ಬ್ರೇಕಿಂಗ್ ನ್ಯೂಸ್
14-09-20 01:16 pm Mangalore Correspondent ಕರಾವಳಿ
ಮಂಗಳೂರು, ಸೆ.14: ಡಾ.ಎಮ್.ವಿ.ಶೆಟ್ಟಿ ಟ್ರಸ್ಟ್ ಕಾಲೇಜುಗಳ ಸ್ಥಾಪಕ ಕಾರ್ಯದರ್ಶಿ ಡಾ.ಎಮ್.ಆರ್.ಶೆಟ್ಟಿ ಇಂದು ನಿಧರಾಗಿದ್ದಾರೆ.
ದಿವಂಗತ ಡಾ. ಎಮ್.ವಿ.ಶೆಟ್ಟಿಯವರ ಪುತ್ರರಾಗಿರುವ ಡಾ. ಎಮ್. ರಾಮಗೋಪಾಲ ಶೆಟ್ಟಿ ಅವರು ಪತ್ನಿ ಪ್ರೊ.ಹಿಮಾ ಊರ್ಮಿಳಾ ಶೆಟ್ಟಿ, ಮಕ್ಕಳಾದ ಡಾ. ದಿವ್ಯಾಂಜಲಿ ಶೆಟ್ಟಿ, ಡಾ. ರೋಹಿಲಾ ಶೆಟ್ಟಿ ಅವರನ್ನು ಅಗಲಿದ್ದಾರೆ.
ಡಾ.ಎಮ್.ವಿ. ಶೆಟ್ಟಿ ಟ್ರಸ್ಟ್ ಮೂಲಕ ರಾಮಗೋಪಾಲ ಶೆಟ್ಟಿಯವರು ಮಂಗಳೂರು ಯುನಿವರ್ಸಿಟಿ ಅಡಿಯಲ್ಲಿ ನರ್ಸಿಂಗ್, ಫಿಸಿಯೋಥೆರಪಿ, ವಾಕ್ ಹಾಗೂ ಶ್ರವಣ, ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಹಾಗೂ ಸಾಮಾಜಿಕ ಕಾರ್ಯ ಹಾಗೂ ಶಿಕ್ಷಣದಂತಹ ಹಲವು ವೃತ್ತಿಪರ ಕೋರ್ಸ್ಗಳನ್ನು ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇವರ ಮಾರ್ಗದರ್ಶನ ಹಾಗೂ ಆಡಳಿತದ ಅಡಿಯಲ್ಲಿ ಟ್ರಸ್ಟ್ ಬೆಂಗಳೂರಿನ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಮಂಗಳೂರು ಯುನಿವರ್ಸಿಟಿಯ ಸಂಯೋಜಿತ 15 ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್ಗಳನ್ನು 8 ವಿಭಿನ್ನ ವಿಭಾಗಗಳಲ್ಲಿ ಆರಂಭಿಸಿತ್ತು.
ಡಾ.ಶೆಟ್ಟಿಯವರು ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲ್ನಲ್ಲಿ ಆರಂಭಿಕ ಶಿಕ್ಷಣ ಪಡೆದಿದ್ದು, ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ತನ್ನ ಪದವಿ ಹಾಗೂ ಸ್ನಾತಕೋತ್ತರ ವೃತ್ತಿಪರ ಶಿಕ್ಷಣವನ್ನು ಪೂರೈಸಿದ್ದರು. ಬಳಿಕ ಅವರು ಉನ್ನತ ಶಿಕ್ಷಣಕ್ಕೆ ಇಂಗ್ಲೆಂಡ್ಗೆ ತೆರಳಿದರು. ಇಂಗ್ಲೆಂಡ್ನಿಂದ ವಾಪಾಸಾದ ಬಳಿಕ ಕೆ.ಎಂ.ಸಿ.ಯಲ್ಲಿ ಸರ್ಜರಿಯ ಸಹಾಯಕ ಪ್ರೊಫೆಸರ್ ಆದರು. 1989ರ ತನಕ ಇಲ್ಲಿಯೇ ಸೇವೆ ಸಲ್ಲಿಸಿದ್ದರು.
ಭಾರತೀಯ ಪುನರ್ವಸತಿ ಮಂಡಳಿಯ ಕಾರ್ಯಕಾರಿ ಸದಸ್ಯರಾಗಿಯೂ, ಮಂಗಳೂರು ಯುನಿವರ್ಸಿಟಿ ಹಾಗೂ ಬೆಂಗಳೂರಿನ ಆರ್ಜಿಯುಜಿಎಚ್ಎಸ್ನಲ್ಲಿ ಮೂರು ವರ್ಷಗಳ ಕಾಲ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
Join our WhatsApp group for latest news updates
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 07:20 pm
Bengaluru Correspondent
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm