ಬ್ರೇಕಿಂಗ್ ನ್ಯೂಸ್
17-12-21 07:19 pm HK Desk news ಕರಾವಳಿ
ಮಂಗಳೂರು, ಡಿ.17 : ಓಮಿಕ್ರಾನ್ ರೂಪಾಂತರಿ ವೈರಸ್ ಹೈರಿಸ್ಕ್ ದೇಶವಾಗಿರುವ ಘಾನಾದಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲಾಧಿಕಾರಿ ಡಾ.ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಸಭೆ ನಡೆಸಿದ್ದಾರೆ. ಮಂಗಳೂರು ಏರ್ಪೋರ್ಟ್ ಮುಖ್ಯಸ್ಥರು, ಏರ್ಪೋರ್ಟ್ ಆರೋಗ್ಯಾಧಿಕಾರಿ (ಎ.ಪಿ.ಹೆಚ್.ಓ), ಜಿಲ್ಲಾ ಸರ್ವೇಕ್ಷಾಣಾಧಿಕಾರಿ (ಡಿ.ಎಸ್.ಓ), ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೊ ಲ್ಯಾಬ್ ಮುಖ್ಯಸ್ಥರ ಜೊತೆಗೆ ಜಿಲ್ಲಾಧಿಕಾರಿ ಸಭೆ ನಡೆಸಿ ನಿಗಾ ವಹಿಸಲು ಸೂಚನೆ ನೀಡಿದ್ದಾರೆ.
ಶುಕ್ರವಾರ ಮಧ್ಯಾಹ್ನ ಏರ್ ಪೋರ್ಟ್ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಘಾನಾ ದೇಶದಿಂದ ಬಂದ ಒಬ್ಬರು ಪ್ರಯಾಣಿಕರನ್ನು ಗುರುವಾರ ರಾತ್ರಿಯೇ ವೆನ್ಲಾಕ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್ ಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಪ್ರಯಾಣಿಕರಲ್ಲಿ ಯಾವುದೇ ರೋಗ ಲಕ್ಷಣ ಕಂಡು ಬಂದಿರುವುದಿಲ್ಲ. ಆ ಪ್ರಯಾಣಿಕ ವಿಮಾನದಲ್ಲಿ ಕುಳಿತಿದ್ದ ಸೀಟಿನ 3 ಸಾಲಿನ ಎದುರು ಹಾಗೂ 3 ಸಾಲಿನ ಹಿಂದಿನ ಪ್ರಯಾಣಿಕರು ಸೇರಿದಂತೆ ಒಟ್ಟು 27 ಪ್ರಯಾಣಿಕರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಿ ಅವರನ್ನು ಆರೋಗ್ಯ ಇಲಾಖೆಯಿಂದ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್ ಮತ್ತು ರೇಂಡಮ್ ಪರೀಕ್ಷೆಗೆ ಒಳಪಡಿಸಿ, ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿ ಪಡೆದುಕೊಂಡಿದ್ದಾರೆ.
ಜಿಲ್ಲಾಧಿಕಾರಿಯವರು ವಿಮಾನ ನಿಲ್ದಾಣದ ಅಧಿಕಾರಿಯೊಂದಿಗೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ, ಇಮಿಗ್ರೇಶನ್, ಏರ್ ಸುವಿಧಾ, ಚೆಕ್ಕಿಂಗ್ ಪಾಯಿಂಟ್, ಟ್ರಾನ್ಸಿಟ್ ಪ್ಯಾಸಿಂಜರ್ ಹಾಗೂ ರ್ಯಾಂಡಮೈಸ್ ಪರೀಕ್ಷೆಗಳ ಬಗ್ಗೆಯೂ ವಿವರವಾಗಿ ತಿಳಿದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಚೀಫ್ ಏರ್ಪೋರ್ಟ್ ಆಫೀಸರ್ ನೀರವ್ ಶಾ, ಕೋವಿಡ್ ನೋಡಲ್ ಅಧಿಕಾರಿ ಡಾ. ಎಚ್. ಅಶೋಕ್, ಏರ್ಲೈನ್ ಸ್ಟೇಷನ್ ಮ್ಯಾನೇಜರ್ಸ್, ಟರ್ಮಿನಲ್ ಮ್ಯಾನೇಜರ್, ಇಮಿಗ್ರೇಶನ್ ಆಫೀಸರ್ಸ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.
Omicron fear, Passenger who came from Ghana to Mangalore tested covid positive. Emergency meeting was held by DC in regards to this.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm