ಬ್ರೇಕಿಂಗ್ ನ್ಯೂಸ್
13-12-21 10:39 pm HK Desk news ಕರಾವಳಿ
Photo credits : Representative image
ಮಂಗಳೂರು, ಡಿ.13 : ಒಂದೇ ಕುಟುಂಬದ ನಾಲ್ವರ ಸಾವಿನ ಪ್ರಕರಣವನ್ನು ರಾಜಕೀಯ ಪ್ರೇರಿತ ಒತ್ತಡದಿಂದಾಗಿ ಪೊಲೀಸರು ಮತಾಂತರ ಕೃತ್ಯ ಎಂದು ಬಿಂಬಿಸಿದ್ದಾರೆ. ಮಾನವೀಯ ನೆಲೆಯಲ್ಲಿ ಸಹಾಯ ಮಾಡಿದ್ದನ್ನೇ ನೆಪವಾಗಿಟ್ಟು ಮತಾಂತರ ಹೆಸರಲ್ಲಿ ಅಮಾಯಕ ಮಹಿಳೆಯನ್ನು ಬಂಧಿಸಿದ್ದಾರೆ ಎಂದು ವುಮೆನ್ ಇಂಡಿಯಾ ಮೂಮೆಂಟ್ (ಡಬ್ಲ್ಯುಐಎಂ) ಸಂಘಟನೆಯ ಅಧ್ಯಕ್ಷೆ ಶಹೀದಾ ತಸ್ನಿಂ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ತಸ್ನಿಂ, ನೂರ್ ಜಹಾನ್ ಎನ್ನುವ ಮಹಿಳೆ ವಿಜಯಲಕ್ಷ್ಮಿಗೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡಿದ್ದರು. ಆದರೆ ಪೊಲೀಸರು ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ಮತಾಂತರ ಕೃತ್ಯ ಎಂದು ನೂರ್ ಜಹಾನ್ ಅವರನ್ನು ಬಂಧಿಸಿದ್ದಾರೆ. ರಾಜಕಾರಣಿಗಳು ಮತ್ತು ಸಂಘ ಪರಿವಾರದ ಒತ್ತಡದಿಂದಾಗಿ ನೂರ್ ಜಹಾನ್ ವಿರುದ್ಧ ಕೇಸು ದಾಖಲಿಸಿದ್ದಾರೆ ಎಂದು ಹೇಳಿದರು.
ನಾಗೇಶ್ ಮತ್ತು ವಿಜಯಲಕ್ಷ್ಮಿ ನಡುವೆ ಸಂಬಂಧ ಸರಿಯಿರಲಿಲ್ಲ. ನಾಗೇಶ್, ಪತ್ನಿ ಮಕ್ಕಳನ್ನು ಅಮಾನುಷವಾಗಿ ಕೊಂದು ಹಾಕಿದ್ದರೂ ಆತನನ್ನು ಅಮಾಯಕನೆಂದು ಬಿಂಬಿಸಲಾಗಿದೆ. ನೂರ್ ಜಹಾನ್ ಮತಾಂತರ ಮಾಡಿದ್ದಾಳೆ ಎಂಬ ಬಗ್ಗೆ ಸೂಕ್ತ ಸಾಕ್ಷ್ಯ ಇಲ್ಲದೇ ಇದ್ದರೂ ಬಂಧಿಸಲಾಗಿದೆ. ವಿನಾಕಾರಣ ಆರೋಪ ಹೊರಿಸಿ ಕೇಸು ದಾಖಲಿಸಿ ಹಿಂಸೆ ನೀಡಿದ್ದಾರೆ. ಆಕೆ ಈ ಹಿಂದೆಯೂ ಇಸ್ಲಾಂ ನಂಬಿಕೆ ಹೆಸರಲ್ಲಿ ಯಾರನ್ನೂ ಮತಾಂತರ ಮಾಡಿರುವ ಹಿನ್ನೆಲೆ ಹೊಂದಿಲ್ಲ. ಕೆಲವು ಸ್ಥಾಪಿತ ಹಿತಾಸಕ್ತಿಗಳು ಮುಸ್ಲಿಂ ಮತ್ತು ಕ್ರಿಸ್ತಿಯನ್ನರ ವಿರುದ್ಧ ಮತಾಂತರದ ಆರೋಪ ಹೊರಿಸುವ ಹುನ್ನಾರ ಹೊಂದಿದ್ದಾರೆ.
ಈ ಬಗ್ಗೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯ ಮಾಡುತ್ತೇವೆ. ಅಲ್ಲದೆ, ನೂರ್ ಜಹಾನ್ ಗೆ ಹಿಂಸೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕು. ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಶಹೀದಾ ತಸ್ನಿಂ ಒತ್ತಾಯಿಸಿದರು.
With regards to the death of four members of the same family which occurred few days ago and subsequent arrest of Noor Jahan on the accusation of trying to convert the deceased woman to Islam, Shaheeda Tasnim, president of Women India Movement (WIM) said that the accusation and arrest is politically motivated.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm