ಬ್ರೇಕಿಂಗ್ ನ್ಯೂಸ್
14-09-20 01:16 pm Mangalore Correspondent ಕರಾವಳಿ
ಮಂಗಳೂರು, ಸೆ.14: ಡಾ.ಎಮ್.ವಿ.ಶೆಟ್ಟಿ ಟ್ರಸ್ಟ್ ಕಾಲೇಜುಗಳ ಸ್ಥಾಪಕ ಕಾರ್ಯದರ್ಶಿ ಡಾ.ಎಮ್.ಆರ್.ಶೆಟ್ಟಿ ಇಂದು ನಿಧರಾಗಿದ್ದಾರೆ.
ದಿವಂಗತ ಡಾ. ಎಮ್.ವಿ.ಶೆಟ್ಟಿಯವರ ಪುತ್ರರಾಗಿರುವ ಡಾ. ಎಮ್. ರಾಮಗೋಪಾಲ ಶೆಟ್ಟಿ ಅವರು ಪತ್ನಿ ಪ್ರೊ.ಹಿಮಾ ಊರ್ಮಿಳಾ ಶೆಟ್ಟಿ, ಮಕ್ಕಳಾದ ಡಾ. ದಿವ್ಯಾಂಜಲಿ ಶೆಟ್ಟಿ, ಡಾ. ರೋಹಿಲಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಡಾ.ಎಮ್.ವಿ. ಶೆಟ್ಟಿ ಟ್ರಸ್ಟ್ ಮೂಲಕ ರಾಮಗೋಪಾಲ ಶೆಟ್ಟಿಯವರು ಮಂಗಳೂರು ಯುನಿವರ್ಸಿಟಿ ಅಡಿಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ, ವಾಕ್ ಹಾಗೂ ಶ್ರವಣ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಹಾಗೂ ಸಾಮಾಜಿಕ ಕಾರ್ಯ ಹಾಗೂ ಶಿಕ್ಷಣದಂತಹ ಹಲವು ವೃತ್ತಿಪರ ಕೋರ್ಸ್ಗಳನ್ನು ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಮಾರ್ಗದರ್ಶನ ಹಾಗೂ ಆಡಳಿತದ ಅಡಿಯಲ್ಲಿ ಟ್ರಸ್ಟ್ ಬೆಂಗಳೂರಿನ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಮಂಗಳೂರು ಯುನಿವರ್ಸಿಟಿಯ ಸಂಯೋಜಿತ 15 ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು 8 ವಿಭಿನ್ನ ವಿಭಾಗಗಳಲ್ಲಿ ಆರಂಭಿಸಿತ್ತು.
ಡಾ.ಶೆಟ್ಟಿಯವರು ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದು, ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ತನ್ನ ಪದವಿ ಹಾಗೂ ಸ್ನಾತಕೋತ್ತರ ವೃತ್ತಿಪರ ಶಿಕ್ಷಣವನ್ನು ಪೂರೈಸಿದ್ದರು. ಬಳಿಕ ಅವರು ಉನ್ನತ ಶಿಕ್ಷಣಕ್ಕೆ ಇಂಗ್ಲೆಂಡ್ಗೆ ತೆರಳಿದರು. ಇಂಗ್ಲೆಂಡ್ನಿಂದ ವಾಪಾಸಾದ ಬಳಿಕ ಕೆ.ಎಂ.ಸಿ.ಯಲ್ಲಿ ಸರ್ಜರಿಯ ಸಹಾಯಕ ಪ್ರೊಫೆಸರ್ ಆದರು. 1989ರ ತನಕ ಇಲ್ಲಿಯೇ ಸೇವೆ ಸಲ್ಲಿಸಿದ್ದರು.
ಭಾರತೀಯ ಪುನರ್ವಸತಿ ಮಂಡಳಿಯ ಕಾರ್ಯಕಾರಿ ಸದಸ್ಯರಾಗಿಯೂ, ಮಂಗಳೂರು ಯುನಿವರ್ಸಿಟಿ ಹಾಗೂ ಬೆಂಗಳೂರಿನ ಆರ್ಜಿಯುಜಿಎಚ್ಎಸ್ನಲ್ಲಿ ಮೂರು ವರ್ಷಗಳ ಕಾಲ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Join our WhatsApp group for latest news updates
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am