ಬ್ರೇಕಿಂಗ್ ನ್ಯೂಸ್
07-12-21 02:12 pm HK Desk news ಕರಾವಳಿ
ಮಂಗಳೂರು, ಡಿ.7: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸುವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ನಳಿನ್ ಕುಮಾರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದು ಒಳ್ಳೆಯದು. ಈ ಹಿಂದೆ ಕಾಂಗ್ರೆಸ್ ಕಾರ್ಯಕರ್ತರಾಗಿ ದುಡಿದವರು ನಳಿನ್ ಕುಮಾರ್ ಕಟೀಲ್. ಎನ್ಎಸ್ ಯುಐ ನಲ್ಲಿದ್ದಾಗ ವಿನಯ್ ಕುಮಾರ್ ಸೊರಕೆ ಪರ ನಳಿನ್ ಕುಮಾರ್ ಕಟೀಲ್ ಕೆಲಸ ಮಾಡಿದ್ದರು.
ಹಿಂದಿನದು ನಳಿನ್ ಗೆ ಈಗ ನೆನಪಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಬದ್ಧತೆ ಹಾಗು ಶಕ್ತಿ ನಳಿನ್ ಗೆ ಗೊತ್ತಿದೆ. ಹಾಗಾಗಿ ಈ ಮಾತು ಹೇಳುತ್ತಿದ್ದಾರೆ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದವರ ಚರಿತ್ರೆಯನ್ನು ಒಮ್ಮೆ ನೋಡಿಕೊಳ್ಳಲಿ. ಬಿಜೆಪಿಯಲ್ಲಿ ಅವರ ಸ್ಥಿತಿ ಏನಾಗಿದೆ ಎಂಬುದನ್ನು ಯೋಚಿಸಿ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಖಾದರ್, ಪಂಚಾಯತ್ ರಾಜ್ ವ್ಯವಸ್ಥೆಗೆ ಬಿಜೆಪಿ ಸರ್ಕಾರ ಮಾರಕ. ಈ ವ್ಯವಸ್ಥೆಯನ್ನೇ ಮುಗಿಸಿ ಹಾಕಲು ಬಿಜೆಪಿ ಸರಕಾರ ಯತ್ನಿಸುತ್ತಿದೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಬಿಜೆಪಿ ವಿರುದ್ದ ಮತ ಚಲಾಯಿಸಲಿದ್ದಾರೆ. ಬಿಜೆಪಿ ವಿರುದ್ದ ಗ್ರಾಮ ಪಂಚಾಯತ್ ಸದಸ್ಯರು ಸ್ವಾಭಿಮಾನದ ಮತ ಚಲಾಯಿಸಬೇಕು. ಬಿಜೆಪಿ ವಿರುದ್ದ ಮತ ಚಲಾಯಿಸಿ ಬಿಜೆಪಿ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಬೇಕು ಎಂದು ಕರೆ ನೀಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಎಲ್ಲಾ ವ್ಯವಸ್ಥೆಯನ್ನು ಬಿಜೆಪಿ ಮಾಡಿದೆ. ಆದರೆ ಕಾಂಗ್ರೆಸ್ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಲು ಪೂರಕ ಕೆಲಸ ಮಾಡಿದೆ. ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿತ್ತು. ಈ ಬಾರಿ ವಿಧಾನ ಪರಿಷತ್ ಚುನಾವಣಾ ಕಣಕ್ಕೆ ಕಾಂಗ್ರೆಸ್ ಅರ್ಹ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಪಂಚಾಯತ್ ರಾಜ್ ವಿಷಯದಲ್ಲಿ ಪಿಎಚ್ ಡಿ ಮಾಡಿರುವ ಮಂಜುನಾಥ ಭಂಡಾರಿಯವರನ್ನು ಕಣಕ್ಕಿಳಿಸಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಶತ ಸಿದ್ದ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
Everyone should cast their vote against the BJP government in order to upkeep their self-respect. If the gram panchayat members do not send warning messages about the pathetic state of the panchayat raj system, it will deteriorate,” said MLA U T Khader. He was speaking at the press meet that was held at Congress Bhavan on Tuesday December 7. He further said, “Under the rule of BJP, instead of decentralization of power, attempts are made to centralize. When Congress was in power, the honorary amount of president and vice president was increased. Now, in the 15th finance commission it is reduced by BJP.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 05:07 pm
Mangalore Correspondent
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
Kadri Kaibattal, Mangalore Rain, Landslide: ಕ...
15-06-25 09:50 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm