ಬ್ರೇಕಿಂಗ್ ನ್ಯೂಸ್
22-12-21 10:17 pm HK Desk news ಕರಾವಳಿ
ಉಡುಪಿ, ಡಿ.22 : ಉಡುಪಿ ಮಲ್ಲಿಗೆ ಅಂದರೆ ಕರಾವಳಿಯಲ್ಲಿ ಶಂಕರಪುರ ಮಲ್ಲಿಗೆ ಭಾರೀ ಫೇಮಸ್. ಆದರೆ ಈ ಬಾರಿ ಉಡುಪಿ ಮಲ್ಲಿಗೆಯ ದರ ಕೈಸುಡುವಷ್ಟರ ಮಟ್ಟಿಗೆ ಹೋಗಿದೆ. ಉಡುಪಿ ಮಲ್ಲಿಗೆಯ ದರವನ್ನು ಡಿಸೆಂಬರ್ 23ರಿಂದ ಅನ್ವಯವಾಗುವಂತೆ ಮಲ್ಲಿಗೆ ಹೂವಿನ ಅಟ್ಟಿಗೆ (3200 ಬಿಡಿ ಹೂವು) ಬರೋಬ್ಬರಿ 2,100 ರೂ.ಗಳಿಗೆ ಏರಿಸಿದೆ.
ಉಡುಪಿ ಜಿಲ್ಲೆಯಲ್ಲಿ ಸುಮಾರು ಹತ್ತು ಸಾವಿರ ಕುಟುಂಬಗಳು ಮಲ್ಲಿಗೆ ಬೆಳೆಯನ್ನು ನಂಬಿ ಜೀವನ ನಡೆಸುತ್ತಿದೆ. ಪ್ರಸಕ್ತ ಹವಾಮಾನ ವೈಪರೀತ್ಯ ಸ್ಥಿತಿಯಲ್ಲಿ ಮಲ್ಲಿಗೆ ಬೆಳೆಗಾರ ಕುಟುಂಬಗಳು, ಗಿಡಗಳು ಹಾನಿಗೊಳಗಾಗಿ ಹೂವಿನ ಇಳುವರಿ ಕುಂಠಿತವಾಗಿದ್ದು ತೀರಾ ಸಂಕಷ್ಟ ಸ್ಥಿತಿಯಲ್ಲಿವೆ. ಇದರ ಜತೆಯಲ್ಲಿ ನಿರ್ವಹಣಾ ವೆಚ್ಚ, ಸಾಗಾಟದ ವೆಚ್ಚಗಳೂ ಏರಿರುವ ಹಿನ್ನೆಲೆಯಲ್ಲಿ ಮಲ್ಲಿಗೆ ಹೂವಿನ ದರವನ್ನು ನಿಶ್ಚಿತವಾಗಿ ಏರಿಸಲಾಗಿದೆ ಎಂದು ಮಲ್ಲಿಗೆ ವರ್ತಕರ ಸಂಘದ ದರ ನಿಗದಿ ಕೇಂದ್ರವು ಅಭಿಪ್ರಾಯ ಪಟ್ಟಿದೆ.
ಎಲ್ಲೆಡೆ ವ್ಯಾಪಾರಿಗಳು, ದಲ್ಲಾಳಿಗಳು ಸೇರಿ ಕೃಷಿಕರನ್ನು ಶೋಷಣೆ ಮಾಡುತ್ತಾರೆ. ತಮ್ಮ ಹಿತಾಸಕ್ತಿ ಸಾಧನೆಗಾಗಿ ಕೃಷಿಕರನ್ನು ಬಳಸಿ ಕೊಳ್ಳುತ್ತಾರೆ. ಇದರ ನಡುವೆ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಕೃಷಿಕರ ಹಿತಾಸಕ್ತಿಯನ್ನೇ ಮಾನದಂಡವಾಗಿಟ್ಟುಕೊಂಡು, ಮಲ್ಲಿಗೆ ಬೆಳೆಗಾರರಿಂದ ಹಿಡಿದು, ಹೂವನ್ನು ಕೊಯ್ದು, ಸಂಗ್ರಹ ಮಾಡಿ ಮಾರುಕಟ್ಟೆಗೆ ಒಯ್ಯುವ ತನಕದ ಎಲ್ಲರ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ದರ ಏರಿಸಿದೆ.
ಯಾವುದೇ ಹೂವಿನ ಮಾರುಕಟ್ಟೆಗಳಿಗೆ ಹೋಲಿಸಿದರೆ ದೇಶಕ್ಕೇ ಮಾದರಿಯಾಗಿ, ಕಳೆದ 80 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಮಲ್ಲಿಗೆ ದರ ನಿಗದಿ ಕೇಂದ್ರವು ಯಾವುದೇ ಒಳ ಒಪ್ಪಂದಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ, ಸರ್ವಸಮ್ಮತವಾಗಿ ಕೆಲಸ ನಿರ್ವಹಿಸುತ್ತಿರುವುದು ಸಂತೋಷದ ವಿಷಯ ಎಂದು ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ತಿಳಿಸಿದ್ದಾರೆ.
Udupi Jasmine flower rate will go rocket high from Dec 23rd. The fixed price will be 2,100 Rs.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm