ಬ್ರೇಕಿಂಗ್ ನ್ಯೂಸ್
24-12-21 01:11 pm HK Desk news ಕರಾವಳಿ
ಉಡುಪಿ, ಡಿ.24 : ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಉಡುಪಿ ಕೃಷ್ಣ ಮಠವನ್ನು ಸರಕಾರದ ವಶಕ್ಕೆ ಪಡೆಯಲು ಮುಂದಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದು, ಆ ಪ್ರಯತ್ನವನ್ನು ತಡೆ ಹಾಕಿದ್ದೆ ಎಂದು ಸಿದ್ದರಾಮಯ್ಯ ಸರಕಾರದಲ್ಲಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಕೃಷ್ಣಮಠದಲ್ಲಿ ನಡೆಯುತ್ತಿರುವ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಡಿ.23ರಂದು ಮಾತನಾಡಿದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೆಲವು ಅಚ್ಚರಿಯ ಮಾಹಿತಿಗಳನ್ನು ಹೊರಗೆಡವಿದ್ದಾರೆ. ಸಿದ್ದರಾಮಯ್ಯ ಸರಕಾರ ಕೃಷ್ಣ ಮಠವನ್ನು ಸರಕಾರದ ವಶಕ್ಕೆ ಪಡೆಯುವ ಸಂಚು ನಡೆಸಿತ್ತು. ಆದರೆ ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ಮುಖ್ಯಮಂತ್ರಿಗೆ ಫೋನ್ ಕರೆ ಮಾಡಿ, ಇಂತಹ ಪ್ರಯತ್ನ ನಡೆಸಿದರೆ ಅದಕ್ಕೆ ಮೊದಲು ನಾನೇ ರಾಜಿನಾಮೆ ನೀಡುತ್ತೇನೆ ಎಂದಿದ್ದೆ. ಕೃಷ್ಣ ಮಠವನ್ನು ವಶಕ್ಕೆ ಪಡೆಯುವುದರಿಂದ ದೊಡ್ಡ ವಿವಾದ ಮೈಮೇಲೆ ಎಳೆದುಕೊಳ್ಳುವ ಸಂದರ್ಭ ಬರುತ್ತಿತ್ತು. ಆದರೆ ಅಂಥ ಸಂದರ್ಭ ಬಾರದಂತೆ ತಡೆದು ನಿಲ್ಲಿಸಿದ ತೃಪ್ತಿ ನನಗಿದೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಕಳೆದ ಬಾರಿ ಪಲಿಮಾರು ಮಠಾಧೀಶರ ಪರ್ಯಾಯ ಸಂದರ್ಭದಲ್ಲಿ ಮಧ್ವ ಸರೋವರಕ್ಕೆ ಕೊಳಚೆ ನೀರು ಸೇರುವ ಸಂದರ್ಭ ಎದುರಾಗಿತ್ತು. ಇದನ್ನು ಮನಗಂಡು ನಗರಸಭೆಯಿಂದ 45 ಲಕ್ಷ ರೂ. ಮಂಜೂರು ಮಾಡಿಸಿ, ಅದನ್ನು ನಿವಾರಿಸುವ ಕೆಲಸ ಮಾಡಿದ್ದೇನೆ ಎಂದರು.
ಅಲ್ಲದೆ, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಉಡುಪಿ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೆ. ಇದನ್ನು ಸಹಿಸದ ಕೆಲವರು ನನ್ನ ಶಾಸಕತ್ವ ರದ್ದುಪಡಿಸುವ ಕೋರಿ ಪಿಐಎಲ್ ಹಾಕಿದ್ದರು. ಆದರೆ ಈ ರೀತಿಯ ಕಿಡಿಗೇಡಿ ಪ್ರಯತ್ನಗಳಿಂದ ನನಗೇನೂ ತೊಂದರೆ ಆಗಿಲ್ಲ. ಈ ರೀತಿಯ ಬಾಲಿಶ ಮನಸ್ಸುಳ್ಳವರು ಕೂಡ ನಮ್ಮ ನಡುವೆ ಇದ್ದಾರಲ್ಲಾ ಅನ್ನುವುದು ನನಗೆ ಅಚ್ಚರಿಯಾಗುತ್ತಿದೆ ಎಂದು ಪ್ರಮೋದ್ ಹೇಳಿದರು. ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಮಂಗಳೂರಿನ ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿದ್ದರು.
ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಊಹೋಪೋಹದ ನಡುವೆಯೇ ಕೃಷ್ಣ ಮಠದಲ್ಲೇ ನಿಂತು ಸಿದ್ದರಾಮಯ್ಯ ಸರಕಾರದ ವಿರುದ್ಧ ಹೇಳಿಕೆ ನೀಡಿರುವುದು ಪ್ರಾಮುಖ್ಯತೆ ಪಡೆದಿದೆ.
Former minister Pramod Madhwaraj, said that the erstwhile Congress government was on the verge of taking over the administration of Srikrishna Math. Madhwaraj revealed that the then Congress government headed by Siddaramaiah had conspired to bring the Math under the rule of the department of religious endowments.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm