ಬ್ರೇಕಿಂಗ್ ನ್ಯೂಸ್
27-12-21 08:44 pm Mangalore Correspondent ಕರಾವಳಿ
ಉಳ್ಳಾಲ, ಡಿ.27 : ಕೋಟೆಕಾರು ಪಟ್ಟಣ ಪಂಚಾಯತ್ ಸ್ಥಳೀಯಾಡಳಿತಕ್ಕೆ ಶಾಂತಿಯುತ ಚುನಾವಣೆ ನಡೆದಿದ್ದು ಶೇ.66.16 ರಷ್ಟು ಮತದಾನವಾಗಿದೆ. ನೂತನ ವಧು ಸೇರಿ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿದ್ದಾರೆ.
ಉಳ್ಳಾಲ ಕೋಟೆಕಾರ್ ಪಟ್ಟಣ ಪಂಚಾಯತ್ ಗೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ.66.16 ಮತದಾನ ಆಗಿದೆ. ಪಂಚಾಯತ್ ವ್ಯಾಪ್ತಿಯಲ್ಲಿ 7,710 ಪುರುಷ ಹಾಗೂ 8,354 ಮಹಿಳಾ ಮತದಾರರು ಇದ್ದು, ಈ ಪೈಕಿ 5002 ಪುರುಷರು ಹಾಗೂ 5626 ಮಹಿಳಾ ಮತದಾರರು ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಿದ್ದಾರೆ. ಮುಂಜಾನೆ ಮಂದಗತಿಯಲ್ಲಿ ಆರಂಭಗೊಂಡ ಕೋಟೆಕಾರ್ ಪಟ್ಟಣ ಪಂಚಾಯಿತಿ ಚುನಾವಣೆ 11 ಗಂಟೆಯ ಬಳಿಕ ಬಿರುಸಿನಿಂದ ಸಾಗಿತ್ತು.

ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ದಾಖಲೆ ಸೃಷ್ಟಿಸಿದ್ದಾರೆ. 8ನೇ ವಾರ್ಡಿನ ಕೋಟೆಕಾರು ಸರಕಾರಿ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಇಂದು ಅಡ್ಕ ಭಗವತಿ ಸಭಾಂಗಣದಲ್ಲಿ ನಾಗೇಶ್ ಅವರೊಂದಿಗೆ ಹಸೆಮಣೆ ಏರಿದ ನೂತನ ವಧು ಶ್ರದ್ಧಾ ಅವರು ಮದುವೆ ಮಂಟಪದಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಿ ಗಮನಸೆಳೆದರು. ಮಾಡೂರು, ಉಚ್ಚಿಲ, ಅಜ್ಜಿನಡ್ಕ, ಪಾನೀರ್, ಕೋಟೆಕಾರ್ ಪಟ್ಟಣ ಪಂಚಾಯಿತಿ ಮತಗಟ್ಟೆ ಗಳಲ್ಲಿ ಹಿರಿಯ ನಾಗರಿಕರು ಹೆಚ್ಚು ಮತ ಚಲಾವಣೆ ಮಾಡಿದ್ದಾರೆ. ಹಿರಿಯ ನಾಗರಿಕರಿಗಾಗಿ ವಾಹನ ಹಾಗೂ ಗಾಲಿ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು.

6 ಮತ್ತು 12 ನೇ ವಾರ್ಡಿನಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು ಇದಕ್ಕೆ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಲ್ಲಿನ ಮತಗಟ್ಟೆಗಳಲ್ಲಿ ಗೊಂದಲ ಉಂಟಾಗುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ವಿರೋಧ ಕೇಳಿಬಂದ ಕಾರಣಕ್ಕೆ ವೈದ್ಯಕೀಯ ವಿದ್ಯಾರ್ಥಿಗಳು ಮತದಾನದಲ್ಲಿ ಪಾಲ್ಗೊಂಡಿಲ್ಲವೆಂದು ತಿಳಿದುಬಂದಿದೆ.

17 ವಾರ್ಡ್ ಗಳ ಚುನಾವಣೆಗೆ 18 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಎಲ್ಲೆಡೆ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆದ ಬಗೆ ವರದಿ ಆಗಿಲ್ಲ.
ಕೋಟೆಕಾರ್ ಪಟ್ಟಣ ಪಂಚಾಯಿತಿಯಲ್ಲಿರುವ 17 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ 45 ಮಂದಿ ಸ್ಪರ್ಧಿಸಿದ್ದರು. ಇವುಗಳಲ್ಲಿ ಗೆಲ್ಲುವ ಕುದುರೆ ಯಾವುದು ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ. ಅಭ್ಯರ್ಥಿಗಳ ಅದೃಷ್ಟ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಡಿ.30 ರಂದು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
Mangalore 66.16 of voting in kotekar panchayat today. Newly married couple directly came to the voting centre to cast their votes.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm