ಬ್ರೇಕಿಂಗ್ ನ್ಯೂಸ್
25-12-21 08:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ ಇಂಡಿಗೋ ವಿಮಾನದಲ್ಲಿ ಪೈಲಟ್ ಆಗಿದ್ದು ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ವಿಮಾನ ಹೊರಡುವಾಗ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿದ್ದಾರೆ. ದೇಶೀಯ ವಿಮಾನದಲ್ಲಿ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಆದರೆ, ಕರಾವಳಿ ಕರ್ನಾಟಕದ ಜನರ ಸ್ಥಳೀಯ ಭಾಷೆ ಎನ್ನುವ ನೆಲೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಬರುವ ವಿಮಾನದಲ್ಲಿ ಕರಾವಳಿ ಜನರೇ ಹೆಚ್ಚಿರುವುದರಿಂದ ಪೈಲಟ್ ಈ ಬಗ್ಗೆ ಹಿರಿಯಧಿಕಾರಿಗಳ ಅನುಮತಿ ಪಡೆದು ತುಳು ಭಾಷೆಯಲ್ಲಿ ಸೂಚನೆ ನೀಡಿದ್ದಾರೆ.

ಇಂಡಿಗೋ ವಿಮಾನ ಪ್ರತಿ ದಿನವೂ ಎಂಟು ಗಂಟೆಗೆ ಮುಂಬೈನಿಂದ ಹೊರಟು ರಾತ್ರಿ 9.30ಕ್ಕೆ ಮಂಗಳೂರು ತಲುಪುತ್ತದೆ. ಇದರಲ್ಲಿ ಪ್ರದೀಪ್ ಪೈಲಟ್ ಆಗಿದ್ದು ತಾನೊಬ್ಬ ತುಳುವ ಅನ್ನುವ ಅಭಿಮಾನದಿಂದ ಇಂಗ್ಲಿಷ್ ಭಾಷೆಯಲ್ಲಿರುವ ಸೂಚನೆಯನ್ನು ತುಳುವಿನಲ್ಲಿ ಬರೆದು ಓದಿದ್ದಾರೆ.
ಪ್ರದೀಪ್ ಉಡುಪಿ ಮೂಲದ ಕುಟುಂಬದವರಾಗಿದ್ದು ಮುಂಬೈನಲ್ಲಿಯೇ ಬೆಳೆದು ಕಲಿತು ಪೈಲಟ್ ಉದ್ಯೋಗಕ್ಕೆ ಸೇರಿದ್ದಾರೆ. ಮಾತೆರೆಗ್ಲಾ ಸೊಲ್ಮೆಲು ಎನ್ನುತ್ತಾ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿರುವ 45 ಸೆಕಂಡಿನ ವಿಡಿಯೋ ಕರಾವಳಿಯಲ್ಲಿ ವೈರಲ್ ಆಗಿದೆ. ಹೆಚ್ಚಿನವರು ತಮ್ಮ ವಾಟ್ಸಪ್ ಸ್ಟೇಟಸ್ ಹಾಕಿ ಅಭಿಮಾನ ಮೆರೆದಿದ್ದಾರೆ.
Mangalore based Indigo pilot welcomes passenger in Tulu wins heart, video goes viral over internet. The flight was from Mumbai to Mangalore. Udupi based Pradeep is the a pilot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm