ಬ್ರೇಕಿಂಗ್ ನ್ಯೂಸ್
29-12-21 09:00 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಡಿ.29 : ಅಪಘಾತದಲ್ಲಿ ಮೃತಪಟ್ಟ ಯುವಕನೊಬ್ಬನ ದೇಹದ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಮಂಗಳೂರು ಮತ್ತು ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ರವಾನಿಸಲಾಯಿತು.
ಡಿ.26ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಮೂರ್ಜೆ ನಿವಾಸಿ ಸತೀಶ್ (32) ಎಂಬವರು ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿನ ವೈದ್ಯರು ಯುವಕನ ತಲೆಗೆ ಪೆಟ್ಟಾಗಿದ್ದರಿಂದ ಮೆದುಳು ನಿಷ್ಕ್ರಿಯವಾಗಿದೆ ಎಂದು ಘೋಷಿಸಿದ್ದರು. ಇದರಂತೆ, ಕುಟುಂಬಸ್ಥರು ಯುವಕನ ದೇಹದ ಅಂಗಗಳನ್ನು ದಾನ ಮಾಡಲು ಮುಂದಾಗಿದ್ದರು.
ಸತೀಶ್ ಅವರ ಹೃದಯವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದರೆ, ಲಿವರ್ ಅನ್ನು ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಗಿದೆ. ಕಿಡ್ನಿಗಳನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಮತ್ತು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಗತ್ಯ ಉಳ್ಳವರಿಗೆ ಅಂಗಗಳನ್ನು ರವಾನೆ ಮಾಡಿದ್ದು, ಇದಕ್ಕಾಗಿ ಬುಧವಾರ ಬೆಳಗ್ಗೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಮತ್ತು ಮಣಿಪಾಲಕ್ಕೆ ಮುಟ್ಟಿಸಲು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರು, ಅಲ್ಲಿನ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Punjalkatte youth dies of accident donates organs, deliverd to hospital in Bangalore and Manipal. Satish had died of road accident on December 26th.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm