ಬ್ರೇಕಿಂಗ್ ನ್ಯೂಸ್
18-12-21 07:04 pm HK Desk news ಕರಾವಳಿ
ಮಂಗಳೂರು, ಡಿ.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಮಂದಿಗೆ ಒಂದೇ ದಿನದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಓಮಿಕ್ರಾನ್ ಪೀಡಿತರ ಸಂಖ್ಯೆ 13ಕ್ಕೇರಿದೆ.
ಮಂಗಳೂರು ಹೊರವಲಯದ ವಸತಿ ಶಾಲೆಯ ನಾಲ್ವರು ಮಕ್ಕಳಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೊಬ್ಬ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಆಕೆ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಳು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಆದವರನ್ನು ಪ್ರತಿ ದಿನವೂ ಓಮಿಕ್ರಾನ್ ವೈರಸ್ ಪತ್ತೆಗಾಗಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜಿನೋಮ್ ಸೀಕ್ವೆನ್ಸ್ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದ್ದು, ಪ್ರತಿ ದಿನವೂ ಸೋಂಕಿತರ ಗಂಟಲ ದ್ರವದ ಮಾದರಿಯನ್ನು ಅಲ್ಲಿಗೆ ಕಳಿಸಿಕೊಡಲಾಗುತ್ತದೆ. ಹೀಗೆ ಕಳಿಸಿಕೊಟ್ಟಿದ್ದ ಐವರು ಸೋಂಕಿತರಲ್ಲಿ ಓಮಿಕ್ರಾನ್ ವೈರಸ್ ಇರುವುದು ಪತ್ತೆಯಾಗಿದೆ.
ವಸತಿ ಶಾಲೆಯ 14 ಮಂದಿ ವಿದ್ಯಾರ್ಥಿಗಳನ್ನು ಡಿ.10ರಂದು ಟೆಸ್ಟ್ ಮಾಡಿದ್ದಾಗ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಅವರಲ್ಲಿ ನಾಲ್ವರಲ್ಲಿ ಓಮಿಕ್ರಾನ್ ಇರುವುದು ಕಂಡುಬಂದಿದೆ. ಆದರೆ, ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿರುವುದು ಸೋಂಕು ಹೇಗೆ ಕಂಡುಬಂದಿದೆ ಅನ್ನುವ ಬಗ್ಗೆ ಆರೋಗ್ಯಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಮಕ್ಕಳು ಮಾತ್ರ ಆರೋಗ್ಯದಿಂದಿದ್ದಾರೆ ಅನ್ನುವ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಓಮಿಕ್ರಾನ್ ಹೈರಿಸ್ಕ್ ಇರುವ ಘಾನಾ ದೇಶದಿಂದ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಆ ವ್ಯಕ್ತಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಟಲ ದ್ರವದ ಮಾದರಿಯನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿತ್ತು.
Five Omicron cases detected in Mangalore, four in high school students.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 09:25 pm
Mangalore Correspondent
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm