆ ಇಂಗ್ಲೆಂಡ್ಗೆ ತೆರಳಿದರು. ಇಂಗ್ಲೆಂಡ್ನಿಂದ ವಾಪಾಸಾದ ಬಳಿಕ ಕೆ.ಎಂ.ಸಿ.ಯಲ್ಲಿ ಸರ್ಜರಿಯ ಸಹಾಯಕ ಪ್ರೊಫೆಸರ್ ಆದರು. 1989ರ ತನಕ ಇಲ್ಲಿಯೇ ಸೇವೆ ಸಲ್ಲಿಸಿದ್ದರು.
ಭಾರತೀಯ ಪುನರ್ವಸತಿ ಮಂಡಳಿಯ ಕಾರ್ಯಕಾರಿ ಸದಸ್ಯರಾಗಿಯೂ, ಮಂಗಳೂರು ಯುನಿವರ್ಸಿಟಿ ಹಾಗೂ ಬೆಂಗಳೂರಿನ ಆರ್ಜಿಯುಜಿಎಚ್ಎಸ್ನಲ್ಲಿ ಮೂರು ವರ್ಷಗಳ ಕಾಲ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Join our WhatsApp group for latest news updates
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm