ಬ್ರೇಕಿಂಗ್ ನ್ಯೂಸ್
25-12-21 08:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ ಇಂಡಿಗೋ ವಿಮಾನದಲ್ಲಿ ಪೈಲಟ್ ಆಗಿದ್ದು ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ವಿಮಾನ ಹೊರಡುವಾಗ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿದ್ದಾರೆ. ದೇಶೀಯ ವಿಮಾನದಲ್ಲಿ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಆದರೆ, ಕರಾವಳಿ ಕರ್ನಾಟಕದ ಜನರ ಸ್ಥಳೀಯ ಭಾಷೆ ಎನ್ನುವ ನೆಲೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಬರುವ ವಿಮಾನದಲ್ಲಿ ಕರಾವಳಿ ಜನರೇ ಹೆಚ್ಚಿರುವುದರಿಂದ ಪೈಲಟ್ ಈ ಬಗ್ಗೆ ಹಿರಿಯಧಿಕಾರಿಗಳ ಅನುಮತಿ ಪಡೆದು ತುಳು ಭಾಷೆಯಲ್ಲಿ ಸೂಚನೆ ನೀಡಿದ್ದಾರೆ.

ಇಂಡಿಗೋ ವಿಮಾನ ಪ್ರತಿ ದಿನವೂ ಎಂಟು ಗಂಟೆಗೆ ಮುಂಬೈನಿಂದ ಹೊರಟು ರಾತ್ರಿ 9.30ಕ್ಕೆ ಮಂಗಳೂರು ತಲುಪುತ್ತದೆ. ಇದರಲ್ಲಿ ಪ್ರದೀಪ್ ಪೈಲಟ್ ಆಗಿದ್ದು ತಾನೊಬ್ಬ ತುಳುವ ಅನ್ನುವ ಅಭಿಮಾನದಿಂದ ಇಂಗ್ಲಿಷ್ ಭಾಷೆಯಲ್ಲಿರುವ ಸೂಚನೆಯನ್ನು ತುಳುವಿನಲ್ಲಿ ಬರೆದು ಓದಿದ್ದಾರೆ.
ಪ್ರದೀಪ್ ಉಡುಪಿ ಮೂಲದ ಕುಟುಂಬದವರಾಗಿದ್ದು ಮುಂಬೈನಲ್ಲಿಯೇ ಬೆಳೆದು ಕಲಿತು ಪೈಲಟ್ ಉದ್ಯೋಗಕ್ಕೆ ಸೇರಿದ್ದಾರೆ. ಮಾತೆರೆಗ್ಲಾ ಸೊಲ್ಮೆಲು ಎನ್ನುತ್ತಾ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿರುವ 45 ಸೆಕಂಡಿನ ವಿಡಿಯೋ ಕರಾವಳಿಯಲ್ಲಿ ವೈರಲ್ ಆಗಿದೆ. ಹೆಚ್ಚಿನವರು ತಮ್ಮ ವಾಟ್ಸಪ್ ಸ್ಟೇಟಸ್ ಹಾಕಿ ಅಭಿಮಾನ ಮೆರೆದಿದ್ದಾರೆ.
Mangalore based Indigo pilot welcomes passenger in Tulu wins heart, video goes viral over internet. The flight was from Mumbai to Mangalore. Udupi based Pradeep is the a pilot.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm