ಬ್ರೇಕಿಂಗ್ ನ್ಯೂಸ್
11-12-21 10:19 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.11 : ತಡೆಗೋಡೆ ಕುಸಿದು ಬಿದ್ದು ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಬೋಂದೆಲ್ ಬಳಿಯ ಕೃಷ್ಣನಗರದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ಮಹಿಳೆ ತಿಮ್ಮಕ್ಕ(42) ಮೃತರು. ಮಂಗಳೂರು ಮಹಾನಗರ ಪಾಲಿಕೆಯ ಜಲಸಿರಿ ಯೋಜನೆಯಡಿ ಪೈಪ್ ಲೈನ್ ಹಾಕಲು ಗುಂಡಿ ಅಗೆಯುವ ಕಾಮಗಾರಿ ನಡೆಸುತ್ತಿದ್ದಾಗ, ಒಂದು ಭಾಗದಲ್ಲಿ ಕಟ್ಟಿದ್ದ ಕೆಂಪು ಕಲ್ಲಿನ ಗೋಡೆ ಕುಸಿದು ಬಿದ್ದಿದೆ. ಧರೆ ಕುಸಿಯದಂತೆ ಎತ್ತರಕ್ಕೆ ತಡೆಗೋಡೆ ಕಟ್ಟಿದ್ದು, ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಅರ್ಧ ಗಂಟೆ ಕಾಲ ಮಹಿಳೆ ಮಣ್ಣಿನಡಿಯಲ್ಲಿ ಸಿಲುಕಿದ್ದು, ಬಳಿಕ ಅವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳೀಯರು, ಇತರ ಕಾರ್ಮಿಕರು ಜೆಸಿಬಿ ಸಹಾಯದಲ್ಲಿ ಮಣ್ಣು ತೆರವು ಮಾಡುವ ಕಾರ್ಯ ಮಾಡಿದರೂ, ವಿಳಂಬವಾಗಿದ್ದು ಮಹಿಳೆ ಸಾವಿಗೆ ಕಾರಣವಾಗಿತ್ತು.

ಮಹಿಳೆಯ 12 ವರ್ಷದ ಪುತ್ರಿ ಪುಷ್ಪಾ ಕೂಡ ಜೊತೆಗಿದ್ದು, ಆಕೆಯೂ ಮಣ್ಣಿನಡಿ ಸಿಲುಕಿದ್ದಳು. ಆದರೆ, ಮಗುವಿಗೆ ಹೆಚ್ಚು ಅಪಾಯ ಆಗಿಲ್ಲ. ಸ್ವಲ್ಪ ಮಣ್ಣು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಳು. ಕಾವೂರು ಪೊಲೀಸರು ಮಹಾನಗರ ಪಾಲಿಕೆಯ ಕಾಮಗಾರಿ ನಿರ್ವಹಿಸುತ್ತಿದ್ದ ಗುತ್ತಿಗೆದಾರನ ಮೇಲೆ ಕೇಸು ದಾಖಲಿಸಿದ್ದಾರೆ. ಅಪಾಯ ಇದ್ದರೂ, ಕೂಲಿಯಾಳುಗಳ ಬಗ್ಗೆ ಜಾಗ್ರತೆ ವಹಿಸದೇ ಇದ್ದ ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
A retaining wall collapsed at Krishnanagar, Bondel in the outskirts of the city here on Saturday, December 11 in which 42 year old woman died on spot.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm