ಬ್ರೇಕಿಂಗ್ ನ್ಯೂಸ್
17-12-21 10:31 pm HK Desk news ಕರಾವಳಿ
ಮಂಗಳೂರು, ಡಿ.17 : ಕಸ್ತೂರಿ ರಂಗನ್ ವರದಿಯನ್ನು ಕಾಂಗ್ರೆಸ್ ಸರಕಾರ ಇದ್ದಾಗ ಜಾರಿಗೊಳಿಸುವ ಬದಲು ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದೆವು. ಆದರೆ, ಕೇಂದ್ರ ಸರಕಾರ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಈಗ ಬಿಜೆಪಿ ಸರಕಾರವೂ ಕಸ್ತೂರಿ ರಂಗನ್ ವರದಿಯನ್ನು ರದ್ದುಪಡಿಸುವುದಾಗಿ ಹೇಳುತ್ತಿದೆ. ಆದರೆ, ಕೇಂದ್ರದಲ್ಲಿಯೂ ಬಿಜೆಪಿ ಸರಕಾರವೇ ಇದ್ದರೂ, ಅದನ್ನು ರದ್ದುಪಡಿಸಲು ಸಾಧ್ಯವಾಗಿಲ್ಲ ಯಾಕೆ ಎಂದು ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ರಮಾನಾಥ ರೈ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಮಾನಾಥ ರೈ, ಕಾಂಗ್ರೆಸ್ ಸರಕಾರ ಇದ್ದಾಗ ಕಸ್ತೂರಿ ರಂಗನ್ ವರದಿಯಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಗದ್ದಲ ಎಬ್ಬಿಸಿದವರು ಬಿಜೆಪಿ ಶಾಸಕರು. ಈಗ ಅವರೇ ಆಡಳಿತ ನಡೆಸುತ್ತಿದ್ದಾರೆ. ಈಗಲೂ ವಿರೋಧ ಇದೆಯೆಂದು ಹೇಳಿಕೊಂಡು ಬರುತ್ತಿದ್ದಾರೆ. ಇವರದೇ ಸರಕಾರ ಇರುವಾಗ ಕಸ್ತೂರಿ ರಂಗನ್ ವರದಿ ಜಾರಿಗೊಳಿಸದಂತೆ ಕೇಂದ್ರಕ್ಕೆ ತಿಳಿಹೇಳಬಹುದಲ್ಲ. ಈಗ ವರದಿಯ ವಿಚಾರ ಎನ್ ಜಿಟಿ ಕೋರ್ಟಿನಲ್ಲಿದೆ. ಮಹಾರಾಷ್ಟ್ರ ಮತ್ತು ಕೇರಳ ಸರಕಾರಗಳು ಕೂಡ ಈ ವರದಿ ಬಗ್ಗೆ ಆಕ್ಷೇಪಿಸಿ, ವರದಿ ನೀಡಿದ್ದಾರೆ. ಆದರೆ ಈ ಬಗ್ಗೆ ಕೇಂದ್ರ ಸರಕಾರ ನಿರ್ಧಾರಕ್ಕೆ ಬಂದಿಲ್ಲ ಎಂದು ಹೇಳಿದರು.

ಪರಿಸರ ರಕ್ಷಣೆಗಾಗಿ ಮಾಧವ ಗಾಡ್ಗೀಳ್ ಕೊಟ್ಟಿದ್ದ ವರದಿಯನ್ನು ಆಕ್ಷೇಪಿಸಿ, ವಿಜ್ಞಾನಿ ಕಸ್ತೂರಿ ರಂಗನ್ ಮೂಲಕ ಹೊಸತಾಗಿ ವರದಿ ತಯಾರಿಸಲಾಗಿತ್ತು. ಅದನ್ನೂ ಯಾಕೆ ರದ್ದುಪಡಿಸಬೇಕು ಎನ್ನುತ್ತೀರಿ ಎಂಬ ಪ್ರಶ್ನೆಗೆ, ಜನರಿಗೆ ತೊಂದರೆಯಾಗುತ್ತದೆ ಎಂದು ವರದಿಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದ್ದು ಬಿಜೆಪಿಯವರು. ಜನರಿಗೆ ತೊಂದರೆಯಾದರೆ ನಮಗೂ ಬೇಡ ಎಂದು ರದ್ದುಪಡಿಸುವಂತೆ ಹೇಳಿದ್ದೆವು ಎಂದರು. ಹಾಗಾದರೆ ಪರಿಸರ ರಕ್ಷಣೆ ಯಾರಿಗೂ ಬೇಕಾಗಿಲ್ಲ ಎಂಬ ಪ್ರಶ್ನೆಗೆ, ನೀವು ಇದನ್ನು ಬಿಜೆಪಿಯವರಿಗೂ ಕೇಳಬೇಕು. ನಮ್ಮಲ್ಲಿ ಮಾತ್ರ ಅಲ್ಲ. ಅವರೇ ಈಗ ಆಡಳಿತದಲ್ಲಿದ್ದಾರೆ. ಹಿಂದೆ ಅವರೇ ಪ್ರತಿಭಟನೆ ನಡೆಸಿದ್ದು. ಹುಲಿ ಯೋಜನೆ ವಿಚಾರದಲ್ಲಿಯೂ ಗೂಬೆ ಕೂರಿಸಿ, ಜನರನ್ನು ಯಾಮಾರಿಸುವ ಕೆಲಸ ಮಾಡಿದ್ದರು ಎಂದು ರೈ ಹೇಳಿದರು.
ವರದಿಗೆ ಅಧಿಕಾರಸ್ಥರ ವಿರೋಧ ಏಕೆ ?
ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಯಾವುದೇ ಬೃಹತ್ ಯೋಜನೆ ಮಾಡಬಾರದು, ಅಲ್ಲಿನ ಅರಣ್ಯ ರಕ್ಷಣೆಗಾಗಿ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರಲಾಗಿತ್ತು. ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದಲ್ಲಿ ಹರಡಿರುವ ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಅದಕ್ಕೆ ಹೊಂದಿಕೊಂಡಿರುವ ಗ್ರಾಮಗಳು, ಘಟ್ಟದಲ್ಲಿ ನೆಲೆಸಿರುವ ಜನರನ್ನು ಎಬ್ಬಿಸಿ, ಪರ್ಯಾಯ ವ್ಯವಸ್ಥೆ ಮಾಡುವಂತೆ ವರದಿಯಲ್ಲಿ ಹೇಳಲಾಗಿತ್ತು. ಅದಲ್ಲದೆ, ಅಲ್ಲಿ ಈಗಾಗಲೇ ಇರುವ ಹೋಮ್ ಸ್ಟೇ ಸೇರಿದಂತೆ ಯಾವುದೇ ರೀತಿಯ ಯೋಜನೆಗಳಿಗೂ ಆಸ್ಪದ ನೀಡದಂತೆ ವರದಿಯಲ್ಲಿ ಹೇಳಲಾಗಿತ್ತು. ಆದರೆ, ಈ ವರದಿಯನ್ನು ಜಾರಿಗೊಳಿಸುವ ಬದಲು ವರದಿಯೇ ಅಗತ್ಯವಿಲ್ಲ ಎಂದು ರಾಜ್ಯ ಸರಕಾರ ಆಕ್ಷೇಪ ಸೂಚಿಸಿತ್ತು. ಜನರ ವಿರೋಧ ಇದೆಯೆಂದು ಹೇಳುವ ಮೂಲಕ ಎಸ್ಟೇಟ್ ಮಾಫಿಯಾ, ಹೋಮ್ ಸ್ಟೇ ಮಾಫಿಯಾ, ಬೃಹತ್ ಯೋಜನೆಗಳ ಪರ ನಿಂತಿತ್ತು.
Why kasturirangan report is not yet cancelled Questions Ramanath Rai during a press meet that was held at Congress office in Mangalore.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm