ಬ್ರೇಕಿಂಗ್ ನ್ಯೂಸ್
27-12-21 08:44 pm Mangalore Correspondent ಕರಾವಳಿ
ಉಳ್ಳಾಲ, ಡಿ.27 : ಕೋಟೆಕಾರು ಪಟ್ಟಣ ಪಂಚಾಯತ್ ಸ್ಥಳೀಯಾಡಳಿತಕ್ಕೆ ಶಾಂತಿಯುತ ಚುನಾವಣೆ ನಡೆದಿದ್ದು ಶೇ.66.16 ರಷ್ಟು ಮತದಾನವಾಗಿದೆ. ನೂತನ ವಧು ಸೇರಿ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿದ್ದಾರೆ.
ಉಳ್ಳಾಲ ಕೋಟೆಕಾರ್ ಪಟ್ಟಣ ಪಂಚಾಯತ್ ಗೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ.66.16 ಮತದಾನ ಆಗಿದೆ. ಪಂಚಾಯತ್ ವ್ಯಾಪ್ತಿಯಲ್ಲಿ 7,710 ಪುರುಷ ಹಾಗೂ 8,354 ಮಹಿಳಾ ಮತದಾರರು ಇದ್ದು, ಈ ಪೈಕಿ 5002 ಪುರುಷರು ಹಾಗೂ 5626 ಮಹಿಳಾ ಮತದಾರರು ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಿದ್ದಾರೆ. ಮುಂಜಾನೆ ಮಂದಗತಿಯಲ್ಲಿ ಆರಂಭಗೊಂಡ ಕೋಟೆಕಾರ್ ಪಟ್ಟಣ ಪಂಚಾಯಿತಿ ಚುನಾವಣೆ 11 ಗಂಟೆಯ ಬಳಿಕ ಬಿರುಸಿನಿಂದ ಸಾಗಿತ್ತು.

ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ದಾಖಲೆ ಸೃಷ್ಟಿಸಿದ್ದಾರೆ. 8ನೇ ವಾರ್ಡಿನ ಕೋಟೆಕಾರು ಸರಕಾರಿ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಇಂದು ಅಡ್ಕ ಭಗವತಿ ಸಭಾಂಗಣದಲ್ಲಿ ನಾಗೇಶ್ ಅವರೊಂದಿಗೆ ಹಸೆಮಣೆ ಏರಿದ ನೂತನ ವಧು ಶ್ರದ್ಧಾ ಅವರು ಮದುವೆ ಮಂಟಪದಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಿ ಗಮನಸೆಳೆದರು. ಮಾಡೂರು, ಉಚ್ಚಿಲ, ಅಜ್ಜಿನಡ್ಕ, ಪಾನೀರ್, ಕೋಟೆಕಾರ್ ಪಟ್ಟಣ ಪಂಚಾಯಿತಿ ಮತಗಟ್ಟೆ ಗಳಲ್ಲಿ ಹಿರಿಯ ನಾಗರಿಕರು ಹೆಚ್ಚು ಮತ ಚಲಾವಣೆ ಮಾಡಿದ್ದಾರೆ. ಹಿರಿಯ ನಾಗರಿಕರಿಗಾಗಿ ವಾಹನ ಹಾಗೂ ಗಾಲಿ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು.

6 ಮತ್ತು 12 ನೇ ವಾರ್ಡಿನಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು ಇದಕ್ಕೆ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಲ್ಲಿನ ಮತಗಟ್ಟೆಗಳಲ್ಲಿ ಗೊಂದಲ ಉಂಟಾಗುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ವಿರೋಧ ಕೇಳಿಬಂದ ಕಾರಣಕ್ಕೆ ವೈದ್ಯಕೀಯ ವಿದ್ಯಾರ್ಥಿಗಳು ಮತದಾನದಲ್ಲಿ ಪಾಲ್ಗೊಂಡಿಲ್ಲವೆಂದು ತಿಳಿದುಬಂದಿದೆ.

17 ವಾರ್ಡ್ ಗಳ ಚುನಾವಣೆಗೆ 18 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಎಲ್ಲೆಡೆ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆದ ಬಗೆ ವರದಿ ಆಗಿಲ್ಲ.
ಕೋಟೆಕಾರ್ ಪಟ್ಟಣ ಪಂಚಾಯಿತಿಯಲ್ಲಿರುವ 17 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ 45 ಮಂದಿ ಸ್ಪರ್ಧಿಸಿದ್ದರು. ಇವುಗಳಲ್ಲಿ ಗೆಲ್ಲುವ ಕುದುರೆ ಯಾವುದು ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ. ಅಭ್ಯರ್ಥಿಗಳ ಅದೃಷ್ಟ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಡಿ.30 ರಂದು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
Mangalore 66.16 of voting in kotekar panchayat today. Newly married couple directly came to the voting centre to cast their votes.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm