ಬ್ರೇಕಿಂಗ್ ನ್ಯೂಸ್
08-12-21 01:57 pm HK Desk news ಕರಾವಳಿ
ಮಂಗಳೂರು, ಡಿ.8 : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮತಾಂತರ ಚಟುವಟಿಕೆಯೇ ಕೃತ್ಯಕ್ಕೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಡೆತ್ ನೋಟ್ ಬರೆದಿರುವ ಪತಿ ನಾಗೇಶ್, ಮತಾಂತರಕ್ಕೆ ಪ್ರಯತ್ನ ನಡೆಸಿದ್ದ ಮಹಿಳೆಯ ಬಗ್ಗೆ ಮಾಹಿತಿ ನೀಡಿದ್ದಾನೆ.
ಮೋರ್ಗನ್ ಗೇಟ್ ಬಳಿ ಬಾಡಿಗೆ ಮನೆ ಹೊಂದಿದ್ದ ನಾಗೇಶ್ ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗಾ ಗ್ರಾಮದ ನಿವಾಸಿಯಾಗಿದ್ದು ಪತ್ನಿ , ಮಕ್ಕಳೊಂದಿಗೆ ವಾಸವಿದ್ದ. ಮೋರ್ಗನ್ ಗೇಟ್ ಬಳಿಯ ಮನೆಗೆ 15 ದಿನಗಳ ಹಿಂದಷ್ಟೇ ಬಂದಿದ್ದು ಅದಕ್ಕೂ ಹಿಂದೆ ವೇಲೆನ್ಸಿಯಾದಲ್ಲಿ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದುಕೊಂಡು ನಾಗೇಶ್ ಟ್ರಕ್ ಚಾಲಕನಾಗಿ ಕೆಲಸಕ್ಕೆ ಹೋಗುತ್ತಿದ್ದ. ಈ ನಡುವೆ, ಪತ್ನಿ ವಿಜಯಲಕ್ಷ್ಮಿ ಬಿಜೈ ನಿವಾಸಿ ಮುಸ್ಲಿಂ ಮಹಿಳೆಯೊಬ್ಬರ ಮನೆಗೆ ತೆರಳುತ್ತಿದ್ದಳು. ಮನೆ ಕೆಲಸಕ್ಕೆ ಹೋಗುತ್ತಿರುವುದಾಗಿ ವಿಜಯಲಕ್ಷ್ಮಿ ಹೇಳಿಕೊಂಡಿದ್ದಳು. ಆದರೆ, ಮಹಿಳೆಯ ಜೊತೆಗೆ ಅಲ್ಲಿಯೇ ಇರುತ್ತಿದ್ದಳು. ಕಳೆದ ಅಕ್ಟೋಬರ್ ತಿಂಗಳಲ್ಲಿ ವಿಜಯಲಕ್ಷ್ಮಿ ಗಂಡನ ಮನೆ ಬಿಟ್ಟು ಎಂಟು ದಿನಗಳ ಕಾಲ ಹೊರಗೆ ಹೋಗಿದ್ದಳು. ಈ ಬಗ್ಗೆ ಪತಿ ನಾಗೇಶ್, ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದ.
ಈ ನಡುವೆ ಪತ್ನಿ ಮತಾಂತರ ಆಗಿರುವ ಬಗ್ಗೆ ನಾಗೇಶ್ ಶಂಕಿಸಿ, ಗಲಾಟೆ ಮಾಡಿದ್ದ. ಇದೇ ವಿಚಾರದಲ್ಲಿ ಗಂಡ - ಹೆಂಡತಿ ಮಧ್ಯೆ ಜಗಳ ಆಗಿತ್ತು ಎನ್ನಲಾಗಿದೆ. ಬಳಿಕ ಪೊಲೀಸರು ಮಧ್ಯಸ್ಥಿಕೆ ವಹಿಸಿ ವಿಜಯಲಕ್ಷ್ಮಿಯನ್ನು ಮನವೊಲಿಸಿ ಗಂಡನ ಜೊತೆಗೇ ಇರುವಂತೆ ಮಾಡಿದ್ದರು. ಆದರೆ ಪತಿ ನಾಗೇಶ್ ಕುಡಿದು ಬಂದು ಹೊಡೆದು ಹಿಂಸೆ ನೀಡುತ್ತಿದ್ದ ಎಂದು ಪತ್ನಿ ವಿಜಯಲಕ್ಷ್ಮಿ ದೂರು ನೀಡಿದ್ದಳು.





ಇದೀಗ ಮೋರ್ಗನ್ ಗೇಟ್ ಮನೆಯಲ್ಲಿ ಏನು ಗಲಾಟೆ ಆಗಿತ್ತು ಅನ್ನೋದು ಗೊತ್ತಿಲ್ಲ. ನಿನ್ನೆ ರಾತ್ರಿ ಗಂಡ ನಾಗೇಶ್, ಹೆಂಡ್ತಿ ಮೇಲಿನ ಸಿಟ್ಟಿನಿಂದ ಫ್ರೈಡ್ ರೈಸ್ ನಲ್ಲಿ ವಿಷ ಬೆರೆಸಿ ತಂದಿರುವ ಶಂಕೆಯಿದ್ದು ಪತ್ನಿ ಮಕ್ಕಳಿಗೆ ಉಣಿಸಿದ್ದಾನೆ. ಅಲ್ಲದೆ, ರಾತ್ರಿ ವೇಳೆ ಪತ್ನಿಯನ್ನು ಮಲಗಿದಲ್ಲೇ ತಲೆದಿಂಬು ಮುಖಕ್ಕೆ ಇಟ್ಟು ಉಸಿರು ಕಟ್ಟಿಸಿ ಸಾಯಿಸಿದ ಬಗ್ಗೆ ಶಂಕೆಯಿದೆ. ಪತ್ನಿ ಮುಖದಲ್ಲಿ ರಕ್ತ ಬಂದಿದ್ದು ಬೆಡ್ ನಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ಸಣ್ಣ ಮಗು ತಾಯಿ ಜೊತೆಗಿದ್ದರೆ, ದೊಡ್ಡ ಮಗಳು ಹೊರಗಡೆ ಮಲಗಿದಲ್ಲೇ ಶವವಾಗಿದ್ದಳು. ನಾಗೇಶ್ ಇಂದು ಬೆಳಗ್ಗೆ ನೇಣಿಗೆ ಶರಣಾಗಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.
ಬಿಜೈ ನಿವಾಸಿ ನೂರ್ ಜಾನ್ ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಪಾಂಡೇಶ್ವರ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ. ಸ್ಥಳಕ್ಕಾಗಮಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಘಟನೆ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಮೃತ ನಾಗೇಶ್, ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬಾಡಿಗೆ ಮನೆಯ ಮಾಲೀಕರು ಕ್ವಾರಿ ಹೊಂದಿದ್ದು ಅವರ ಜೊತೆಗೇ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಿಲ್ಲ ಯಾಕೆ, ಕೆಲಸ ಬೇಗ ಇತ್ತು ಎಂದು ಹೇಳುವುದಕ್ಕೆ ನಾಗೇಶ್ ನನ್ನು ಕರೆದರೆ ಬಾಗಿಲು ತೆರೆದಿರಲಿಲ್ಲ. ಹೀಗಾಗಿ ಕಿಟಕಿಯಲ್ಲಿ ನೋಡಿದಾಗ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದ.
ಪತ್ನಿ ಮಕ್ಕಳಿಗೆ ವಿಷವುಣಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ; ಬಾಗಲಕೋಟೆ ಮೂಲದ ಕುಟುಂಬದ ದುರಂತ ಅಂತ್ಯ !
Family of four committed suicide in Mangalore Morgans street, wife converted to Islam suspected is found in the death note of Husband Nagesh. It was said wife was working at a Muslims house as a house maid and has been suspected of getting converted to Islam.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm