ಬ್ರೇಕಿಂಗ್ ನ್ಯೂಸ್
28-12-21 09:36 pm HK Desk news ಕರಾವಳಿ
ಉಡುಪಿ, ಡಿ.28 : ಇತ್ತೀಚಿಗೆ ಜೈಭೀಮ್ ಅನ್ನೋ ಸಿನಿಮಾ ಸೂಪರ್ ಹಿಟ್ ಆಗಿತ್ತು. ಸಿನಿಮಾದಲ್ಲಿ ದಲಿತ ವರ್ಗವನ್ನು ತುಳಿಯುವ, ಪೊಲೀಸರು ಶೋಷಣೆ ಮಾಡುವ ನೈಜ ಘಟನೆ ಆಧರಿಸಿದ ಕತೆಯಿತ್ತು. ಅದೇ ಸಿನಿಮಾದ ಅಣಕು ಪ್ರದರ್ಶನದ ರೀತಿಯಲ್ಲಿ ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮದಲ್ಲಿ ಬುಡಕಟ್ಟು ಜನಾಂಗ ಕೊರಗ ಸಮುದಾಯದ ಜನರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ ಘಟನೆ ನಡೆದಿದೆ.
ಕೊರಗ ಜನಾಂಗದ ಮನೆಯೊಂದರಲ್ಲಿ ಮದುವೆಯ ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸರು ದಾಳಿ ಮಾಡಿ ಮದುಮಗ ಸೇರಿದಂತೆ ಮಹಿಳೆಯರು, ಮುದುಕರ ಮೇಲೆ ಹಲ್ಲೆ ನಡೆಸಿದ್ದಾರೆ. ವಿನಾಕಾರಣ ಲಾಠಿ ಬೀಸಿದ ಪೊಲೀಸರ ಮೇಲೆ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿರುವ ರಾಜೇಶ್ ಕೊರಗ ಎಂಬವರಿಗೆ ಬುಧವಾರ ಮದುವೆ ಇದ್ದುದರಿಂದ ಸೋಮವಾರ ರಾತ್ರಿ ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಅಳವಡಿಸಲಾಗಿತ್ತು. ಈ ಬಗ್ಗೆ ಪೊಲೀಸರಿಂದ ಅನುಮತಿ ಪಡೆದಿದ್ದು ರಾತ್ರಿ 11 ಗಂಟೆಯ ವರೆಗೆ ಮೆಹಂದಿ ನಡೆಸಲು ಅನುಮತಿ ಪಡೆದಿದ್ದರು ಎನ್ನಲಾಗಿದೆ. ಆದರೆ ಪೊಲೀಸರಿಗೆ ಯಾರೋ ದೂರು ನೀಡಿದ್ದಾರೆ ಎಂಬ ಕಾರಣಕ್ಕೆ ಕೋಟ ಠಾಣಾ ಎಸೈ ಸಂತೋಷ್ ಮದುವೆ ಮನೆಗೆ ದಾಳಿ ಇಟ್ಟಿದ್ದಾರೆ. ಅಲ್ಲಿ ನೆರೆದಿದ್ದ ಜನರಿಗೆ ಊಟವನ್ನು ಮಾಡಲು ಬಿಡದೆ ಹಲ್ಲೆ ನಡೆಸಿದ್ದು ಮದುಮಗ ಮಾತ್ರವಲ್ಲ ಅಲ್ಲಿದ್ದ ವೃದ್ಧರು ಮಹಿಳೆಯರ ಮೇಲೆ ಲಾಠಿ ಬೀಸಿದ್ದಾರೆ.

ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಷ್ಟೇ ಅಲ್ಲ, ರಾಜ್ಯದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಇರುವ ಊರಿನಲ್ಲೇ ಘಟನೆ ನಡೆದಿದೆ. ಘಟನೆಯ ಬಗ್ಗೆ ಆಕ್ರೋಶ ಹೊರಬರುತ್ತಿದ್ದಂತೆ, ಡಿವೈಎಸ್ಪಿ ನೇತೃತ್ವದಲ್ಲಿ ತಂಡ ತೆರಳಿ ಕೊರಗ ಸಮುದಾಯದವರಿಂದ ಮಾಹಿತಿ ಪಡೆದಿದ್ದಾರೆ.

ನೈಟ್ ಕರ್ಫ್ಯೂ ಜಾರಿಯಲ್ಲಿ ಇಲ್ಲದಿದ್ದರೂ, ಜಿಲ್ಲೆಯ ಪೊಲೀಸರು ಮದುವೆ ಮನೆಗೆ ನುಗ್ಗಿ ಲಾಠಿ ಬೀಸಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಬಗ್ಗೆ ಸಮಗ್ರ ತನಿಖೆಗೆ ಸಮಾಜ ಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
Kota police reportedly created ruckus in the house of a person belonging to Koraga community where Mehendi function was in progress on Monday December 27 night. It has been alleged that they wielded lathis on the people present in the programme. The police took this extreme step as DJ music was being played at the Mehendi function at Koraga colony which falls under Kotathattu gram panchayat.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm