ಬ್ರೇಕಿಂಗ್ ನ್ಯೂಸ್
15-09-20 07:30 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 15: ಏಕಕಾಲಕ್ಕೆ ಎರಡೂ ಕೈಗಳಿಂದ ಬರೆಯಲು ಸಾಧ್ಯವೇ..? ಬರೆಯಲು ಸಾಧ್ಯ. ಅಷ್ಟೇ ಅಲ್ಲ, ಬಲಗೈಯಷ್ಟೇ ಎಡಗೈನಲ್ಲೂ ಒಂದೇ ಪ್ರಕಾರವಾಗಿ ಬರೆಯಬಹುದು ಎಂಬುದನ್ನು ತೋರಿಸಿದ್ದಾರೆ ಮಂಗಳೂರಿನ ಸ್ವರೂಪ ಅಧ್ಯಯನ ಕೇಂದ್ರದ ಮಕ್ಕಳು. ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್- ಸುಮಾಡ್ಕರ್ ದಂಪತಿಯ ಪುತ್ರಿ 16 ವರ್ಷದ ಆದಿ ಸ್ವರೂಪ ಎರಡು ಕೈಗಳಿಂದ ಬರೆಯುವುದರಲ್ಲಿ ಜಗತ್ತಿನಲ್ಲೇ ವಿಶಿಷ್ಟ ದಾಖಲೆ ಮಾಡಿದ್ದಾರೆ.
ಎರಡು ವರ್ಷಗಳಿಂದ ಎರಡು ಕೈಗಳಲ್ಲಿ ಬರೆಯಲು ಆರಂಭಿಸಿದ ಆದಿ, ಈಗ ಪೂರ್ಣ ಮಟ್ಟದ ಬರಹಗಾರ್ತಿ. ಸಾಮಾನ್ಯರು ಒಂದು ನಿಮಿಷಕ್ಕೆ 35 ಪದಗಳನ್ನು ಬರೆಯೋದಾದ್ರೆ ಈಕೆ ನಿಮಿಷದಲ್ಲಿ 45 ಪದಗಳನ್ನು ಬರೆಯುವ ಮೂಲಕ ದಾಖಲೆ ಮಾಡಿದ್ದಾರೆ. ಇದನ್ನು ಉತ್ತರ ಪ್ರದೇಶದ ಬರೇಲಿಯಾ ಲಾಟಾ ಫೌಂಡೇಶನ್ ಸಂಸ್ಥೆ ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಎಂದು ಘೋಷಿಸಿದೆ.


ಎರಡೂ ಕೈಯಲ್ಲಿ ಹತ್ತು ವಿಭಾಗದಲ್ಲಿ ಬರೆಯುವುದನ್ನು ಅಭ್ಯಾಸ ಮಾಡಿರುವ ಈಕೆಯದ್ದು ಊಹೆಗೆ ನಿಲುಕದ ಜ್ಞಾನ. ಯುನಿ ಡೈರೆಕ್ಷನಲ್, ಒಪೋಸಿಟ್ ಡೈರೆಕ್ಷನ್, ರೈಟ್ ಹ್ಯಾಂಡ್ ಸ್ಪೀಡ್, ಲೆಫ್ಟ್ ಹ್ಯಾಂಡ್ ಸ್ಪೀಡ್, ರಿವರ್ಸ್ ರನ್ನಿಂಗ್, ಮಿರರ್ ಇಮೇಜ್, ಹೆಟೆರೋಟೋಪಿಕ್, ಹೆಟೆರೋ ಲಿಂಗ್ವಿಸ್ಟಿಕ್, ಎಕ್ಸ್ ಚೇಂಜ್, ಡ್ಯಾನ್ಸಿಂಗ್ ಮತ್ತು ಬ್ಲೈಂಡ್ ಫೋಲ್ಡಿಂಗ್ ಎನ್ನುವ ಹತ್ತು ವಿಧಾನಗಳಲ್ಲಿ ವೇಗವಾಗಿ ಬರೆಯುತ್ತಾಳೆ. ಇದಲ್ಲದೆ, ಸಾಹಿತ್ಯ, ಸಂಗೀತ, ಯಕ್ಷಗಾನ, ಮಿಮಿಕ್ರಿ, ಬೀಟ್ ಬಾಕ್ಸ್, ಅದ್ಭುತ ನೆನಪುಶಕ್ತಿಯ ತ್ರಯೋದಶ ಅವಧಾನ, ರೂಬಿಕ್ ಕ್ಯೂಬ್ ಮುಂತಾದ ವಿಷಯಗಳ ಜೊತೆಗೆ ಈವರೆಗೂ ಶಾಲೆಗೇ ಹೋಗದೇ ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ನಿರರ್ಗಳವಾಗಿ ಕತೆ, ಕವನಗಳನ್ನು ಬರೆಯುವ ಸಾಮರ್ಥ್ಯ ಪಡೆದಿದ್ದಾಳೆ. ಈ ಬಾರಿ ಹತ್ತನೇ ತರಗತಿಯ ಪರೀಕ್ಷೆಯನ್ನು ವಿಶೇಷವಾಗಿ ಎರಡೂ ಕೈಗಳಲ್ಲಿ ಬರೆದು ಅತಿ ವೇಗದಿಂದ ಮುಗಿಸುವ ಇರಾದೆ ಹೊಂದಿದ್ದಾಳೆ.
ನೆನಪು ಶಕ್ತಿಗೂ ವಿಶೇಷ ತಂತ್ರ ಬಳಸುವ ಸ್ವರೂಪ ಅಧ್ಯಯನ ಕೇಂದ್ರ, ಈಕೆಗೆ ಜ್ಞಾನದ ಧಾರೆಯನ್ನೇ ಎರೆದಿದ್ದಾರೆ. ರಾಜ್ಯ, ದೇಶದ ಎಲ್ಲ ತಾಲೂಕು, ಜಿಲ್ಲೆಗಳ ಹೆಸರನ್ನು ಪಟಪಟನೇ ಹೇಳುವುದಲ್ಲದೆ, 64 ವಿದ್ಯೆ, ಸಂವತ್ಸರ, ರಾಮಾಯಣ, ಮಹಾಭಾರತದ ವಿಚಾರಗಳನ್ನೂ ಹೇಳಬಲ್ಲಳು. ವಿಶ್ವಲ್ ಮೆಮೊರಿ ಆರ್ಟ್ ಮೂಲಕ ಇಡೀ ಪಠ್ಯ ಪುಸ್ತಕವನ್ನು ಒಂದೇ ಹಾಳೆಗೆ ಇಳಿಸಿದ್ದು ಈಕೆಯ ಮತ್ತೊಂದು ದಾಖಲೆ. ಇವೆಲ್ಲದರ ಜೊತೆಗೆ ಏಕಕಾಲಕ್ಕೆ 13 ಮಂದಿ ಹೇಳಿದ್ದನ್ನು ಕ್ಷಣದಲ್ಲಿ ನೆನಪಿನಲ್ಲಿ ದಾಖಲಿಸಿ, ಸ್ಮರಣೆ ಮಾಡಿ ಹೇಳುವ ವಿಶಿಷ್ಟ ತ್ರಯೋದಶ ಅವಧಾನವನ್ನೂ ಈಕೆ ಅಭ್ಯಾಸ ಮಾಡಿಕೊಂಡಿದ್ದಾಳೆ. ಒಟ್ಟಿನಲ್ಲಿ ಈಕೆಯ. ಸಾಧನೆ ಗಿನ್ನೆಸ್ ವರ್ಲ್ಡ್ ರೆಕಾರ್ಡನ್ನು ಮೀರಿಸುವ ರೀತಿಯಿದೆ ಎನ್ನುವುದಕ್ಕೆ ಅಡ್ಡಿಯಿಲ್ಲ.
Join our WhatsApp group for latest news updates
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm