ಬ್ರೇಕಿಂಗ್ ನ್ಯೂಸ್
22-12-21 10:17 pm HK Desk news ಕರಾವಳಿ
ಉಡುಪಿ, ಡಿ.22 : ಉಡುಪಿ ಮಲ್ಲಿಗೆ ಅಂದರೆ ಕರಾವಳಿಯಲ್ಲಿ ಶಂಕರಪುರ ಮಲ್ಲಿಗೆ ಭಾರೀ ಫೇಮಸ್. ಆದರೆ ಈ ಬಾರಿ ಉಡುಪಿ ಮಲ್ಲಿಗೆಯ ದರ ಕೈಸುಡುವಷ್ಟರ ಮಟ್ಟಿಗೆ ಹೋಗಿದೆ. ಉಡುಪಿ ಮಲ್ಲಿಗೆಯ ದರವನ್ನು ಡಿಸೆಂಬರ್ 23ರಿಂದ ಅನ್ವಯವಾಗುವಂತೆ ಮಲ್ಲಿಗೆ ಹೂವಿನ ಅಟ್ಟಿಗೆ (3200 ಬಿಡಿ ಹೂವು) ಬರೋಬ್ಬರಿ 2,100 ರೂ.ಗಳಿಗೆ ಏರಿಸಿದೆ.
ಉಡುಪಿ ಜಿಲ್ಲೆಯಲ್ಲಿ ಸುಮಾರು ಹತ್ತು ಸಾವಿರ ಕುಟುಂಬಗಳು ಮಲ್ಲಿಗೆ ಬೆಳೆಯನ್ನು ನಂಬಿ ಜೀವನ ನಡೆಸುತ್ತಿದೆ. ಪ್ರಸಕ್ತ ಹವಾಮಾನ ವೈಪರೀತ್ಯ ಸ್ಥಿತಿಯಲ್ಲಿ ಮಲ್ಲಿಗೆ ಬೆಳೆಗಾರ ಕುಟುಂಬಗಳು, ಗಿಡಗಳು ಹಾನಿಗೊಳಗಾಗಿ ಹೂವಿನ ಇಳುವರಿ ಕುಂಠಿತವಾಗಿದ್ದು ತೀರಾ ಸಂಕಷ್ಟ ಸ್ಥಿತಿಯಲ್ಲಿವೆ. ಇದರ ಜತೆಯಲ್ಲಿ ನಿರ್ವಹಣಾ ವೆಚ್ಚ, ಸಾಗಾಟದ ವೆಚ್ಚಗಳೂ ಏರಿರುವ ಹಿನ್ನೆಲೆಯಲ್ಲಿ ಮಲ್ಲಿಗೆ ಹೂವಿನ ದರವನ್ನು ನಿಶ್ಚಿತವಾಗಿ ಏರಿಸಲಾಗಿದೆ ಎಂದು ಮಲ್ಲಿಗೆ ವರ್ತಕರ ಸಂಘದ ದರ ನಿಗದಿ ಕೇಂದ್ರವು ಅಭಿಪ್ರಾಯ ಪಟ್ಟಿದೆ.
ಎಲ್ಲೆಡೆ ವ್ಯಾಪಾರಿಗಳು, ದಲ್ಲಾಳಿಗಳು ಸೇರಿ ಕೃಷಿಕರನ್ನು ಶೋಷಣೆ ಮಾಡುತ್ತಾರೆ. ತಮ್ಮ ಹಿತಾಸಕ್ತಿ ಸಾಧನೆಗಾಗಿ ಕೃಷಿಕರನ್ನು ಬಳಸಿ ಕೊಳ್ಳುತ್ತಾರೆ. ಇದರ ನಡುವೆ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಕೃಷಿಕರ ಹಿತಾಸಕ್ತಿಯನ್ನೇ ಮಾನದಂಡವಾಗಿಟ್ಟುಕೊಂಡು, ಮಲ್ಲಿಗೆ ಬೆಳೆಗಾರರಿಂದ ಹಿಡಿದು, ಹೂವನ್ನು ಕೊಯ್ದು, ಸಂಗ್ರಹ ಮಾಡಿ ಮಾರುಕಟ್ಟೆಗೆ ಒಯ್ಯುವ ತನಕದ ಎಲ್ಲರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ದರ ಏರಿಸಿದೆ.
ಯಾವುದೇ ಹೂವಿನ ಮಾರುಕಟ್ಟೆಗಳಿಗೆ ಹೋಲಿಸಿದರೆ ದೇಶಕ್ಕೇ ಮಾದರಿಯಾಗಿ, ಕಳೆದ 80 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಯಾವುದೇ ಒಳ ಒಪ್ಪಂದಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ, ಸರ್ವಸಮ್ಮತವಾಗಿ ಕೆಲಸ ನಿರ್ವಹಿಸುತ್ತಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ತಿಳಿಸಿದ್ದಾರೆ.
Udupi Jasmine flower rate will go rocket high from Dec 23rd. The fixed price will be 2,100 Rs.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm