ಬ್ರೇಕಿಂಗ್ ನ್ಯೂಸ್
08-12-21 09:17 pm HK Desk news ಕರಾವಳಿ
ಮಂಗಳೂರು, ಡಿ.8 : ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು, ಅಲ್ಲಿನ ಸದಸ್ಯರಿಗೆ ಸಿಗುವ ಸವಲತ್ತನ್ನು ಇನ್ನಷ್ಟು ಹೆಚ್ಚಿಸಬೇಕು ಎನ್ನೋದು ನನ್ನ ಕಳಕಳಿ. ಈ ಬಗ್ಗೆ ಪ್ರಾಮಾಣಿಕವಾಗಿ ವಿಧಾನ ಪರಿಷತ್ತಿನಲ್ಲಿ ನಿಮ್ಮ ಪರವಾದ ಧ್ವನಿಯಾಗುತ್ತೇನೆ ಎಂಬುದನ್ನು ಹೇಳಬಲ್ಲೆ. ಹಾಗಾಗಿ ನನಗೆ ನಿಮ್ಮ ಮೊದಲ ಪ್ರಾಶಸ್ತ್ಯದ ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ದ್ವಿಸದಸ್ಯ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಗ್ರಾಮ ಪಂಚಾಯಿತಿ ಸದಸ್ಯರಲ್ಲಿ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಂಜುನಾಥ ಭಂಡಾರಿ, ಸ್ಥಳೀಯಾಡಳಿತ ಮತ್ತು ಪಂಚಾಯತ್ ರಾಜ್ ವ್ಯವಸ್ಥೆ ಬಗ್ಗೆ ಏಳು ವರ್ಷಗಳ ಕಾಲ ಅಧ್ಯಯನ ಮಾಡಿದ್ದೇನೆ. ಆ ವಿಷಯದಲ್ಲಿಯೇ ಪಿಎಚ್ ಡಿ ಮಾಡಿದ್ದೇನೆ. ಹಾಗಾಗಿ ಈ ವ್ಯವಸ್ಥೆ ಹೇಗೆ ಭಿನ್ನವಾಗಿದೆ ಮತ್ತು ಜನರಿಗೆ ಹೇಗೆ ಹೆಚ್ಚು ಹತ್ತಿರ ಎನ್ನುವುದನ್ನು ಗುರುತಿಸಿದ್ದೇನೆ. ಚುನಾವಣೆಗೆ ನಿಲ್ಲುವ ಮೊದಲೇ ಇಲ್ಲಿನ ಮತದಾರರು, ಇಲ್ಲಿನ ವ್ಯವಸ್ಥೆಯ ಚಿತ್ರಣದ ಬಗ್ಗೆ ಅಧ್ಯಯನ ಕೈಗೊಂಡಿದ್ದೆ. ಈ ಬಗ್ಗೆ ನನಗೆ ಸ್ಪಷ್ಟ ಕಲ್ಪನೆಗಳಿದ್ದವು. ಕೊನೆಯ ಕ್ಷಣದಲ್ಲಿ ಅಭ್ಯರ್ಥಿ ವಿಚಾರದಲ್ಲಿ ಸ್ವಲ್ಪಮಟ್ಟಿಗೆ ಗೊಂದಲ ಕೇಳಿಬಂದರೂ, ಅದರಿಂದ ವಿಚಲಿತನಾಗಿಲ್ಲ. ಅದೊಂದು ರೀತಿ ಕಲ್ಲು ಮುಳ್ಳಿನ ಹಾದಿಯಲ್ಲಿ ನಡೆದು ಬಂದ ಹಾಗೆ. ಅದರಿಂದ ನಕಾರಾತ್ಮಕ ಪರಿಣಾಮ ಅಂತೂ ಆಗಿಲ್ಲ. ಪಕ್ಷ ನಿಷ್ಠರಿಗೆ ಅವಕಾಶ ಕೊಡಿ ಎಂದು ಕೇಳಿದ್ದೆ ಅಷ್ಟೇ..
ಪಕ್ಷ ಅವಕಾಶ ಕೊಟ್ಟರೆ, ನನ್ನ ಅಂಕಿ ಅಂಶಗಳು ನನಗೆ ನೆರವಿಗೆ ಬರುತ್ತಿದ್ದವು. ಇಲ್ಲದಿದ್ದರೆ ಪಕ್ಷದ ಜಿಲ್ಲಾಧ್ಯಕ್ಷರಿಗೆ ನನ್ನ ಅಧ್ಯಯನದ ಪ್ರತಿಯನ್ನು ಕೊಟ್ಟು ಬಿಡುವುದು ಎನ್ನುವುದನ್ನು ಮೊದಲೇ ನಿರ್ಧರಿಸಿದ್ದೆ. ಎರಡು ಜಿಲ್ಲೆಯಲ್ಲಿ ಒಟ್ಟು 6040 ಮತಗಳಿದ್ದು ಕಾಂಗ್ರೆಸ್ ಪರವಾಗಿ 1900 ರಷ್ಟು ಮತದಾರರಿದ್ದಾರೆ ಎಂಬುದನ್ನು ಆರು ತಿಂಗಳ ಮೊದಲೇ ಲೆಕ್ಕ ಹಾಕಿದ್ದೆ. ಕಾಂಗ್ರೆಸ್ ಪಕ್ಷದ 1500 ಮಂದಿಯನ್ನು ನೇರವಾಗಿ ಭೇಟಿಯಾಗಿದ್ದೇನೆ. ಮೊದಲ ಪ್ರಾಶಸ್ತ್ಯದಲ್ಲಿ ಗೆಲ್ಲುವುದಕ್ಕೆ ಎರಡು ಸಾವಿರ ಮತಗಳು ಬೇಕಾಗುತ್ತವೆ. ನಮ್ಮಲ್ಲಿ ಸ್ವಲ್ಪ ಮತಗಳ ಕೊರತೆ ಇದ್ದರೂ, ನನ್ನ ಅಭಿಮಾನಿಗಳು, ಪಕ್ಷೇತರರು, ಗ್ರಾಮ ಪಂಚಾಯತ್ ಪ್ರತಿನಿಧಿಗಳು ಕೈಬಿಡುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ಮಂಜುನಾಥ ಭಂಡಾರಿ ಹೇಳಿದರು.

ಈ ಹಿಂದೆ ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಲು ನನಗೆ ಪಕ್ಷ ಅವಕಾಶ ಕೊಟ್ಟಿತ್ತು. ನನಗೆ ಯಾವುದೇ ಜಾತಿ ಬಲ, ಹೆಸರಿನ ಬಲ ಇರಲಿಲ್ಲ. ಆದರೂ, ನಾನೊಬ್ಬ ನಿಷ್ಠಾವಂತ ಕಾರ್ಯಕರ್ತ. ಶಿವಮೊಗ್ಗದಲ್ಲಿ ವಿದ್ಯಾರ್ಥಿಯಾಗಿದ್ದಾಗ ಕೆಲಸ ಮಾಡಿದ್ದೆ ಅನ್ನುವುದನ್ನು ಪರಿಗಣಿಸಿ ಟಿಕೆಟ್ ಕೊಟ್ಟಿದ್ದರು. ಈಗ ಮತ್ತೆ ಅವಕಾಶ ಕೊಟ್ಟಿದ್ದಾರೆ. ಪಂಚಾಯತ್ ಪ್ರತಿನಿಧಿಗಳ ಪರ ಧ್ವನಿಯಾಗಿ ನಿಲ್ಲಲಿದ್ದೇನೆ. ನಿಮ್ಮ ಕನಸನ್ನು ಈಡೇರಿಸುತ್ತೇನೆಂಬ ಪ್ರಾಮಾಣಿಕ ಭರವಸೆಯನ್ನು ಕೊಡಲಿದ್ದೇನೆ. ಈಗ ನಮ್ಮ ಸರಕಾರ ಅಧಿಕಾರದಲ್ಲಿ ಇಲ್ಲ. ಹಾಗಾಗಿ ಹೆಚ್ಚಿನದನ್ನು ಹೇಳಿ ಮತದಾರರಿಗೆ ಮೋಸ ಮಾಡುವುದಿಲ್ಲ ಎಂದರು ಭಂಡಾರಿ.
ಕೇರಳದಲ್ಲಿರುವಂತೆ ಪಂಚಾಯತ್ ಪ್ರತಿನಿಧಿಗಳಿಗೆ ಮಾಸಾಶನ ನೀಡಬೇಕು ಎಂಬ ಬಗ್ಗೆ ಪ್ರಸ್ತಾಪವಿದೆ. ಅದರ ಬಗ್ಗೆ ಅಧ್ಯಯನ ಕೈಗೊಂಡು ಅನುಷ್ಠಾನ ಯೋಗ್ಯವಾಗಿದ್ದರೆ, ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಮಂಜುನಾಥ ಭಂಡಾರಿ ಪ್ರತಿಕ್ರಿಯಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು.
Mangalore I will be your voice in the assembly states Manjunath Bhandary contestant for state legislative council elections. He spoke addressing media persons here in Congress office.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm