ಬ್ರೇಕಿಂಗ್ ನ್ಯೂಸ್
11-12-21 10:19 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.11 : ತಡೆಗೋಡೆ ಕುಸಿದು ಬಿದ್ದು ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಬೋಂದೆಲ್ ಬಳಿಯ ಕೃಷ್ಣನಗರದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ಮಹಿಳೆ ತಿಮ್ಮಕ್ಕ(42) ಮೃತರು. ಮಂಗಳೂರು ಮಹಾನಗರ ಪಾಲಿಕೆಯ ಜಲಸಿರಿ ಯೋಜನೆಯಡಿ ಪೈಪ್ ಲೈನ್ ಹಾಕಲು ಗುಂಡಿ ಅಗೆಯುವ ಕಾಮಗಾರಿ ನಡೆಸುತ್ತಿದ್ದಾಗ, ಒಂದು ಭಾಗದಲ್ಲಿ ಕಟ್ಟಿದ್ದ ಕೆಂಪು ಕಲ್ಲಿನ ಗೋಡೆ ಕುಸಿದು ಬಿದ್ದಿದೆ. ಧರೆ ಕುಸಿಯದಂತೆ ಎತ್ತರಕ್ಕೆ ತಡೆಗೋಡೆ ಕಟ್ಟಿದ್ದು, ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಅರ್ಧ ಗಂಟೆ ಕಾಲ ಮಹಿಳೆ ಮಣ್ಣಿನಡಿಯಲ್ಲಿ ಸಿಲುಕಿದ್ದು, ಬಳಿಕ ಅವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳೀಯರು, ಇತರ ಕಾರ್ಮಿಕರು ಜೆಸಿಬಿ ಸಹಾಯದಲ್ಲಿ ಮಣ್ಣು ತೆರವು ಮಾಡುವ ಕಾರ್ಯ ಮಾಡಿದರೂ, ವಿಳಂಬವಾಗಿದ್ದು ಮಹಿಳೆ ಸಾವಿಗೆ ಕಾರಣವಾಗಿತ್ತು.

ಮಹಿಳೆಯ 12 ವರ್ಷದ ಪುತ್ರಿ ಪುಷ್ಪಾ ಕೂಡ ಜೊತೆಗಿದ್ದು, ಆಕೆಯೂ ಮಣ್ಣಿನಡಿ ಸಿಲುಕಿದ್ದಳು. ಆದರೆ, ಮಗುವಿಗೆ ಹೆಚ್ಚು ಅಪಾಯ ಆಗಿಲ್ಲ. ಸ್ವಲ್ಪ ಮಣ್ಣು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಳು. ಕಾವೂರು ಪೊಲೀಸರು ಮಹಾನಗರ ಪಾಲಿಕೆಯ ಕಾಮಗಾರಿ ನಿರ್ವಹಿಸುತ್ತಿದ್ದ ಗುತ್ತಿಗೆದಾರನ ಮೇಲೆ ಕೇಸು ದಾಖಲಿಸಿದ್ದಾರೆ. ಅಪಾಯ ಇದ್ದರೂ, ಕೂಲಿಯಾಳುಗಳ ಬಗ್ಗೆ ಜಾಗ್ರತೆ ವಹಿಸದೇ ಇದ್ದ ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
A retaining wall collapsed at Krishnanagar, Bondel in the outskirts of the city here on Saturday, December 11 in which 42 year old woman died on spot.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm