ಬ್ರೇಕಿಂಗ್ ನ್ಯೂಸ್
17-12-21 01:33 pm HK Desk news ಕರಾವಳಿ
ಮಂಗಳೂರು, ಡಿ.17 : ಉಪ್ಪಿನಂಗಡಿ ಲಾಠಿಚಾರ್ಜ್ ಘಟನೆಯನ್ನು ಖಂಡಿಸಿ ಮಂಗಳೂರು ನಗರದಲ್ಲಿ ಪಿಎಫ್ಐ ಪ್ರತಿಭಟನೆ ಆಯೋಜಿಸಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಪಿಎಫ್ಐ ಮತ್ತು ಎಸ್ ಡಿಪಿಐ ಕಾರ್ಯಕರ್ತರು ಪಂಪ್ವೆಲ್ ನಿಂದ ಮೆರವಣಿಗೆಯಲ್ಲಿ ಬಂದು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಆದರೆ, ಮಂಗಳೂರು ಪೊಲೀಸರು ಮೆರವಣಿಗೆ ನಡೆಸಲು ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಅಲ್ಲದೆ, ನಗರದ ಮಿನಿ ವಿಧಾನಸೌಧ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲು ಮಾತ್ರ ಅವಕಾಶ ನೀಡಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.


ಹೀಗಾಗಿ ಮಂಗಳೂರು ನಗರದ ಹಂಪನಕಟ್ಟೆ ಸುತ್ತಮುತ್ತ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಾಲ್ಕು ಕೆಎಸ್ ಆರ್ ಪಿ, ಐದು ಸಿಎಆರ್ ತುಕಡಿ ಸೇರಿದಂತೆ ಕಮಿಷನರೇಟ್ ವ್ಯಾಪ್ತಿಯ ಪೊಲೀಸರನ್ನು ನಿಯೋಜಿಸಿದ್ದು, ಭದ್ರತೆ ಕೈಗೊಂಡಿದ್ದಾರೆ. ಕ್ಲಾಕ್ ಟವರ್, ಎಸ್ಪಿ ಕಚೇರಿ, ಕಮಿಷನರ್ ಕಚೇರಿ ಸುತ್ತಮುತ್ತ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಆದರೆ, ಪಿಎಫ್ಐ ಮತ್ತು ಎಸ್ ಡಿಪಿಐ ಕಾರ್ಯಕರ್ತರು ಪೊಲೀಸರ ಕ್ರಮದ ವಿರುದ್ಧವೇ ಪ್ರತಿಭಟನೆ ಆಯೋಜಿಸಿರುವುದರಿಂದ ಆಕ್ರೋಶಿತರು ಮೆರವಣಿಗೆ ನಡೆಸುತ್ತ ಧಿಕ್ಕಾರ ಕೂಗುತ್ತಲೇ ಬರುವ ಸಾಧ್ಯತೆಯಿದೆ.


2019ರಲ್ಲಿ ಹಿಂಸೆಗೆ ತಿರುಗಿದ್ದ ಪಿಎಫ್ಐ ಪ್ರತಿಭಟನೆ
2019ರ ಡಿಸೆಂಬರ್ 17, 18, 19ರಂದು ಇದೇ ರೀತಿ ಎಸ್ ಡಿಪಿಐ ಮತ್ತು ಪಿಎಫ್ಐ ಕಾರ್ಯಕರ್ತರು ಸಿಎಎ, ಎನ್ ಆರ್ ಸಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಪ್ರತಿಭಟನೆಗೆ ಅವಕಾಶ ಕೊಡದೆ, 144 ಸೆಕ್ಷನ್ ಹಾಕಿ ಪ್ರತಿಭಟನೆ ಹತ್ತಿಕ್ಕುವ ಕೆಲಸ ನಡೆದಿತ್ತು. ಲಾಠಿಚಾರ್ಜ್ ಘಟನೆಗಳೂ ಹಲವು ಕಡೆ ನಡೆದಿದ್ದವು. ಡಿ.19ರಂದು ಸೆಕ್ಷನ್ ಹೊರತಾಗಿಯೂ ಜಿಲ್ಲಾಧಿಕಾರಿ ಕಚೇರಿ ಬಳಿ ಎಸ್ ಡಿಪಿಐ ಪ್ರತಿಭಟನೆ ಹಮ್ಮಿಕೊಂಡಿತ್ತು. ಯಾವುದೇ ಕಾರಣಕ್ಕೂ ಪ್ರತಿಭಟನೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಪಟ್ಟು ಹಿಡಿದಿದ್ದರು.


ಆದರೆ, ಬಂದರು ಬಳಿ ಸೇರಿದ್ದ 500ಕ್ಕೂ ಹೆಚ್ಚು ಕಾರ್ಯಕರ್ತರು ಒಮ್ಮೆಲೇ ಸ್ಟೇಟ್ ಬ್ಯಾಂಕ್ ಆವರಣಕ್ಕೆ ನುಗ್ಗಿದ್ದರಿಂದ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಜಟಾಪಟಿಗೆ ಕಾರಣವಾಗಿತ್ತು. ಪೊಲೀಸರು ಲಾಠಿಚಾರ್ಜ್ ನಡೆಸಿದರೆ, ಉದ್ರಿಕ್ತ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಪೊಲೀಸರು ಸೇರಿ ಹಲವಾರು ಮಂದಿ ಗಾಯಗೊಂಡಿದ್ದರು. ಬಳಿಕ ಉದ್ರಿಕ್ತರು ಬಂದರು ಪೊಲೀಸ್ ಠಾಣೆಗೆ ನುಗ್ಗುತ್ತಾರೆಂದು ಪೊಲೀಸರು ಅಶ್ರುವಾಯು ಸಿಡಿಸಿದ್ದರು. ಇದೇ ವೇಳೆ, ಇಬ್ಬರು ಕಾರ್ಯಕರ್ತರು ಪೊಲೀಸರ ಗುಂಡೇಟಿನಿಂದ ಬಲಿಯಾಗಿದ್ದರು. ಆ ಘಟನೆಯ ನಂತರ ಪ್ರತಿವರ್ಷ ಪೊಲೀಸರ ಮೇಲೆ ದಾಳಿ ನಡೆಸುವ ಘಟನೆಗಳು ಡಿಸೆಂಬರ್ ತಿಂಗಳಲ್ಲಿ ಕಾಕತಾಳೀಯ ಎಂಬಂತೆ ನಡೆದಿದ್ದವು. ಕಳೆದ ಬಾರಿ ಹಾಫ್ ಲಾಕ್ಡೌನ್ ಇದ್ದರೂ, ಇಬ್ಬರು ಪೊಲೀಸರ ಮೇಲೆ ಚೂರಿ ಇರಿತದ ಘಟನೆ ನಡೆದಿತ್ತು.
PFI protest in Mangalore over laticharge in Uppinanagdy Police set up tight security all over city.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm