ಬ್ರೇಕಿಂಗ್ ನ್ಯೂಸ್
19-12-21 08:53 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.19: ಕುಡಿದ ಮತ್ತಿನಲ್ಲಿ ಕಾರು ಓಡಿಸಿಕೊಂಡು ಬಂದ ಯುವಕನೊಬ್ಬ ಬಸ್ ನಿಲ್ದಾಣಕ್ಕೆ ನುಗ್ಗಿಸಿದ ಘಟನೆ ನಗರದಲ್ಲಿ ನಡೆದಿದ್ದು ಅಲ್ಲಿದ್ದ ಮಹಿಳೆಯರು, ಯುವತಿಯರು ಸಾವಿನ ದವಡೆಯಿಂದ ಕೂದಲೆಳೆಯಲ್ಲಿ ಪಾರಾಗಿದ್ದಾರೆ. ಭಾನುವಾರ ಸಂಜೆ ಏಳು ಗಂಟೆ ಸುಮಾರಿಗೆ ನಗರದ ಶಿವಭಾಗ್ ಪೆಟ್ರೋಲ್ ಪಂಪ್ ಮುಂಭಾಗದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಕದ್ರಿ ಮಲ್ಲಿಕಟ್ಟೆ ಕಡೆಯಿಂದ ಕೆಂಪು ಡಸ್ಟರ್ ಕಾರು ವೇಗವಾಗಿ ಧಾವಿಸಿ ಬಂದಿದ್ದು ನಂತೂರು ಭಾಗದತ್ತ ತೆರಳುವಾಗ ರಸ್ತೆ ಬಿಟ್ಟು ಹೊರಕ್ಕೆ ಚಲಿಸಿದೆ. ಕಾರು ಧಾವಂತದಿಂದ ಎಡಭಾಗದಲ್ಲಿದ್ದ ಬಸ್ ನಿಲ್ದಾಣಕ್ಕೆ ನುಗ್ಗಿದ್ದು ಅಲ್ಲಿದ್ದ ಮಹಿಳೆಯರು ಕಾರನ್ನು ನೋಡಿ ದೂರಕ್ಕೆ ಓಡಿದ್ದಾರೆ. ಅದರಲ್ಲೂ 25 ವರ್ಷದ ಯುವತಿಯೊಬ್ಬಳು ಕಾರಿನಡಿಗೆ ಬೀಳುವುದನ್ನು ಮಹಿಳೆಯೊಬ್ಬರು ತನ್ನತ್ತ ಎಳೆದು ತಪ್ಪಿಸಿದ್ದಾರೆ.


ಕಾರು ರಸ್ತೆಯಿಂದ ಹೊರಕ್ಕೆ ಹರಿದು ಅಪಘಾತವಾಗಿದ್ದು ತಿಳಿಯುತ್ತಲೇ ಅದರಲ್ಲಿದ್ದ ವ್ಯಕ್ತಿ ಕಾರಿನಿಂದ ಇಳಿದು ಹೋಗಿದ್ದಾನೆ. ಬಳಿಕ ಜನರು ಜಮಾಯಿಸಿದ್ದು ಕದ್ರಿ ಸಂಚಾರಿ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಕಾರನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಕಾರು ಚಾಲಕ ಅಲ್ಲಿಂದ ನಾಪತ್ತೆಯಾಗಿದ್ದ.


ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದು ಭಾರೀ ಅನಾಹುತ ಅಕಸ್ಮಾತ್ ತಪ್ಪಿ ಹೋಗಿದೆ. ಪೊಲೀಸರು ಕಾರಿನ ಚಾಲಕನನ್ನು ಪತ್ತೆ ಮಾಡುತ್ತಾರೋ, ಅಲ್ಲಿಗೇ ಬಿಟ್ಟು ಬಿಡುತ್ತಾರೋ ಗೊತ್ತಿಲ್ಲ. ಸ್ಥಳೀಯರೊಬ್ಬರು ಫೋಟೊ ತೆಗೆದು ಹೆಡ್ ಲೈನ್ ಕರ್ನಾಟಕದ ಗಮನಕ್ಕೆ ತಂದಿದ್ದಾರೆ. ಭಾನುವಾರ ಆಗಿದ್ದರಿಂದ ಬಸ್ ನಿಲ್ದಾಣದಲ್ಲಿ ಹೆಚ್ಚು ಜನ ಇರಲಿಲ್ಲ. ಇತರೇ ದಿನಗಳಾಗಿರುತ್ತಿದ್ದರೆ ಜನ ಸಂದಣಿ ಹೆಚ್ಚಿರುತ್ತಿತ್ತು. ಅಪಾಯ ಆಗುತ್ತಿತ್ತು ಎಂದು ತಿಳಿಸಿದ್ದಾರೆ.
Drunken car Driver rams Duster car into bus stand at Shivabagh Kadri in Mangalore, passengers escape uninjured. The car owner flee away from the spot after the accident. Kadri police rush to the spot and are investigating the case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm