ಬ್ರೇಕಿಂಗ್ ನ್ಯೂಸ್
31-12-21 10:29 pm HK Desk news ಕರಾವಳಿ
ಉಡುಪಿ, ಡಿ.31 : ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ವಿವಾದಕ್ಕೆ ತಿರುಗುತ್ತಲೇ ದೂರು- ಪ್ರತಿ ದೂರು ದಾಖಲಾಗಿದೆ. ಪೊಲೀಸರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ, ಪೊಲೀಸರು ಕೂಡ ತಮ್ಮ ಮೇಲೆ ಅಲ್ಲಿನ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಪ್ರತಿ ದೂರು ದಾಖಲಿಸಿದ್ದಾರೆ. ಕೊರಗ ಕಾಲನಿಯ ನಿವಾಸಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು ಈಗ ರಾಜ್ಯದ ಗಮನ ಸೆಳೆಯುವಂತೆ ಮಾಡಿದೆ.
ಘಟನೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಟ್ವೀಟ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಹರಿಹಾಯ್ದಿದ್ದಾರೆ. ಪೊಲೀಸರ ಈ ಕೃತ್ಯ ನಾಚಿಕೆಗೇಡು, ಅಮಾನವೀಯ. ಪೊಲೀಸರು ದಾಖಲಿಸಿದ ಪ್ರಕರಣವನ್ನು ತಕ್ಷಣ ವಾಪಸ್ ಪಡೆಯಬೇಕು. ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿರುವ ಸಿದ್ದರಾಮಯ್ಯ, ಕೋಟ ಶ್ರೀನಿವಾಸ ಪೂಜಾರಿ ಗಮನಕ್ಕೆ ಬರದೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಯೇ ? ಹಾಗೆ ನಡೆದಿದ್ದರೆ ಕೋಟ ಒಬ್ಬ ಅಸಮರ್ಥ ಸಚಿವ. ಹಿಂದುಗಳೆಲ್ಲ ಒಂದು ಎನ್ನುವ ಬಿಜೆಪಿಯವರೇ ನಿಮ್ಮೊಳಗೆ ಕೊರಗರು ಸೇರಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.


ಸಿದ್ದರಾಮಯ್ಯ ಟ್ವೀಟ್ ಮೂಲಕ ಖಡಕ್ ಪ್ರಶ್ನೆ ಮುಂದಿಟ್ಟಿರುವುದು ಈಗ ವೈರಲ್ ಆಗಿದೆ. ಅಲ್ಲದೆ, ಸಚಿವ ಕೋಟ ಅವರ ಊರಿನಲ್ಲೇ ಈ ಘಟನೆ ನಡೆದಿರುವ ಹಿನ್ನೆಲೆಯಲ್ಲಿ ಸಚಿವರಿಗೆ ಇರಿಸು ಮುರಿಸು ತಂದಿದೆ. ಮೆಹಂದಿ ಪಾರ್ಟಿಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು ವಿವಾದ ಆಗುತ್ತಲೇ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಕೊರಗ ಸಮುದಾಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡ ಸ್ಥಳಕ್ಕೆ ಭೇಟಿ ಇತ್ತು ಮಾಹಿತಿ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಆಶ್ವಾಸನೆ ನೀಡಿದ್ದರು.


ಆದರೆ ಇದರ ಬೆನ್ನಲ್ಲೇ ಲಾಠಿಚಾರ್ಜ್ ನಲ್ಲಿ ಭಾಗಿಯಾಗಿದ್ದ ಕೋಟ ಠಾಣೆಯ ಕಾನ್ ಸ್ಟೇಬಲ್ ಜಯರಾಮ್, ಕಾಲನಿ ನಿವಾಸಿಗಳಿಂದಲೇ ತಮ್ಮ ಮೇಲೆ ಹಲ್ಲೆಯಾಗಿದೆ ಎಂದು ಪ್ರತಿ ದೂರು ನೀಡಿದ್ದು ಕೋಟ ಠಾಣೆಯಲ್ಲಿ ದಾಖಲಾಗಿದೆ. ಈ ವಿಚಾರ ಈಗ ರಾಜಕೀಯ ಬಣ್ಣಕ್ಕೆ ತಿರುಗಿದ್ದು, ಕಾಂಗ್ರೆಸ್ ನಾಯಕರು ಹಿಂದುಳಿದ ವರ್ಗದ ಮೇಲಾದ ಅನ್ಯಾಯದಲ್ಲಿ ಬಿಜೆಪಿ ಸರಕಾರ ಪೊಲೀಸರ ಪರ ವಹಿಸುತ್ತಿದೆಯೇ ಎಂದು ಪ್ರಶ್ನೆ ಮಾಡಿದೆ.
ಎಸ್ ಸಿಪಿ/ಟಿಎಸ್ ಪಿ ಕಾಯ್ದೆ ಸೇರಿದಂತೆ ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳಿಗೆ ಹಣ ಮಂಜೂರು ಮಾಡದೆ ಆರ್ಥಿಕವಾಗಿ ದಲಿತರನ್ನು ಸಾಯಿಸುತ್ತಿರುವ @BJP4Karnataka ಸರ್ಕಾರ,
— Siddaramaiah (@siddaramaiah) December 31, 2021
ಈಗ ಪೊಲೀಸರಿಂದಲೂ ದೌರ್ಜನ್ಯ ನಡೆಸಲು ಹೊರಟಂತಿದೆ.
6/6#ದಲಿತವಿರೋಧಿ_ಬಿಜೆಪಿ pic.twitter.com/kND1TOm3ko
Kundapur Police Assault Guests at Koraga community Mehandi Function, Congress leader Siddaramaiah slams BJP leaders for atrocity.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm