ಬ್ರೇಕಿಂಗ್ ನ್ಯೂಸ್
25-12-21 08:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ ಇಂಡಿಗೋ ವಿಮಾನದಲ್ಲಿ ಪೈಲಟ್ ಆಗಿದ್ದು ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ವಿಮಾನ ಹೊರಡುವಾಗ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿದ್ದಾರೆ. ದೇಶೀಯ ವಿಮಾನದಲ್ಲಿ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಆದರೆ, ಕರಾವಳಿ ಕರ್ನಾಟಕದ ಜನರ ಸ್ಥಳೀಯ ಭಾಷೆ ಎನ್ನುವ ನೆಲೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಬರುವ ವಿಮಾನದಲ್ಲಿ ಕರಾವಳಿ ಜನರೇ ಹೆಚ್ಚಿರುವುದರಿಂದ ಪೈಲಟ್ ಈ ಬಗ್ಗೆ ಹಿರಿಯಧಿಕಾರಿಗಳ ಅನುಮತಿ ಪಡೆದು ತುಳು ಭಾಷೆಯಲ್ಲಿ ಸೂಚನೆ ನೀಡಿದ್ದಾರೆ.

ಇಂಡಿಗೋ ವಿಮಾನ ಪ್ರತಿ ದಿನವೂ ಎಂಟು ಗಂಟೆಗೆ ಮುಂಬೈನಿಂದ ಹೊರಟು ರಾತ್ರಿ 9.30ಕ್ಕೆ ಮಂಗಳೂರು ತಲುಪುತ್ತದೆ. ಇದರಲ್ಲಿ ಪ್ರದೀಪ್ ಪೈಲಟ್ ಆಗಿದ್ದು ತಾನೊಬ್ಬ ತುಳುವ ಅನ್ನುವ ಅಭಿಮಾನದಿಂದ ಇಂಗ್ಲಿಷ್ ಭಾಷೆಯಲ್ಲಿರುವ ಸೂಚನೆಯನ್ನು ತುಳುವಿನಲ್ಲಿ ಬರೆದು ಓದಿದ್ದಾರೆ.
ಪ್ರದೀಪ್ ಉಡುಪಿ ಮೂಲದ ಕುಟುಂಬದವರಾಗಿದ್ದು ಮುಂಬೈನಲ್ಲಿಯೇ ಬೆಳೆದು ಕಲಿತು ಪೈಲಟ್ ಉದ್ಯೋಗಕ್ಕೆ ಸೇರಿದ್ದಾರೆ. ಮಾತೆರೆಗ್ಲಾ ಸೊಲ್ಮೆಲು ಎನ್ನುತ್ತಾ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿರುವ 45 ಸೆಕಂಡಿನ ವಿಡಿಯೋ ಕರಾವಳಿಯಲ್ಲಿ ವೈರಲ್ ಆಗಿದೆ. ಹೆಚ್ಚಿನವರು ತಮ್ಮ ವಾಟ್ಸಪ್ ಸ್ಟೇಟಸ್ ಹಾಕಿ ಅಭಿಮಾನ ಮೆರೆದಿದ್ದಾರೆ.
Mangalore based Indigo pilot welcomes passenger in Tulu wins heart, video goes viral over internet. The flight was from Mumbai to Mangalore. Udupi based Pradeep is the a pilot.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm